ಧಾರವಾಡ ಜೈಲಲ್ಲಿ ಅಧಿಕಾರಿಗಳ ಚಾಕರಿ ಮಾಡಿದ್ರೆ ಖೈದಿಗಳಿಗೆ 'ಸ್ವಾತಂತ್ರ್ಯ'
ಧಾರವಾಡ, ಜುಲೈ 17: ಜೈಲುಗಳ ಅಕ್ರಮ ಬಗೆದಷ್ಟು ಆಳ ಎಂಬಂತೆ ಎಷ್ಟು ಬಯಲಿಗೆ ಎಳೆದರೂ ಮುಗಿಯುವುದೇ ಇಲ್ಲ. ಇದಕ್ಕೆ ಧಾರವಾಡದ ಕೇಂದ್ರ ಕಾರಾಗೃಹವೂ ಹೊರತಾಗಿಲ್ಲ.
ಈ ಹಿಂದೆಯೂ ಹಲವು ಅಕ್ರಮಗಳ ಮೂಲಕ ಸುದ್ದಿಯಲ್ಲಿದ್ದ ಈ ಕಾರಾಗೃಹದಲ್ಲಿನ ಖೈದಿಗಳು ಅಧಿಕಾರಿಗಳ ಚಾಕರಿ ಮಾಡಿದರೆ ದಿನವಿಡೀ ಎಲ್ಲಿಗೆ ಬೇಕಾದರೂ ಹೋಗಿ ಬರಬಹುದಾಗಿದೆ.
ಹೌದು, ಜೈಲು ಅಧಿಕಾರಿಗಳ ಮನೆಯಲ್ಲಿ ಅವರ ಚಾಕರಿ ಮಾಡಿದರೆ ಸಾಕು, ಇಡೀ ದಿನ ಖೈದಿಗಳು ಜೈಲಿನಲ್ಲಿ ಇರಬೇಕೆಂದೇನಿಲ್ಲ. ಬೆಳಗ್ಗೆ ಹೊರಗೆ ಹೋಗಿ ಸುತ್ತಾಡಿಕೊಂಡು ಪುನಃ ಸಂಜೆ ವೇಳೆಗೆ ವಾಪಸ್ ಬಂದರೆ ಮುಗಿಯಿತು.

ಹೀಗೆ ಅಧಿಕಾರಿಗಳ ನಂಬಿಕೆ ಗಳಿಸಿಕೊಂಡು ಅವರ ಮನೆಗೆಲಸ ಮಾಡಿಕೊಂಡು ಬಿಂದಾಸ್ ಆಗಿ ಓಡಾಡಿಕೊಂಡಿರುವ ಹಲವಾರು ಖೈದಿಗಳು ಧಾರವಾಡ ಕಾರಾಗೃಹದಲ್ಲಿದ್ದಾರೆ.
ಅಚ್ಚರಿ ಸಂಗತಿ ಎಂದರೆ ಕೆಲವು ಖೈದಿಗಳು ಧಾರವಾಡದ ಮಾರ್ಕೆಟ್ನಲ್ಲಿ ಹಣ್ಣು, ತರಕಾರಿ ಸೇರಿದಂತೆ ಮತ್ತಿತರ ವ್ಯಾಪಾರ ಮಾಡಿಕೊಂಡಿದ್ದಾರೆ. ಬೆಳಗಿನಿಂದ ಸಂಜೆವರೆಗೆ ವ್ಯಾಪಾರ ಮಾಡಿ ಪುನಃ ಸಂಜೆ ವೇಳೆಗೆ ಜೈಲು ಸೇರುವುದು ಇವರ ದಿನಚರಿ.
ಇನ್ನು ಅಗತ್ಯ ಬಿದ್ದಾಗ ಅಧಿಕಾರಿ ಸೇವೆ ಮಾಡುವುದು ಕಡ್ಡಾಯ. ಹಾಗಂತ ಎಲ್ಲ ಖೈದಿಗಳಿಗೂ ಈ ಅವಕಾಶವಿಲ್ಲ. ಅಧಿಕಾರಿಗಳ ನಂಬಿಕೆ ಗಳಿಸಿಕೊಂಡವರಿಗೆ ಮಾತ್ರ ಈ ಅವಕಾಶ. ಅಂದರೆ ಹಲವು ವರ್ಷಗಳಿಂದ ಅವರ ಚಲನವಲನಗಳನ್ನು ಗುರುತಿಸುವ ಅಧಿಕಾರಿಗಳು, ಹೊರಗೆ ಹೋದವರು ಮರಳಿ ಬರುತ್ತಾರೆ ಎಂಬ ನಂಬಿಕೆ ಇದ್ದರೆ ಮಾತ್ರ ಹೊರಗಡೆ ಕಳುಹಿಸುತ್ತಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications