Ramadan 2023: ಹುಬ್ಬಳ್ಳಿಯಲ್ಲಿ ರಂಜಾನ್ ಸಂಭ್ರಮ, ಭಾವೈಕ್ಯತೆಗೆ ಸಾಕ್ಷಿಯಾದ ಆಚರಣೆ
ಹುಬ್ಬಳ್ಳಿ, ಏಪ್ರಿಲ್ 22: ಹಬ್ಬ ಯಾವುದೇ ಇರಲಿ ಹುಬ್ಬಳ್ಳಿಯಲ್ಲಿ ಆಚರಣೆ ಅಂದರೆ ನಿಜಕ್ಕೂ ಅದೊಂದು ವಿಶೇಷವೇ ಸರಿ. ಸಣ್ಣ ಹಬ್ಬವಿದ್ದರೂ ಅದ್ಧೂರಿಯಾಗಿ ಆಚರಣೆ ಮಾಡುವ ಹುಬ್ಬಳ್ಳಿಯಲ್ಲಿ ಮುಸ್ಲಿಂ ಧರ್ಮದ ಪವಿತ್ರ ರಂಜಾನ್ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ಹುಬ್ಬಳ್ಳಿಯ ಪ್ರತಿಷ್ಠಿತ ಈದ್ಗಾ ಮೈದಾನ ಸೇರಿದಂತೆ ಲ್ಯಾಮಿಂಗ್ಟನ್ ರೋಡ್, ಚೆನ್ನಮ್ಮ ಸರ್ಕಲ್, ಸಂಗೊಳ್ಳಿ ರಾಯಣ್ಣ ಸರ್ಕಲ್ ಆವರಣದಲ್ಲಿ ಲಕ್ಷಾಂತರ ಮುಸ್ಲಿಂ ಬಾಂಧವರು ರಂಜಾನ್ ಕೊನೆಯ ದಿನದ ಪ್ರಾರ್ಥನೆ ಸಲ್ಲಿಸಿದರು. ಮುಸ್ಲಿಮರ ಪವಿತ್ರ ಮಾಸ ರಂಜಾನ್ ಶುಕ್ರವಾರ ಮುಗಿದಿದ್ದು, ಶನಿವಾರ ಶವ್ವಲ್ ಮೊದಲನೇ ದಿನದಂದು ಈದ್-ಉಲ್- ಫಿತರ್ (ರಂಜಾನ್) ಹಬ್ಬ ಆಚರಿಸಿದ್ದಾರೆ.

ರಂಜಾನ್ ಹಬ್ಬದ ಸಂಪ್ರದಾಯದಂತೆ ಒಂದು ತಿಂಗಳ ಕಾಲ ಮುಸ್ಲಿಮರು ಉಪವಾಸ ವೃತ ಆಚರಿಸಿದ್ದಾರೆ. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಅನ್ನ, ನೀರು ಬಿಟ್ಟು ಉಪವಾಸ ವೃತ ಆಚರಿಸುತ್ತಾರೆ. ಉಪವಾಸ (ರೋಜಾ) ಮಾತ್ರವಲ್ಲದೇ ದಾನ ( ಝಕಾತ್) ನಮಾಜ್, ಕುರಾನ್ ಪಠನ, ತರಾವೀಹ್ ಮಾಡುವ ಮೂಲಕ ದೇವರನ್ನು ( ಅಲ್ಲಾಹ್ ನನ್ನು) ಸ್ಮೃತಿಸಲಾಗುತ್ತದೆ.
ಇನ್ನೂ ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ, ಇದು ಒಂಬತ್ತನೇ ತಿಂಗಳು. ಲೂನಾರ್ ಕ್ಯಾಲೆಂಡರ್ ಅನ್ನು ಇಸ್ಲಾಂ ಧರ್ಮದವರು ಅನುಸರಿಸುತ್ತಾರೆ. ಕಾರಣ, ಅದರಲ್ಲಿ ರಂಜಾನ್ ದಿನಾಂಕ ಬದಲಾಗುತ್ತಿರುತ್ತದೆ. ಈ ಆಚರಣೆಯ ನಂಬಿಕೆಯಂತೆ, ಅಲ್ಲಾನೊಂದಿಗಿನ ತಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಲು, ಉಪವಾಸ ಎಂಬುದು ಆತ್ಮಸ್ಥೈರ್ಯ ಹೆಚ್ಚಿಸಲು, ಹಸಿವಿನ ಮಹತ್ವ ಮತ್ತು ಅದೃಷ್ಟ ಸಂಪಾದನೆ ಮಾಡಲು ಶ್ರದ್ಧೆಯಿಂದ ಉಪವಾಸವನ್ನು ಆಚರಿಸುತ್ತಾರೆ.

ತಿಂಗಳ ಪ್ರತಿಯೊಂದು ದಿನ ಮುಸ್ಲಿಮರು, ಈ ಹಬ್ಬದ ಆಚರಣೆ ಮೂಲಕ ಅಲ್ಲಾನಲ್ಲಿ ನಂಬಿಕೆ ಇಟ್ಟುಕೊಳ್ಳುತ್ತಾರೆ. ಪ್ರಾರ್ಥನೆ, ಕುರಾನ್ ಪಠಣ ಮತ್ತು ದಾನ-ಧರ್ಮದಲ್ಲಿ ತೊಡಗುವುದು ಮಾತ್ರವಲ್ಲದೇ ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ತಮ್ಮ ಒಡನಾಟವನ್ನು ಇನ್ನಷ್ಟು ಗಟ್ಟಿಯಾಗಿಸುತ್ತಾರೆ.
ಸೂರ್ಯೋದಯದಕ್ಕಿಂತ ಮುಂಚೆ ಕುಟುಂಬ ಸದಸ್ಯರೊಂದಿಗೆ ಸೇವಿಸುವ ಆಹಾರ ವೇಳೆ ( ಸಹಿರಿ) ಹಾಗೂ ಸೂರ್ಯಾಸ್ತದ ವೇಳೆ ಉಪವಾಸ ಮುರಿಯುವ ವೇಳೆ (ಇಫ್ತಾರ್) ಉಪವಾಸದ ಪ್ರಮುಖ ಸಮಯ ಈಫ್ತಿಯಾರ್ ವೇಳೆಯಲ್ಲಿ ಎಲ್ಲರೂ ಒಂದೇ ಕಡೆ ಸೇರಿ ಮಸೀದಿಗಳಲ್ಲಿ, ಕೆಲವರು ಮನೆಗಳಲ್ಲಿ ಸೇರಿ ಖರ್ಜೂರ, ಬಾಳೆ ಹಣ್ಣು, ಕಲ್ಲಂಗಡಿ ಸೇರಿದಂತೆ ಎಲ್ಲಾ ಬಗೆಯ ಹಣ್ಣು- ಹಂಪಲು ತಂದು ಒಂದೆಡೆ ಸೇರಿಸಿ ಸಾಮೂಹಿಕವಾಗಿ ಸೇವಿಸುವ ಮೂಲಕ ಉಪವಾಸ ವೃತ ಮುಗಿಸುತ್ತಾರೆ. ಆ ಮೂಲಕ ಬಡವ, ಶ್ರೀಮಂತ ಉನ್ನತ, ಕನಿಷ್ಟ ಎಂಬ ಬೇಧಬಾವ ಮರೆತು ಮಾನವಿಯತೆ ಮೆರೆಯುವ ಮೂಲಕ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳುತ್ತಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications