ಬಿಜೆಪಿಯವರೇನು ಸಾಚಾಗಳಲ್ಲ: ಪ್ರಮೋದ್ ಮುತಾಲಿಕ್ ಹೀಗೆ ಅಂದಿದ್ದೇಕೆ?, ಇಲ್ಲಿದೆ ವಿವರ
ಹುಬ್ಬಳ್ಳಿ, ಜುಲೈ, 11: ಬಿಜೆಪಿಯವರು ಕಾಮಕುಮಾರ ಸ್ವಾಮೀಜಿ ಹತ್ಯೆ ಕೇಸ್ ಸಿಬಿಐಗೆ ಕೊಡಬೇಕು ಅಂತಾರೆ. ಆದರೆ ಅವರೆಣು ಸಾಚಾಗಳಲ್ಲ. ಸಿಬಿಐ ಅನ್ನೋದು ಬುರಡೆ, ಇವರು ಅಧಿಕಾರದಲ್ಲಿದ್ದಾಗ ಕೊಲೆ ಕೇಸ್ಗಳನ್ನು ಸಿಬಿಐಗೆ ಕೊಟ್ರು ಏನಾಯ್ತು?. 22 ಕೇಸ್ಗಳಿಗೆ ನ್ಯಾಯ ಸಿಕ್ಕಿದೆಯಾ ಎಂದು ವರೂರಿನ ಗುಣಧರನಂದಿ ಸ್ವಾಮೀಜಿ ಬಳಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.
ಚಿಕ್ಕೊಡಿಯ ಜೈನ ಮುನಿ ಕಾಮಕುಮಾರ ಸ್ವಾಮೀಜಿ ಹತ್ಯೆ ಹಿನ್ನಲೆ ಪ್ರಮೋದ್ ಮುತಾಲಿಕ್ ಅವರು ವರೂರ ಜೈನ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಇದೇ ವೇಳೆ ಮಾತನಾಡಿದ ಅವರು, ಬಿಜೆಪಿಯವರು ಈ ಪ್ರಕರಣವನ್ನು ಇದೀಗ ಸಿಬಿಐಗೆ ವಹಿಸಿ ಅಂತೀದಾರೆ. ಇವರೇನು ಸಾಚಾಗಳಾ? ಎಂದು ಪ್ರಶ್ನಿಸಿದರು. ಹಾಗೆಯೇ ರಾಜಕಾರಣಿಗಳು ನಿರ್ಲಜ್ಜರು, ನಾನು ಹಿಂದೂತ್ವ ಉಳಿಸಲು ರಾಜಕಾರಣಕ್ಕೆ ಬಂದವನು ಎಂದರು.

ಯುಪಿ ಮಾದರಿಯಲ್ಲೇ ಶಿಕ್ಷೆಯಾಗಬೇಕು
"ಚಿಕ್ಕೋಡಿಯ ಜೈನ್ ಮುನಿ ಕಾಮಕುಮಾರ ಮಹಾರಾಜರ ಹತ್ಯೆ ಹಿಂದೆ ದೊಡ್ಡದೊಂದು ಕೈವಾಡ ಇದೆ. ಹತ್ಯೆ ಮಾಡಿದವರಿಗೆ ಉತ್ತರ ಪ್ರದೇಶ ಯೋಗಿ ಮಾದರಿಯಲ್ಲಿ ಅವರಿಗೆ ಶಿಕ್ಷೆಯಾಗಬೇಕು. ಮತ್ತು ಅವರ ಆಸ್ತಿಯನ್ನು ಜಪ್ತಿ ಮಾಡಬೇಕು. ಬುಲ್ಡೋಜರ್ ಹತ್ತಿಸಿ ಅವರ ಮೂರು ಮನೆಗಳನ್ನು ನೆಲಸಮ ಮಾಡಬೇಕು," ಎಂದು ಒತ್ತಾಯಿಸಿದರು.
ವರೂರ ಜೈನ ಮಂದಿರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗಲೇ ಅದೆಷ್ಟೋ ಹತ್ಯೆಗಳಾಗಿವೆ. ಸಿಬಿಐ ತನಿಖೆಗೂ ವಹಿಸಿದ್ದರು. ಆದರೆ ಏನು ಪ್ರಯೋಜನ ಆಗಲಿಲ್ಲ. ಆ ಆರೋಪಿಗಳಿಗೆ ಜಾಮೀನು ಕೊಡಲು ಯಾರು ಸಾಥ್ ನೀಡಬಾರದೆಂದು ಎಲ್ಲ ವಕೀಲರ ಸಂಘಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ಹಾಗೆಯೇ ಜೈನ ಮುನಿ ಹತ್ಯೆಯನ್ನು ಪೊಲೀಸ್ ತನಿಖೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುತ್ತದೆ ಎಂದರು.
ಪ್ರಮೋದ್ ಮುತಾಲಿಕ್ ಗರಂ
ಇನ್ನು ಮುಸ್ಲಿಂ ಶಾಸಕನೊಬ್ಬ ವಿಧಾನಸೌಧದಲ್ಲಿ ನಮಾಜ್ಗೆ ಅನುಮತಿ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ವಿಧಾನಸೌಧವೇನು ಮೆಕ್ಕಾ, ಮದೀನಾನಾ? ಆಜಾನ್, ಹಿಜಾಬ್ ಬಗ್ಗೆ ಚರ್ಚೆ ನಡೆದಾಗ ಗೌರವ ಕೊಟ್ಟಿಲ್ಲ. ಈಗ ನಮಾಜ್ ಮಾಡಲು ಜಾಗ ಕೇಳುತ್ತಿರುವುದು ಖಂಡನೀಯ. ಈಗ ನಮಾಜ್ ಅಂತಾರೆ, ಮುಂದೆ ದರ್ಗಾ, ಮಸೀದಿ ಮಾಡುತ್ತೇವೆ ಅಂತಾರೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗರಂ ಆಗಿದ್ದಾರೆ.
ಮುಸ್ಲೀಮರ ಪ್ರಾರ್ಥನೆಗೆ ವಿಧಾನಸೌಧದಂತಹ ಪವಿತ್ರ ಜಾಗದಲ್ಲಿ ಅವಕಾಶ ಕೊಡಬಾರದು. ವಿಷಯ ಪ್ರಸ್ತಾಪಿಸಿದ ಶಾಸಕರ ವಿರುದ್ಧ ಹೋರಾಟ ಮಾಡುತ್ತೇವೆ.
ಪ್ರಶ್ನೆಯನ್ನು ಕಡತದಿಂದ ತೆಗೆದುಹಾಕಬೇಕು. ಇದು ತುಷ್ಟೀಕರಣದ ಪರಮಾವಧಿಯಾಗಿದೆ ಎಂದು ಆಕ್ರೋಶ ಹೊರಹಾಕಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications