ಹಜ್ ಯಾತ್ರಿಗಳಿಗೆ ನೀಡುವ ಸೌಲಭ್ಯ ಅಯ್ಯಪ್ಪ ಸ್ವಾಮಿ ಯಾತ್ರಿಕರಿಗೆ ನೀಡಲಿ
ಹುಬ್ಬಳ್ಳಿ, ಡಿಸೆಂಬರ್, 20 : ಮುಸ್ಲಿಂ ಸಮುದಾಯದ ಹಜ್ ಯಾತ್ರಾರ್ಥಿಗಳಿಗೆ ನೀಡುವ ಸೌಲಭ್ಯಗಳನ್ನು ಅಯ್ಯಪ್ಪ ಮಾಲಾಧಾರಿಗಳಿಗೂ ನೀಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ನೇತೃತ್ವದಲ್ಲಿ ಮಂಗಳವಾರ ನೂರಾರು ಅಯ್ಯಪ್ಪ ಮಾಲಾಧಾರಿಗಳು ಪ್ರತಿಭಟನೆ ನಡೆಸಿದರು.
ಸ್ಥಳೀಯ ದಾಜೀಬಾನ ಪೇಟೆಯ ತುಳಜಾಭವಾನಿ ಮಂದಿರದಿಂದ ಆರಂಭವಾದ ಮೆರವಣಿಗೆ ತಹಸೀಲ್ದಾರ್ ಕಚೇರಿಗೆ ತಲುಪಿತು. ಈ ಸಂದರ್ಭದಲ್ಲಿ ಮಾತನಾಡಿದ ಮುತಾಲಿಕ್, ಹಜ್ ಯಾತ್ರಿಗಳಿಗೆ ನೀಡುವ ಸೌಲಭ್ಯಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಯ್ಯಪ್ಪ ಮಾಲಾಧಾರಿಗಳಿಗೆ ನೀಡಬೇಕು.

ದೇಶದಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆಗೆ ಹೋಗುತ್ತಾರೆ. ಆದರೆ, ಅವರಿಗೆ ಯಾವುದೇ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿಲ್ಲ. ಮುಸ್ಲಿಮರಿಗೆ ಹಜ್ ಯಾತ್ರೆಗೆ ಹೋಗಲು ಸಬ್ಸಿಡಿ ನೀಡುತ್ತಿದೆ.
ಅದೇ ರೀತಿ ಅಯ್ಯಪ್ಪ ಮಾಲಾಧಾರಿಗಳಿಗೂ ಸಬ್ಸಿಡಿಯನ್ನು ನೀಡಬೇಕು. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಹಜ್ ಭವನದಂತೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅಯ್ಯಪ್ಪ ಮಂದಿರಗಳನ್ನು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಿಂದ ತೆರಳುವ ಎಲ್ಲಾ ವಾಹನಗಳಿಂದ ಕೇರಳ ಸರ್ಕಾರ ಟೋಲ್ ಸಂಗ್ರಹ ಮಾಡುತ್ತಿದೆ. ಕೂಡಲೇ ಕೇಂದ್ರ ಸರ್ಕಾರ ಕೇರಳ ಸರ್ಕಾರಕ್ಕೆ ಯಾವುದೇ ಟೋಲ್ ಸಂಗ್ರಹ ಮಾಡದಂತೆ ನಿರ್ದೇಶನ ನೀಡಬೇಕು.
ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತರಿಗೆ ಮೂಲಭೂತ ಸೌಲಭ್ಯಗಳನ್ನು ನೀಡಲು ಸೂಚನೆ ನೀಡಬೇಕು ಎಂದು ಆಗ್ರಹಿಸಿದರು.ತಹಸೀಲ್ದಾರ್ ಮುಖಾಂತರ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿವಿಧ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು.

ನೋಟ್ ಬ್ಯಾನ್ ಟಿಪ್ಪು ಸುಲ್ತಾನ್ ಅಭಿಮಾನಿಗಳ ಪ್ರತಿಭಟನೆ: ಕೇಂದ್ರ ಸರ್ಕಾರವು 500, 1000 ರೂ. ಮುಖಬೆಲೆಯ ನೋಟುಗಳನ್ನು ರದ್ದು ಮಾಡಿರುವುದರಿಂದ ಬಡ ಕೂಲಿ ಕಾರ್ಮಿಕರಿಗೆ ತೊಂದರೆಯಾಗಿದೆ ಎಂದು ಆರೋಪಿಸಿ ಟಿಪ್ಪು ಸುಲ್ತಾನ್ ಅಭಿಮಾನಿಗಳ ವೇದಿಕೆಯಿಂದ ಹುಬ್ಬಳ್ಳಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.

ಇಲ್ಲಿಯ ನೆಹರೂ ಮೈದಾನದಿಂದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಮೂಲಕ ತಹಸೀಲ್ದಾರಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications