ಹುಬ್ಬಳ್ಳಿಯಲ್ಲಿ ಎಮ್ಮೆಯೊಂದಿಗೆ ಪ್ರತಿಭಟನೆ, ಮರ ಏರಿದ ಹೋರಾಟಗಾರ
ಹುಬ್ಬಳ್ಳಿ, ಜೂನ್ 8: ನಗರದ ಸಂಗ್ರಾಮ ಸೇನೆ ಕಾರ್ಯಕರ್ತರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಎದುರು ಎಮ್ಮೆಯೊಂದಿಗೆ ಗುರುವಾರ ಪ್ರತಿಭಟನೆ ನಡೆಸಿದರು.
ನಗರದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದ್ದು, ನಡೆಯುತ್ತಿರುವ ಕಾಮಗಾರಿಗಳಿಂದ ಜನರು ಕಿರಿಕಿರಿ ಅನುಭವಿಸುತ್ತಿದ್ದಾರೆ. ಎರಡು ವರ್ಷಗಳಿಂದ ನಡೆಯುತ್ತಿರುವ ಮಹಾದಾಯಿ, ಕಳಸಾ-ಬಂಡೂರಿ ಯೋಜನೆ ಅನುಷ್ಠಾನ ಕುರಿತು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಠರಾವು ಮಾಡದಿರುವ ಕ್ರಮವನ್ನು ಖಂಡಿಸಿದರು.

ಪಾಲಿಕೆ ಕಾರ್ಯವೈಖರಿ ಕುರಿತಾದ ಫಲಕಗಳನ್ನು ಎಮ್ಮೆಯ ಮೇಲೆ ಹಾಕಿಕೊಂಡು ಬಂದ ಹತ್ತಾರು ಕಾರ್ಯಕರ್ತರು ಸ್ಥಳೀಯ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಹಲವು ವರ್ಷಗಳಿಂದ ಬಿಆರ್ ಟಿಎಸ್ ಕಾಮಗಾರಿ ನಡೆದಿದ್ದು, ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ ಎಂದರು.
ಕಾಲಮಿತಿ ಮುಗಿದರೂ ಕಾಮಗಾರಿ ಮಾತ್ರ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ. ಕರ್ನಾಟಕ ನಗರ ನೀರು ಪೂರೈಕೆ ಹಾಗೂ ಒಳಚರಂಡಿ ಮಂಡಳಿ ನಗರದ ಎಲ್ಲ ಭಾಗಗಳಿಗೂ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುತ್ತಿಲ್ಲ ಎಂದು ಹೇಳಿದರು.
ಇನ್ನು ಮಹಾದಾಯಿ, ಕಳಸಾ-ಬಂಡೂರಿ ಯೋಜನೆ ಕುರಿತು ಪಾಲಿಕೆಗೆ ಎಳ್ಳಷ್ಟೂ ಕಾಳಜಿ ಇಲ್ಲ. ಈ ಕುರಿತು ಸಾಮಾನ್ಯ ಸಭೆಯಲ್ಲಿ ಕನಿಷ್ಠ ಒಂದು ಬಾರಿಯಾದರೂ ನಿರ್ಣಯ ಕೈಗೊಂಡಿಲ್ಲ ಎಂದು ಸಂಗ್ರಾಮ ಸೇನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಮರ ಏರಿ ಕುಳಿತು ಪ್ರತಿಭಟನೆ
ಜೂನ್ ಹನ್ನೆರಡರಂದು ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ಗೆ ಪಾಲಿಕೆ ಮೇಯರ್ ಬೆಂಬಲ ಸೂಚಿಸಬೇಕು ಎಂದು ಆಗ್ರಹಿಸಿ ಪಾಲಿಕೆ ಆವರಣದಲ್ಲಿ ಸೇನೆಯ ಕಾರ್ಯಕರ್ತ ಬಸವಯ್ಯ ಮರ ಏರಿ ಕುಳಿತು ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಬಂದ ಮೇಯರ್ ಡಿ.ಕೆ.ಚೌವ್ಹಾಣ್ ಹಾಗೂ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ ಅವರು ಬಸವಯ್ಯ ಅವರನ್ನು ಮರದಿಂದ ಕೆಳಗೆ ಇಳಿಯುವಂತೆ ವಿನಂತಿಸಿದರು. ಆದರೆ ಬಂದ್ಗೆ ಬೆಂಬಲ ಸೂಚಿಸುತ್ತೇನೆ ಎಂದು ಭರವಸೆ ನೀಡುವವರೆಗೂ ಇಳಿಯುವುದಿಲ್ಲ ಎಂದು ಪಟ್ಟು ಹಿಡಿದರು.
ಆ ನಂತರ ಮೇಯರ್ ಅವರು ಬಂದ್ಗೆ ಬೆಂಬಲ ಸೂಚಿಸುವುದಾಗಿ ಭರವಸೆ ನೀಡಿದ ನಂತರ ಬಸವಯ್ಯ ಮರದಿಂದ ಕೆಳಗೆ ಇಳಿದರು.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications