ಸಿಎಂ, ಡಿಸಿಎಂಗೆ ಡ್ರಿಲ್ ಮಾಡಿಸಿ: ರಾಜಕಾರಣಕ್ಕಾಗಿ ಪತ್ರ ಬರೆದರೆ ಪಾಸ್ಪೋರ್ಟ್ ರದ್ದಾಗಲ್ಲ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ, ಮೇ 26: ಕರ್ನಾಟಕ ರಾಜ್ಯ ಪೊಲೀಸರು ಪ್ರತಿ ಎರಡು ಗಂಟೆಗೆ ಡ್ರೀಲ್ ಮಾಡಬೇಕು ಎಂಬ ಆದೇಶ ಕುರಿತಂತೆ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಪೊಲೀಸರಿಗೆ ಸಾಕಷ್ಟು ಒತ್ತಡ ಇದೆ ಎಂದು ವಾಸ್ತವದ ಕೆಲವು ಸ್ಥಿತಿಗಳ ಬಗ್ಗೆ ಅವರು ಮಾತನಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಡ್ರೀಲ್ ಮಾಡಿಸಬೇಕು ಎಂದು ಆದೇಶ ಕುರಿತು ಲೇವಡಿ ಮಾಡಿದರು.

ಸದ್ಯ ರಾಜ್ಯದಲ್ಲಿ ಪೊಲೀಸರ ಮೇಲೆ ಸಾಕಷ್ಟು ಒತ್ತಡ ಇದೆ. ಪೊಲೀಸರು ದೊಡ್ಡ ಒತ್ತಡದಲ್ಲಿ ಕೆಲಸ ಮಾಡಬೇಕಿದೆ.
ಔರಾಧ್ ಕರ್ ವರದಿ ಇನ್ನೂ ಜಾರಿ ಮಾಡಿಲ್ಲ. ಈ ನಡುವೆ ದಿನದಲ್ಲಿ ಎರಡು ಗಂಟೆಗೊಮ್ಮೆ ಡ್ರೀಲ್ ಮಾಡಿ ಅಂದರೆ ಅವರು ಎಲ್ಲಿಂದ ಮಾಡಬೇಕು ಎಂದು ಅವರು ಖಾರವಾಗಿ ಪ್ರಶ್ನಿಸಿದರು.
ನೀವು ಹೇಳಿದನ್ನು ನೋಡಿದರೆ, ಪೊಲೀಸರು ಹುಚ್ಚರ ರೀತಿಯಲ್ಲಿ ರಸ್ತೆಯಲ್ಲಿ ಓಡಾಡಬೇಕಾ?. ಹೀಗೆ ಮಾಡಿದರೆ ಜನ ಏನು ಹೇಳತ್ತಾರೆ. ಬುದ್ಧಿ ಇಲ್ಲದೇ ಏನೇನೋ ಆದೇಶ ಮಾಡುತ್ತಾರೆ ಎಂದು ಆಡಿಕೊಳ್ಳುತ್ತಾರೆ. ರಾಜ್ಯ ಸರ್ಕಾರಕ್ಕೆ ಮತಿಭ್ರಮಣೆ ಆಗಿದೆ. ಪೊಲೀಸರಿಗೆ ಹೊರಡಿಸಿರುವ ಈ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಪ್ರಹ್ಲಾದ್ ಜೋಶಿ ಹೇಳಿದರು.

ಸಿಎಂ ಪತ್ರ ಬರೆದರೆ ಪಾಸ್ಪೋರ್ಟ್ ರದ್ದಾಗಲ್ಲ
ಸಂಸದ ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದು ವಿಚಾರ ಕುರಿತು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿಗೆ, ವಿದೇಶಾಂಗ ಸಚಿವರಿಗೆ ಪತ್ರ ಬರೆದು ರಾಜಕಾರಣ ಮಾಡಿದರೆ ಸಂಸದರ ಪಾಸ್ಪೋರ್ಟ್ ರದ್ದಾಗಲ್ಲ. ಸಿದ್ದರಾಮಯ್ಯ ಅವರು ರಾಜಕಾರಣ ಮಾಡಲೆಂದೇ ಕೇಂದ್ರಕ್ಕೆ ಬರೆದಿದ್ದಾರೆ. ಪೊಲೀಸ್ ಇಲಾಖೆ ಅಧಿಕೃತ ಮಾಹಿತಿ ನೀಡಬೇಕು, ಇಲ್ಲವೇ ಕೋರ್ಟ್ ಆದೇಶ ಇರಬೇಕು ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ಮಾಹಿತಿ ನೀಡುತ್ತಿದ್ದಂತೆ ಕೇಂದ್ರದಿಂದ ತ್ವರಿತ ಕ್ರಮ
ಅಶ್ಲೀಲ ವಿಡಿಯೋ ಪ್ರಕರಣ ಬಗ್ಗೆ SIT ಈಗ ಕೇಂದ್ರಕ್ಕೆ ಮಾಹಿತಿ ನೀಡಿದೆ. ಪ್ರಕರಣ ಬೆಳಕಿಗೆ ಬಂದು ಒಂದು ತಿಂಗಳ ಬಳಿಕ ಮೇ 21ರಂದು ಕೇಂದ್ರಕ್ಕೆ ಅಧಿಕೃತ ಮಾಹಿತಿ ನೀಡಿದೆ ಎಂದು ತಿಳಿಸಿದರು.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕೇಂದ್ರ ಅತ್ಯಂತ ತ್ವರಿತ ಕ್ರಮ ಹೈಗೊಂಡಿದೆ. ರಾಜ್ಯ ಸರ್ಕಾರ ಕೇಂದ್ರಕ್ಕೆ ಮಾಹಿತಿ ನೀಡಿದ ಮೇಲೆ 10 ದಿನಗಳ ಸಮಯ ಇರುತ್ತದೆ. ಅದರಂತೆ ಮೇ 21ಕ್ಕೆ SIT ಮಾಹಿತಿ ನೀಡುತ್ತಲೆ ಮುಂದಿನ ಕ್ರಮ ಕೈಗೊಂಡಿದೆ. ಮೇ 25ಕ್ಕೆ ಅಂದರೆ ಎರಡೇ ದಿನದಲ್ಲಿ ಆಗಲೇ ಕೇಂದ್ರ ಸರ್ಕಾರ ನೋಟಿಸ್ ಕೊಟ್ಟಿದೆ. ಕಾನೂನು ಪ್ರಕಾರ ಇನ್ನು 8 ದಿನದಲ್ಲಿ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಜೋಶಿ ಸ್ಪಷ್ಟ ಪಡಿಸಿದರು.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಾಜಕಾರಣ ಮಾಡದೇ ಗಂಭೀರವಾಗಿ ಪರಿಗಣಿಸಬೇಕು. ವಿದೇಶಕ್ಕೆ ಹಾರಿರುವ ಪ್ರಜ್ವಲ್ ಅವರನ್ನು ಹಿಡಿದು ಕರೆ ತಂದು ಶಿಕ್ಷೆಗೆ ಗುರಿಪಡಿಸಬೇಕು ಎಂದು ರಾಜ್ಯ ಸರ್ಕಾರವನ್ನು ಇದೇ ವೇಳೆ ಅವರು ಆಗ್ರಹಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications