ಈದ್ಗಾ ಮೈದಾನದ ಗಣೇಶ ವಿಸರ್ಜನೆ ಹೆಸರಲ್ಲಿ ಪ್ರಚೋದನಾಕಾರಿ ಭಾಷಣ: ಪ್ರಮೋದ್ ಮುತಾಲಿಕ್ ವಿರುದ್ಧ ದೂರು
ಹುಬ್ಬಳ್ಳಿ, ಸೆಪ್ಟೆಂಬರ್, 22: ಅನ್ಯ ಧರ್ಮಗಳ ಭಾವನೆಗಳಿಗೆ ಆಘಾತವನ್ನುಂಟು ಮಾಡುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪ ಹಿನ್ನೆಲೆ ಶ್ರೀರಾಮಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಕಲಂ 153(ಎ), 295(ಎ) ಐಪಿಸಿ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಮಹಾನಗರ ಪಾಲಿಕೆ 8 ವಲಯದ ಸಹಾಯ ಆಯುಕ್ತ ಚಂದ್ರಶೇಖರಗೌಡ ಎಂಬುವವರು ದೂರು ನೀಡಿದವರಾಗಿದ್ದಾರೆ.
ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದ ಗಣೇಶ ವಿಸರ್ಜನೆಗೆ ಪ್ರಮೋದ್ ಮುತಾಲಿಕ್ ಭೇಟಿ ನೀಡಿ, ಗಣೇಶ ದರ್ಶನ ಪಡೆದುಕೊಂಡಿದ್ದರು. ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪ ಮಾಡಲಾಗಿದೆ. ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ತಾಕತ್ತು ಹಿಂದೂ ಸಮಾಜಕ್ಕಿದೆ. ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿರೋಧಿಸುವವರು ದೇಶದ್ರೋಹಿಗಳು ಎಂದು ಹೇಳಿದ್ದರು.

ಅಂಜುಮನ್ ಸಂಸ್ಥೆಯವರ ದುರದ್ದೇಶ ಏನೆಂದು ಈಗ ಎಲ್ಲರಿಗೂ ಗೊತ್ತಾಗಿದೆ. ಇವರು ದೇಶ ವಿಭಜನೆ ಮಾಡಿದ ದ್ರೋಹಿಗಳು. ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ತಾಕತ್ತು ಹಿಂದೂ ಸಮಾಜಕ್ಕಿದೆ. ನಿಮ್ಮ ನಮಾಜ್ಗೂ ನಾವು ಅಡ್ಡಿಪಡಿಸಬೇಕಾಗುತ್ತದೆ. ರಾಣಿ ಚೆನ್ನಮ್ಮ ಮೈದಾನದಲ್ಲಿ ನಮಾಜ್ಗೆ ಅವಕಾಶ ಕೊಡದಂತೆ ಕೋರ್ಟ್ಗೆ ಹೋಗುತ್ತೇವೆ. ಇದು ಪಾಕಿಸ್ತಾನವಲ್ಲ, ನಿಮ್ಮಪ್ಪನ ಆಸ್ತಿಯಲ್ಲ, ವಿರೋಧಿಗಳ ಸೊಕ್ಕಡಗಿಸುವ ತಾಕತ್ತು ನಮಗಿದೆ ಅಂತ ವಾಗ್ದಾಳಿ ಮಾಡಿದ್ದರು.
ಮೂರು ದಿನ ಯಾವುದೇ ಗೊಂದಲ್ಲ ಇಲ್ಲದೆ ಗಣೇಶ ಪ್ರತಿಷ್ಠಾಪನೆಯಾಗಿದೆ. ಹಿಂದೂ ಸಮಾಜ ಶಾಂತಿಯಿಂದ ಆಚರೆಣೆ ಮಾಡಿದೆ. ಸದ್ಯ ಈದ್ಗಾ ಮೈದಾನ ಶುದ್ದಿಯಾಗಿದೆ. ಗಣೇಶ ಉತ್ಸವಕ್ಕೆ ವಿರೋಧ ಮಾಡಿದವರು ದೇಶ ವಿರೋಧಿಗಳು, ಅಧರ್ಮಿಯರು. ನಾವು ಅದನ್ನು ಮೆಟ್ಟಿ ನಿಂತು ಆಚರಣೆ ಮಾಡಿದ್ದೇವೆ ಎಂದು ಹೇಳಿದ್ದರು.
ಸೆಪ್ಟೆಂಬರ್ 19ರಂದು ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿತ್ತು. ಕಳೆದ ವರ್ಷದಂತೆ ಈ ವರ್ಷವು ಹೋರಾಟ ಮಾಡಿದ ಬಳಿಕವೇ ಪಾಲಿಕೆ ಹಬ್ಬಕ್ಕೆ ಅನುಮತಿ ಕೊಟ್ಟಿತ್ತು. ಮೂರು ದಿನಗಳ ಕಾಲ ಕೆಲ ಷರತ್ತು ಹಾಕಿ ಪಾಲಿಕೆ ಅನುಮತಿ ಕೊಟ್ಟಿತ್ತು. ಮೂರು ದಿನಗಳ ಕಾಲ ಈದ್ಗಾ ಮೈದಾನದಲ್ಲಿ ವಿಶೇಷ ಪೂಜೆ ಹೋಮ ಹವನ ಹಮ್ಮಿಕೊಳ್ಳಲಾಗಿತ್ತು.
ನಾಡಿನ ಅನೇಕ ಜನ ಬಂದು ಈದ್ಗಾ ಮೈದಾನದ ಗಣೇಶನ ದರ್ಶನ ಪಡೆದಿದ್ದರು. ನಿನ್ನೆ ಮಧ್ಯಾಹ್ನ 12 ಗಂಟೆಗೆ ವಿಸರ್ಜನಾ ಮೆರವಣಿಗೆ ಆರಂಭವಾಗಿದ್ದು, ಸಂಜೆ 6 ಗಂಟೆ ವೇಳೆಗೆ ಹುಬ್ಬಳ್ಳಿಯ ಗಾಜಿನ ಮನೆಯ ಪಕ್ಕ ಇರುವ ಬಾವಿಯಲ್ಲಿ ಗಣೇಶನ ವಿಸರ್ಜನೆ ಮಾಡಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications