ಮಹಾದಾಯಿ ಯೋಜನೆಗೆ ಡಿಸೆಂಬರ್ 9ರಂದು ಗೋವಾಕ್ಕೆ ಮುತ್ತಿಗೆ : ವಾಟಾಳ್
ಹುಬ್ಬಳ್ಳಿ, ನವೆಂಬರ್ 13: ಮಹಾದಾಯಿ ಯೋಜನೆಗಾಗಿ ಆಗ್ರಹಿಸಿ ಡಿಸೆಂಬರ್ 9ರಂದು ಗೋವಾಕ್ಕೆ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದರು.
ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಾದಾಯಿ ವಿಷಯದಲ್ಲಿ ರಾಜ್ಯದ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಲಿಸಲು ವಿಫಲರಾಗಿದ್ದಾರೆ. ಹೀಗಾಗಿಯೇ ಲೋಕಸಭೆಯಲ್ಲಿ ಕಳಸಾ ಬಂಡೂರಿ ವಿಷಯವಾಗಿ ಚರ್ಚೆ ನಡೆದಿಲ್ಲ. ಅಲ್ಲದೇ ರಾಜ್ಯದ ಸಂಸದರು ಒಂದು ಬಾರಿಯೂ ಸಭಾತ್ಯಾಗ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

2 ವರ್ಷಗಳಿಂದ ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹೋರಾಟ ನಡೆಯುತ್ತಿದ್ದರೂ ಮಹಾದಾಯಿ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮೇಲೆ ರಾಜ್ಯದ ಬಿಜೆಪಿ ಸಂಸದರು ಒತ್ತಡವನ್ನು ತಂದಿಲ್ಲ. ಅಲ್ಲದೇ ಗೋವಾ ಮುಖ್ಯಮಂತ್ರಿ ಕೂಡ ತಮ್ಮ ಹಠಮಾರಿ ಧೋರಣೆಯಿಂದ ಹಿಂದೆ ಸರಿದಿಲ್ಲ ಎಂದರು.
ಮುಂಬರುವ ವಿಧಾನಸಭೆ ಚುನಾವಣೆಯೊಳಗೆ ನೀರು ಕೊಡಿಸದಿದ್ದರೆ, 2018ರ ಚುನಾವಣೆಯಲ್ಲಿ ಇದೇ ವಿಷಯವನ್ನು ಕನ್ನಡಪರ ಸಂಘಟನೆಗಳು ಬಳಸಿಕೊಂಡು ತೀವ್ರ ಹೋರಾಟವನ್ನು ಮಾಡುತ್ತವೆ. ಬೆಳಗಾವಿಯಲ್ಲಿ ಇಂದಿನಿಂದ ಆರಂಭಗೊಂಡಿರುವ ಅಧಿವೇಶನ ಹೆಸರಿಗೆ ಮಾತ್ರವಾಗಿದ್ದು, ಇದು ಈ ಸರಕಾರದ ಕೊನೆಯ ಅಧಿವೇಶನವಾಗಲಿದೆ. ಯಾವುದೇ ಅಜೆಂಡಾ ಇಲ್ಲದ ಅಧಿವೇಶನ ಇದಾಗಿದೆ ಎಂದು ಹೇಳಿದರು.
ಬೆಳಗಾವಿ ಸುವರ್ಣ ಸೌಧದಲ್ಲಿ ಇದುವರೆಗೆ ನಡೆದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕ ಭಾಗದ ಬಗೆಗೆ ಯಾವುದೇ ಪರಿಣಾಮಕಾರಿಯಾದ ಚರ್ಚೆಗಳೂ ಆಗಿಲ್ಲ ಎಂದ ವಾಟಾಳ್, ಸುವರ್ಣ ಸೌಧವನ್ನು ಯಾವ ಪುರುಷಾರ್ಥಕ್ಕಾಾಗಿ ನಿರ್ಮಿಸಲಾಗಿದೆ ಎಂದು ಪ್ರಶ್ನಿಸಿದರು.
ಯುಪಿಎ ರೂಪಿಸಿದ್ದ ಜಿಎಸ್ ಟಿ ಜನಪರವಾಗಿತ್ತು
ಹುಬ್ಬಳ್ಳಿ: ಯುಪಿಎ ರೂಪಿಸಿದ್ದ ಜಿಎಸ್ ಟಿ ಜನಪರವಾಗಿತ್ತು. ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಅತಿರೇಕದ ಜಿಎಸ್ ಟಿ ರೂಪಿಸಿ, ಜನರಿಗೆ ತೊಂದರೆ ಮಾಡಿದೆ ಎಂದು ಲೋಕಸಭೆ ಮಾಜಿ ಸ್ಪೀಕರ್ ಮೀರಾಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿಯ ಇಂದಿರಾ ಗಾಜಿನ ಮನೆಯಲ್ಲಿ ಬಾಬು ಜಗಜೀವನರಾಮ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಜಾರಿಗೊಳಿಸಿದ ಜಿಎಸ್ ಟಿಯಿಂದ ಸಣ್ಣ-ಸಣ್ಣ ಉದ್ಯಮಗಳು ಬಾಗಿಲು ಮುಚ್ಚಿವೆ. ಲಕ್ಷಾಂತರ ಯುವಕರು ಬೀದಿ ಪಾಲಾಗಿದ್ದಾರೆ. ಈಗ ಜಿಎಸ್ ಟಿ ಮಾರ್ಪಾಡು ಮಾಡಲು ಹೊರಟಿದೆ ಎಂದು ಹರಿಹಾಯ್ದರು.

ಇತ್ತೀಚೆಗೆ ಮೀಸಲಾತಿ ಬೇಡ ಎಂಬ ಕೂಗು ಸಹ ಹೆಚ್ಚಾಗುತ್ತಿದೆ. ಮೀಸಲಾತಿ ಬೇಡ ಎನ್ನುವವರು ಜಾತೀಯತೆ ಬೇಡ ಎನ್ನಲಿ. ಜಾತೀಯತೆ ಅನುಸರಿಸಿ ಮೀಸಲಾತಿ ಬೇಡ ಅನ್ನೋದು ಎಷ್ಟು ಸೂಕ್ತ ಎಂದು ಪ್ರಶ್ನಿಸಿದ ಅವರು, ತುಳಿತಕ್ಕೆ ಒಳಗಾದವರ ಏಳ್ಗೆಗಾಗಿ ಅಂಬೇಡ್ಕರ್ ಆಶಯದಂತೆ ಮೀಸಲಾತಿ ನೀಡಲಾಗಿದೆ ಎಂದರು.
ಇತಿಹಾಸದಲ್ಲಿ ಕರ್ನಾಟಕವು ತುಂಬಾ ಮಹತ್ವದ ಸ್ಥಾನ ಪಡೆದಿದೆ. 21ನೇ ಶತಮಾನದಲ್ಲಿ ಇಲ್ಲಿನ ಯುವ ಪೀಳಿಗೆ ವಿಶ್ವ ಮಟ್ಟದಲ್ಲಿ ಹೆಸರು ಮಾಡಿದೆ. ಮಾಹಿತಿ ಮತ್ತು ತಂತ್ರಜ್ಞಾನದಲ್ಲಿ ರಾಜ್ಯದ ಕೊಡುಗೆ ಅಪಾರ. ಕರ್ನಾಟಕದ ಹೆಸರು ವಿಶ್ವ ಮಟ್ಟದಲ್ಲಿ ಇನ್ನಷ್ಟು ಎತ್ತರಕ್ಕೆೆ ಬೆಳೆಯಲಿ ಎಂದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications