Protest for Reservation: ಅಕ್ಟೋಬರ್ 16ರಂದು ರಾಜ್ಯದಲ್ಲಿ ಬೃಹತ್ ಪ್ರತಿಭಟನೆ
ಹುಬ್ಬಳ್ಳಿ, ಸೆಪ್ಟಂಬರ್ 29: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಬೇಕೆಂಬ ಕೂಗು ಶುರುವಾಗಿದೆ. ರಾಜ್ಯ ಸರ್ಕಾರ ವಿಳಂಬ ಮಾಡದೇ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 16 ರಂದು ರಾಜ್ಯದ ಜಿಲ್ಲೆಗಳ ಆಯಾ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರಮಾಣದ ಹೋರಾಟ ಹಮ್ಮಿಕೊಳ್ಳಲಾಗಿದೆ.
ಹುಬ್ಬಳ್ಳಿಯಲ್ಲಿ ಭಾನುವಾರ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಬೆಳಗಾವಿ ವಿಭಾಗ ಮಟ್ಟದ ಪದಾಧಿಕಾರಿಗಳು, ಸಮಾಜದ ಮುಖಂಡರ ಸಭೆ ನಡೆಯಿತು. ಬಳಿಕ ಸಮಿತಿಯ ಅಧ್ಯಕ್ಷ ಮುತ್ತು ಬನ್ನೂರು ಮಾಹಿತಿ ನೀಡಿದರು.

ಒಳ ಮೀಸಲಾತಿಯ ಜಾರಿ ವಿಚಾರ ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಅನೇಕ ವರ್ಷಗಳ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರಕ್ಕೆ ಅವರು ಮನವಿ ಮಾಡಿದರು.
ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಿ
ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ನೀಡುವಂತೆ ಆಗ್ರಹಿಸಿ ದಶಕದಿಂದ ಹೋರಾಟ ಮಾಡಿದ್ದರ ಫಲವಾಗಿ ಹಿಂದಿನ ಬಿಜೆಪಿ ಸರ್ಕಾರ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಸ್ವೀಕರಿಸಿ ಜೆ.ಮಾಧುಸ್ವಾಮಿ ನೇತೃತ್ವದ ವರದಿಯನ್ನು ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಮಾಡಿತ್ತು.
ಒಳ ಮೀಸಲಾತಿ ಪರ ಇತ್ತೀಚೆಗೆ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸುವುದು ರಾಜ್ಯ ಸರ್ಕಾರಕ್ಕೆ ಅವಕಾಶ ಸಿಕ್ಕಿದೆ ಎಂದು ತಿಳಿಸಿ ಹೇಳಿದರು.
101 ಪರಿಶಿಷ್ಟ ಜಾತಿಗಳಿಗೆ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಿಲ್ಲ. ಹೀಗಾಗಿ ಒಳ ಮೀಸಲು ಜಾರಿಗೆ ಮೂರು ದಶಕದಿಂದ ಹೋರಾಟ ಮಾಡುತ್ತಿದ್ದೇವೆ. ಸುಪ್ರೀಂ ಕೋರ್ಟ್ ಇದಕ್ಕೆ ಅನುಮತಿ ನೀಡಿದೆ. ಆದರೂ ರಾಜ್ಯದಲ್ಲಿ ಜಾರಿಗೆ ಪ್ರಯತ್ನಗಳು ನಡೆಯುತ್ತಿಲ್ಲ. ಈ ಮೂಲಕ ಅರ್ಹರಿಗೆ ಮತ್ತೆ ಅನ್ಯಾಯ ಮಾಡಲಾಗುತ್ತಿದೆ. ಸಂವಿಧಾನ ಮತ್ತು ಸವೋರ್ಚ್ಛ ನ್ಯಾಯಾಲಯದ ತೀರ್ಪಿಗೆ ಅಗೌರವ ತೋರುತ್ತಿದೆ. ಪರಿಶಿಷ್ಟರನ್ನು ತುಳಿವ ಕೆಲಸ ಮಾಡುತ್ತಿದೆ ಎಂದು ಸರ್ಕಾರದ ವಿಳಂಬ ಧೋರಣೆಯನ್ನು ಖಂಡಿಸಿದರು.
ಹೋರಾಟ ಸಮಿತಿ ಬೇಡಿಕೆಗಳು ಏನೇನು?
ಸುಪ್ರೀಂ ಕೋರ್ಟ್ ತೀರ್ಪಿನಂತೆ ಪಜಾಗಳ ಒಳ ಮೀಸಲಾತಿ ಜಾರಿ ಮಾಡಬೇಕು. 2023 ಮತ್ತು 25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅನುದಾನ ದುರ್ಬಳಕೆ ಆಗಿದ್ದನ್ನು, ವಾಪಸ್ ನೀಡಬೇಕು. SC ST ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ವಿದ್ಯಾರ್ಥಿ ವೇತನ ನೀಡಬೇಕು. ಒಳ ಮೀಸಲು ಹಂಚಿಕೆ ಆಗುವವರೆಗೆ ರಾಜ್ಯ, ಕೇಂದ್ರದ ನೇಮಕಾತಿ ಪ್ರಕ್ರಿಯೆ ನಿಲ್ಲಿಸಬೇಕು ಎಂದು ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.
ಖಾಸಗಿ ಉದ್ಯೋಗ, ಗುತ್ತಿಗೆ ಪದ್ಧತಿಯಲ್ಲೂ ಎಸ್ಸಿ ಎಸ್ಟಿ ಮೀಸಲಾತಿ ಕಲ್ಪಿಸಿ. ಕೇಂದ್ರ ಸರ್ಕಾರವೂ ಎಸ್ಸಿ ಎಸ್ಟಿ ಜನಸಂಖ್ಯೆಗೆ ಅನುಗುಣವಾಗಿ ಕಾಯ್ದೆ ರಚಿಸಿ ಬಜೆಟ್ನಲ್ಲಿ ಅನುದಾನ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಅವರು ಆಗ್ರಹಿಸಿದರು. ಈ ಸಂಬಂಧ ಸರ್ಕಾರದ ಕಣ್ತೆರೆಸಲು ಹೋರಾಟ ಮಾಡಲಗುತ್ತಿದೆ ಎಂದು ಅವರು ವಿವರಿಸಿದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications