ಆನ್ ಲೈನ್ ಮಾರಾಟದ ಮೇಲೆ ನಿಯಂತ್ರಣ ಹಾಕುವಂತೆ ಪ್ರತಿಭಟನೆ
ಹುಬ್ಬಳ್ಳಿ, ಜನವರಿ 08 : ವಿದೇಶಿ ಕಂಪನಿಗಳು ದೇಶದಾದ್ಯಂತ ಆನ್ ಲೈನ್ ವ್ಯವಹಾರದ ಮೂಲಕ ದೇಶದ ಮೊಬೈಲ್ ಮಾರಾಟಗಾರರನ್ನು ನುಂಗಿ ಹಾಕುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿ ಭಾರತೀಯ ಮೊಬೈಲ್ ವ್ಯಾಪಾರಸ್ಥರ ಅಸೋಸಿಯೇಷನ್ (ಎಐಎಮ್ ಆರ್ ಎ), ದ ಕಾನ್ಫಿಡರೇಶನ್ ಅಫ್ ಆಲ್ ಇಂಡಿಯಾ ಟ್ರೇಡರ್ಸ್ (ಸಿಎಐಟಿ) ವತಿಯಿಂದ ನಗರದ ತಹಶಿಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ದೇಶದಾದ್ಯಂತ ಆನ್ ಲೈನ್ ಮಾರಾಟ ಹಾಗೂ ವ್ಯವಹಾರದ ವಿರುದ್ಧ ನಡೆಸಲಾಗುತ್ತಿರುವ ಆಂದೋಲನಕ್ಕೆ ನಗರದ ಮೊಬೈಲ್ ಮಾರಾಟಗಾರ ಸಂಘಗಳು ಬೆಂಬಲ ಸೂಚಿಸಿ ಸಿಬಿಟಿ ಹತ್ತಿರದ ಹರ್ಷಾ ಕಾಂಪ್ಲೆಕ್ಸ್ ನಿಂದ ಮಿನಿ ವಿಧಾನ ಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ದೇಶದಲ್ಲಿ ಆನ್ ಲೈನ್ ಮಾರಾಟದ ಸಂಪೂರ್ಣ ಲಾಭವನ್ನು ಕೇವಲ ವಿದೇಶಿ ಕಂಪನಿಗಳು ಪಡೆಯುತ್ತಿದ್ದು, ಪರಿಣಾಮ ದೇಶದ ಶೇ.70 ರಷ್ಟು ಮೊಬೈಲ್ ಮಾರಾಟಗಾರರಿಗೆ ಅಪಾರವಾದ ನಷ್ಟವಾಗುತ್ತಿದೆ ಎಂದು ಅಳಲು ತೊಡಿಕೊಂಡರು.

ಅಲ್ಲದೇ ಒಂದು ಅಂದಾಜಿನ ಪ್ರಕಾರ 40 ಸಾವಿರ ಮೊಬೈಲ್ ಮಾರಾಟಗಾರರು ತಮ್ಮ ವ್ಯವಹಾರವನ್ನು ಸ್ಥಗಿತಗೊಳಿಸಿದ್ದು, ಎರಡು ತಿಂಗಳಲ್ಲಿ ಸುಮಾರು 6 ಲಕ್ಷ ಉದ್ಯೋಗಿಗಳು ನಿರುದ್ಯೋಗಿಗಳಾಗಿದ್ದಾರೆ. ಕೂಡಲೇ ಆನ್ ಲೈನ್ ಮಾರಾಟ ಕಂಪನಿಗಳ ಮೇಲೆ ಸರ್ಕಾರ ನಿಯಂತ್ರಣ ಹಾಕಬೇಕೆಂದು ಆಗ್ರಹಿಸಿದರು.
ಇನ್ನೂ ಆನ್ ಲೈನ್ ಮಾರಾಟ ಕಂಪನಿಗಳು ಇ - ಕಾಮರ್ಸ್ ಕಂಪನಿಗಳು ಎಫ್ ಡಿ ಐ ಕಾಯಿದೆಯನ್ನು ಕಡ್ಡಾಯವಾಗಿ ಪಾಲಿಸಬೇಕು, ಆನ್ ಲೈನ್ ಮಾರಾಟದಲ್ಲಿ ಹೆಚ್ಚು ರಿಯಾಯಿತಿ ಕೊಡುವುದನ್ನು ನಿಲ್ಲಿಸಬೇಕು, ಕೆಲವೊಂದು ವಸ್ತುಗಳನ್ನು ಇ-ಕಾಮರ್ಸ್ ಮಾರಾಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.
ಆನ್ ಲೈನ್ ಮಾರಾಟ ಕಂಪನಿಗಳ ಮೇಲೆ ಸರ್ಕಾರ ನಿಯಂತ್ರಣ ಹೇರಬೇಕು ಜೊತೆಗೆ ಆನ್ ಲೈನ್ ಮತ್ತು ಆಫ್ ಲೈನ್ ನಲ್ಲಿ ಮಾರಾಟ ಮಾಡುವ ವಸ್ತುಗಳ ಬೆಲೆ ಒಂದೇ ತೆರನಾಗಿ ಮಾಡಬೇಕೆಂದು ತಹಶೀಲ್ದಾರರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂತೋಷ ಮುರಗಿ ಪಾಟೀಲ, ನಾಗರಾಜ ರಟಗಲ್, ಶ್ರೀನಿವಾಸ್ ರತನ, ಜಮೀರ ಮದ್ದಿನ್, ಇಮ್ರಾನ್ ಸವಣೂರು, ಆಶೀಫ್ ಚವ್ಹಾಣ, ಹಿತೇಶ ಜೈನ್, ನಿಖಿಲ ಜೈನ್, ಸಿದ್ದಾರ್ಥ ಹತ್ತಿಕೊಳ, ಅಮರ ಪಿಕಾರೆ ಸೇರಿದಂತೆ ಮುಂತಾದವರು ಇದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications