Railway Updates: ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸೇವೆಗಳಲ್ಲಿ ಬದಲಾವಣೆ
ಹುಬ್ಬಳ್ಳಿ, ಡಿಸೆಂಬರ್ 24: ನಿಟ್ಟೂರು ಮತ್ತು ಸಂಪಿಗೆ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 64ರಲ್ಲಿ ತಾತ್ಕಾಲಿಕ ಗರ್ಡರ್ಗಳನ್ನು ಸೇರಿಸಲು ಮತ್ತು ತೆಗೆದುಹಾಕಲು ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗಿನ ರೈಲುಗಳ ಸೇವೆಗಳಲ್ಲಿ ಬದಲಾವಣೆ ಮಾಡಲಾಗುತ್ತಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಜನವರಿ 2 ಮತ್ತು 9, 2025 ರಂದು ತುಮಕೂರು-ಚಾಮರಾಜನಗರ ಡೈಲಿ ಪ್ಯಾಸೆಂಜರ್ ಸ್ಪೆಷಲ್ (07346), ಚಾಮರಾಜನಗರ-ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ (07328), ಚಿಕ್ಕಮಗಳೂರು-ಯಶವಂತಪುರ ಡೈಲಿ ಎಕ್ಸ್ ಪ್ರೆಸ್ (16239), ಯಶವಂತಪುರ-ಚಿಕ್ಕಮಗಳೂರು ಡೈಲಿ ಎಕ್ಸ್ ಪ್ರೆಸ್ (16240), ತುಮಕೂರು-ಕೆಎಸ್ಆರ್ ಬೆಂಗಳೂರು ಮೆಮು ಸ್ಪೆಷಲ್ (06576), ಕೆಎಸ್ಆರ್ ಬೆಂಗಳೂರು-ತುಮಕೂರು ಮೆಮು ವಿಶೇಷ (06575), ಯಶವಂತಪುರ-ಶಿವಮೊಗ್ಗ ಟೌನ್ ಇಂಟರ್ ಸಿಟಿ ಡೈಲಿ ಎಕ್ಸ್ ಪ್ರೆಸ್ (16579) ಮತ್ತು ಶಿವಮೊಗ್ಗ ಟೌನ್-ಯಶವಂತಪುರ ಇಂಟರ್ ಸಿಟಿ ಡೈಲಿ ಎಕ್ಸ್ ಪ್ರೆಸ್ (16580) ರೈಲುಗಳ ಸಂಚಾರ ತಾತ್ಕಾಲಿಕ ರದ್ದಾಗಲಿದೆ.

ಭಾಗಶಃ ರದ್ದು
ಜನವರಿ 02 ಮತ್ತು 09, 2025 ರಂದು ಕೆಎಸ್ಆರ್ ಬೆಂಗಳೂರು-ತುಮಕೂರು ಮೆಮು ವಿಶೇಷ (06571) ರೈಲು ಹಿರೇಹಳ್ಳಿ-ತುಮಕೂರು ನಿಲ್ದಾಣಗಳ ನಡುವೆ, ತುಮಕೂರು-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ (06572) ರೈಲು ತುಮಕೂರು-ಹಿರೇಹಳ್ಳಿ ನಿಲ್ದಾಣಗಳ ನಡುವೆ, ತಾಳಗುಪ್ಪ-ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ (20652) ರೈಲು ಅರಸೀಕೆರೆ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ, ಕೆಎಸ್ಆರ್ ಬೆಂಗಳೂರು-ಧಾರವಾಡ ಸಿದ್ಧಗಂಗಾ ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ (12725) ರೈಲು ಕೆಎಸ್ಆರ್ ಬೆಂಗಳೂರು-ಅರಸೀಕೆರೆ ನಿಲ್ದಾಣಗಳ ನಡುವೆ, ಧಾರವಾಡ-ಕೆಎಸ್ಆರ್ ಬೆಂಗಳೂರು ಸಿದ್ಧಗಂಗಾ ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ (12726) ರೈಲು ಅರಸೀಕೆರೆ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಮತ್ತು ತುಮಕೂರು-ಯಶವಂತಪುರ ಮೆಮು ವಿಶೇಷ (06201) ರೈಲು ತುಮಕೂರು-ಹಿರೇಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿವೆ.
ರೈಲುಗಳ ಮಾರ್ಗ ಬದಲಾವಣೆ
ಜನವರಿ 1 ಮತ್ತು 8ರಂದು ವಾಸ್ಕೋ ಡ ಗಾಮಾದಿಂದ ಹೊರಡುವ ರೈಲು ಸಂಖ್ಯೆ 17310 ವಾಸ್ಕೋ ಡ ಗಾಮಾ-ಯಶವಂತಪುರ ಡೈಲಿ ಎಕ್ಸ್ ಪ್ರೆಸ್ ರೈಲು ಅರಸೀಕೆರೆ, ಹಾಸನ, ನೆಲಮಂಗಲ ಮತ್ತು ಯಶವಂತಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಈ ರೈಲು ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ತನ್ನ ನಿಯಮಿತ ನಿಲುಗಡೆ ಇರುವುದಿಲ್ಲ.
ರೈಲು ಸಂಖ್ಯೆ 22687 ಮೈಸೂರು-ವಾರಣಾಸಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಜನವರಿ 2 ಮತ್ತು 9, 2025 ರಂದು ಮೈಸೂರಿನಿಂದ ಹೊರಡುವ ರೈಲು ಯಶವಂತಪುರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಈ ರೈಲಿನ ನಿಯಮಿತ ನಿಲುಗಡೆ ತುಮಕೂರು ನಿಲ್ದಾಣದಲ್ಲಿ ಇರುವುದಿಲ್ಲ.

ರೈಲು ಸಂಖ್ಯೆ 20667 ಯಶವಂತಪುರ-ಜೈಪುರ ಸಾಪ್ತಾಹಿಕ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಜನವರಿ 2 ಮತ್ತು 9, 2025 ರಂದು ಯಶವಂತಪುರ ನಿಲ್ದಾಣದಿಂದ ಹೊರಡುವ ಈ ರೈಲು ಯಶವಂತಪುರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಈ ರೈಲಿನ ನಿಯಮಿತ ನಿಲುಗಡೆ ತುಮಕೂರು ನಿಲ್ದಾಣದಲ್ಲಿ ತಪ್ಪಿರುತ್ತದೆ.
ರೈಲು ಸಂಖ್ಯೆ 19668 ಮೈಸೂರು-ಉದಯಪುರ ಸಿಟಿ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಜನವರಿ 2 ಮತ್ತು 9, 2025 ರಂದು ಮೈಸೂರಿನಿಂದ ಹೊರಡುವ ಈ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮತ್ತು ದಾವಣಗೆರೆ ನಿಲ್ದಾಣಗಳ ಮೂಲಕ ಚಲಿಸಲಿದೆ.
ಜನವರಿ 2 ಮತ್ತು 9, 2025 ರಂದು ರೈಲು ಸಂಖ್ಯೆ 17326 ಮೈಸೂರು-ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್ ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಈ ರೈಲು ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ತನ್ನ ನಿಯಮಿತ ನಿಲುಗಡೆ ತಪ್ಪಿರುತ್ತದೆ.
ರೈಲುಗಳ ನಿಯಂತ್ರಣ
ಡಿಸೆಂಬರ್ 31, 2024 ಮತ್ತು ಜನವರಿ 7, 2025 ರಂದು ಬಿಕಾನೇರ್ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 16588 ಬಿಕಾನೇರ್-ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 120 ನಿಮಿಷ ನಿಯಂತ್ರಿಸಲಾಗುವುದು.
ಜನವರಿ 2 ಮತ್ತು 9 ರಂದು ತಮ್ಮ ಮೂಲ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12629 ಯಶವಂತಪುರ-ಹಜರತ್ ನಿಜಾಮುದ್ದೀನ್ ದ್ವಿ-ಸಾಪ್ತಾಹಿಕ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 50 ನಿಮಿಷ, ರೈಲು ಸಂಖ್ಯೆ 20651 ಕೆಎಸ್ಆರ್ ಬೆಂಗಳೂರು-ತಾಳಗುಪ್ಪ ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ10 ನಿಮಿಷ, ರೈಲು ಸಂಖ್ಯೆ 17325 ಬೆಳಗಾವಿ-ಮೈಸೂರು ವಿಶ್ವಮಾನವ ಡೈಲಿ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 30 ನಿಮಿಷ ಮತ್ತು ರೈಲು ಸಂಖ್ಯೆ 07345 ಚಾಮರಾಜನಗರ-ತುಮಕೂರು ದೈನಂದಿನ ಪ್ಯಾಸೆಂಜರ್ ರೈಲು ಮಾರ್ಗ ಮಧ್ಯದಲ್ಲಿ 120 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಸಮಯ ಮರು ನಿಗದಿ
ರೈಲು ಸಂಖ್ಯೆ 17309 ಯಶವಂತಪುರ-ವಾಸ್ಕೋ ಡ ಗಾಮಾ ಡೈಲಿ ಎಕ್ಸ್ ಪ್ರೆಸ್ ಜನವರಿ 2 ಮತ್ತು 9 ರಂದು ಯಶವಂತಪುರ ನಿಲ್ದಾಣದಿಂದ 30 ನಿಮಿಷ ತಡವಾಗಿ ಹೊರಡಲಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications