"ಮಾತೃಪೂರ್ಣ" ಯೋಜನೆಯಡಿ ನೀಡುತಿದ್ದ ಮೊಟ್ಟೆ ಸ್ಥಗಿತಕ್ಕೆ ಆಕ್ರೋಶ

ಹುಬ್ಬಳ್ಳಿ, ನವಂಬರ್ 30 : ಅಂಗನವಾಡಿಗಳಲ್ಲಿ ಶಿಶು ಹಾಗೂ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಸರ್ಕಾರದ ಯೋಜನೆಯಲ್ಲಿ ಮಹತ್ವಪೂರ್ಣ 'ಮಾತೃಪೂರ್ಣ' ಯೋಜನೆಯಡಿ ನೀಡಲಾಗುತಿದ್ದ ಮೊಟ್ಟೆ ವಿತರಣೆಯನ್ನು ಸ್ಥಗಿತಗೊಳಿಸಲಾಗಿದೆ.

ಬೆಲೆ ಏರಿಕೆಯಿಂದ ಈಗ ಧಾರವಾಡ ಜಿಲ್ಲೆಯ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮೊಟ್ಟೆ ವಿತರಣೆ ಸ್ಥಗಿತಗೊಳಿಸಲಾಗಿದೆ. ಈಗ ಒಂದು ಮೊಟ್ಟೆ 5 ರೂಪಾಯಿಂದ 6.50 ಯಿಂದ 7 ರೂಪಾಯಿಗೆ ಏರಿಕೆಯಾಗಿದೆ. ಇದರಿಂದ ಕೇಲ ಅಂಗನವಾಡಿ ಕೇಂದ್ರಗಳಲ್ಲಿ ಮೊಟ್ಟೆ ವಿತರಣೆ ಸ್ಥಗಿತಗೊಳಿಸಿದ್ದರೆ ಇನ್ನು ಕೇಲ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯರಿಗೆ 5 ರೂಪಾಯಿಗಿಂತ ಹೆಚ್ಚಿಗೆ ಹಣ ತಾವೇ ಸಂದಾಯ ಮಾಡಿ ಮಕ್ಕಳಿಗೆ ನೀಡಬೇಕೆಂದು ಅಲಿಖಿತ ಆದೇಶ ಸಹ ಹೊರಡಿಸಿದೆ. ಇದರಿಂದಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಏನು ಮಾಡಬೇಕೆಂದು ತಿಳಿಯುತಿಲ್ಲ.

Price raise hits on eggs Distribution

ಸರ್ಕಾರ ತಾವೇ ಜಾರಿಗೆ ತಂದ ಯೋಜನೆಗಳ ಬಗ್ಗೆ ಅಷ್ಟೊಂದು ಕಾಳಜಿವಹಿಸತಿಲ್ಲ ಎಂದು ಅಂಗನವಾಡಿ ಕಾರ್ಯಕರ್ತೆಯರು ಅಸಮಧಾನ ವ್ಯಕ್ತಪಡಿಸುತಿದ್ದಾರೆ . ತಮ್ಮ ಸಂಬಳಸಲ್ಲಿಯೇ ಹಣ ನೀಡಿ ಮೊಟ್ಟೆ ಖರೀದಿಸಿ ಮಕ್ಕಳಿಗೆ ನೀಡಿ ಎಂದು ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ, ಆದರೆ ನಮಗೆ ಇರುವ ಅಲ್ಪ ಸ್ವಲ್ಪ ಸಂಬಳದಲ್ಲಿ ಹೇಗೆ ಹಣ ನೀಡಿ ಮೊಟ್ಟೆ ತರಬೇಕು ಎನ್ನುತ್ತಾರೆ ಅಂಗನವಾಡಿ ಶಿಕ್ಷಕಿಯರು..

ಕಾರ್ಯಕ್ರಮದ ಉದ್ದೇಶಕ್ಕೆ ಎಳ್ಳು ನೀರು; ಮಕ್ಕಳಿಗೆ ಅಂಗನವಾಡಿ ಕೇಂದ್ರದಲ್ಲಿ ಹೆಚ್ಚು ಪೌಷ್ಠಿಕತೆ ಅಂಶಗಳನ್ನು ಒಳಗೊಂಡ ಮಧ್ಯಾಹ್ನದ ಪೌಷ್ಠಿಕ ಊಟ ಒದಗಿಸುವ ಜೊತೆ ಮೊಟ್ಟೆ ವಿತರಣೆ ಮಾಡುವ ಮೂಲಕ ಅವರ ಪೌಷ್ಠಿಕಾಂಶದ ಪ್ರಮಾಣವನ್ನು ಹೆಚ್ಚಿಸಿ, ಕಡಿಮೆ ತೂಕದ ಮಕ್ಕಳ ಜನನ ಶಿಶು ಮರಣ ಪ್ರಮಾಣ ಮತ್ತು ಮಾತೃತ್ವ ಮರಣ ಪ್ರಮಾಣಗಳನ್ನು ಮತ್ತು ಕಡಿಮೆ ತೂಕದ ಮಕ್ಕಳ ಜನನ ಪ್ರಮಾಣವನ್ನು ಕಡಿಮೆ ಮಾಡುವುದಾಗಿತ್ತು.

ಆದರೆ ಸರ್ಕಾರ ಇಂತರ ಪರಿಣಾಮ ಯೋಜನೆಗಳನ್ನು ಜಾರಿಗೆ ತರುವಾಗ ಇರುವ ಆಶಕ್ತಿ ಅದನ್ನು ಸರಿಯಾಗಿ ಅನುಷ್ಠಾನಗೊಳಿಸುವಾಗ ಇರುವುದಿಲ್ಲ ಎಂಬುದಕ್ಕೆ ಇದೇ ತಾಜಾ ಉದಾಹರಣೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+