ರೈತನ ಬಾಯಿಯಲ್ಲಿ ಬೂಟು ಇಟ್ಟು ದೌರ್ಜನ್ಯ: ಪಿಎಸ್ಐಗೆ ಕಠಿಣ ಶಿಕ್ಷೆಗೆ ಆಗ್ರಹ
ಹುಬ್ಬಳ್ಳಿ, ಅಕ್ಟೋಬರ್ 05: ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ರೈತನೋರ್ವ ಟ್ರಾಕ್ಟರ್ ಚಾಲನೆ ಮಾಡಿಕೊಂಡು ಬರುವಾಗ ಪಿಎಸ್ಐ ಮಣಿಕಂಠ ರೈತನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ಆ ರೈತನ ಬಾಯಿಯಲ್ಲಿ ಬೂಟ್ ಹಾಕಿದ್ದು ಅಕ್ಷಮ್ಯ ಅಪರಾಧ ಆಗಿದ್ದು ತಪ್ಪು ಎಸಗಿದ ಪಿಎಸ್ಐಯನ್ನು ಖಾಯಂ ಸೇವೆಯಿಂದ ವಜಾ ಮಾಡಬೇಕು ಎಂದು ರತ್ನ ಭಾರತ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಮಹದಾಯಿ ಹೋರಾಟಗಾರ ಹೇಮನಗೌಡರ ಬಸನಗೌಡರ ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಅಮಾಯಕ ರೈತನ ಮೇಲೆ ಹಲ್ಲೆ ಸರಿಯಲ್ಲ ಈಗಾಗಲೇ ಪಿಎಸ್ ಐ ಮಣಿಕಂಠ ಅವರಮ್ನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತು ಮಾಡಲಾಗಿದೆ. ಬಳ್ಳಾರಿ ವಲಯದ ಐಜಿ ಲೋಕೇಶ್ ಕುಮಾರ್ ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಆದರೆ ಇಷ್ಟೇ ಶಿಕ್ಷೆ ಆಗಬಾರದು. ಮಾನವೀಯತೆ ಇಲ್ಲದ ರೈತರ ಬಗ್ಗೆ ಅಸಡ್ಡೆ ತೋರಿದ ಪೊಲೀಸ್ ಅಧಿಕಾರಿಯನ್ನು ಸೇವೆಯಿಂದ ವಜಾ ಮಾಡಲು ಒತ್ತಾಯ ಮಾಡಿದರು .
ಪಿಎಸ್ಐ ಮಣಿಕಂಠ ಎನ್ನುವಾತ ಮಸ್ಕಿ ಪಟ್ಟಣದಲ್ಲಿ ಅಕ್ರಮ ಮರಳು ಸಾಗಾಟ ಆರೋಪದ ಮೇಲೆ ಟ್ರ್ಯಾಕ್ಟರ್ ಚಾಲಕ ನಿರುಪಾದಿ ಎನ್ನುವರಿಗೆ ಮನಬಂದಂತೆ ಬಾಸುಂಡೆ ಬರುವಂತೆ ಥಳಿಸಿದ್ದಾರೆ. ಅಲ್ಲದೇ ಬಾಯಿಯಲ್ಲಿ ಬೂಟ್ ಹಾಕಿದ್ದಾರೆ ಎಂದು ನಿರುಪಾದಿ ಪತ್ನಿ ಲಕ್ಷ್ಮೀ ನೀಡಿದ್ದ ದೂರಿನ ಅನ್ವಯ ಮಸ್ಕಿ ಠಾಣೆಯಲ್ಲೇ ಎಫ್ಐಆರ್ ದಾಖಲಾಗಿದೆ.

ಅಲ್ಲದೇ ವಾಲ್ಮೀಕಿ ಸಂಘ ಹಾಗೂ ವಿವಿಧ ರೈತ ಪರ ಸಂಘಟನೆಗಳು ಮಣಿಕಂಠ ಅವರನ್ನು ಅಮಾನತು ಮಾಡುವಂತೆ ಠಾಣೆ ಮುಂದೆ ಪ್ರತಿಭಟನೆ ಮಾಡಿದ್ದರು . ಇದೀಗ ಈ ಪ್ರಕರಣದಲ್ಲಿ ಪಿಎಸ್ಐ ಮಣಿಕಂಠ ಅವರನ್ನು ಅಮಾನತು ಮಾಡಲಾಗಿದೆ. ಆದರೆ ಇಷ್ಟೇ ಶಿಕ್ಷೆ ಕೊಟ್ಟರೇ ಆ ಪೊಲೀಸ್ ಅಧಿಕಾರಿ ಮತ್ತೇ ಲಂಚ ಕೊಟ್ಟು ಸೇವೆಗೆ ಬರುತ್ತಾರೆ. ಆಗ ಅವರ ದೌರ್ಜನ್ಯ ಮುಂದುವರಿಯುತ್ತದೆ. ಹೀಗಾಗಿ ಈ ಶಿಕ್ಷೆ ಬೇಡ ಎಂದು ಹೇಮನಗೌಡರ ಬಸನಗೌಡರ ಹೇಳಿದ್ದು, ತಾವು ಗೃಹ ಸಚಿವರಾದ ಜಿ ಪರಮೇಶ್ವರ ಅವರಿಗೆ ಸಾಕಷ್ಟು ಸಲ ದೂರವಾಣಿ ಮೂಲಕ ಸಂಪರ್ಕ ಮಾಡಿ ಪ್ರಕರಣ ಕುರಿತು ಮಾಹಿತಿ ಕೊಡಲು ಪ್ರಯತ್ನ ಪಟ್ಟರು ಸಚಿವರು ದೂರವಾಣಿ ಕರೆ ಸ್ವೀಕಾರ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಘಟನೆಯ ಹಿನ್ನೆಲೆ ಏನು..?
ಸೆಪ್ಟೆಂಬರ್ 20ರಂದು ಮಸ್ಕಿ ಪಟ್ಟಣದಲ್ಲಿ ನಿರುಪಾದಿ ಎಂಬುವರು ಟ್ರ್ಯಾಕ್ಟರ್ನಲ್ಲಿ ಮರಳು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಪಿಎಸ್ಐ ಮಣಿಕಂಠ ಟ್ರ್ಯಾಕ್ಟರ್ ತಡೆದು ಮರಳು ತೆಗೆದುಕೊಂಡು ಹೋಗಲು 20ಸಾವಿರ ರೂಗೆ ಬೇಡಿಕೆ ಇಟ್ಟಿದ್ದರು. ಅಲ್ಲದೇ ತನ್ನ ಜೀಪ್ನಲ್ಲಿದ್ದ ಪೈಪ್ ತೆಗೆದುಕೊಂಡು ನಿರುಪಾದಿ ಅವರಿಗೆ ಮನಬಂದಂತೆ ಥಳಿಸಿದ್ದರು ಎನ್ನಲಾಗಿತ್ತು. ಅಲ್ಲದೇ ಪಿಎಸ್ಐ ಮಣಿಕಂಠ ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿತ್ತು. ಹೀಗಾಗಿ ಹಲ್ಲೆ, ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕು ಘಟಕ ಹಾಗೂ ರೈತ ಸಂಘಟನೆಗಳು ಪಿಎಸ್ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಲಿಂಗಸೂರು ಡಿವೈಎಸ್ಪಿ ಮಂಜುನಾಥ ಹಾಗೂ ಸಿಪಿಐ ಬಾಲಚಂದ್ರ ಲಕ್ಕಂ ಅವರಿಗೆ ಮನವಿ ಸಲ್ಲಿಸಿದ್ದವು. ಆದರೆ ಈಗ ಅಮಾನತು ಬೇಡ. ಕಠಿಣ ಶಿಕ್ಷೆ ಆಗಲಿ ಎಂದು ಹೇಮನಗೌಡರ ಬಸನಗೌಡರ ಒತ್ತಾಯ ಮಾಡಿದರು .
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications