Ramadan 2023: ಹುಬ್ಬಳ್ಳಿಯಲ್ಲಿ ರಂಜಾನ್ ಸಂಭ್ರಮ, ಭಾವೈಕ್ಯತೆಗೆ ಸಾಕ್ಷಿಯಾದ ಆಚರಣೆ
ಹುಬ್ಬಳ್ಳಿ, ಏಪ್ರಿಲ್ 22: ಹಬ್ಬ ಯಾವುದೇ ಇರಲಿ ಹುಬ್ಬಳ್ಳಿಯಲ್ಲಿ ಆಚರಣೆ ಅಂದರೆ ನಿಜಕ್ಕೂ ಅದೊಂದು ವಿಶೇಷವೇ ಸರಿ. ಸಣ್ಣ ಹಬ್ಬವಿದ್ದರೂ ಅದ್ಧೂರಿಯಾಗಿ ಆಚರಣೆ ಮಾಡುವ ಹುಬ್ಬಳ್ಳಿಯಲ್ಲಿ ಮುಸ್ಲಿಂ ಧರ್ಮದ ಪವಿತ್ರ ರಂಜಾನ್ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ಹುಬ್ಬಳ್ಳಿಯ ಪ್ರತಿಷ್ಠಿತ ಈದ್ಗಾ ಮೈದಾನ ಸೇರಿದಂತೆ ಲ್ಯಾಮಿಂಗ್ಟನ್ ರೋಡ್, ಚೆನ್ನಮ್ಮ ಸರ್ಕಲ್, ಸಂಗೊಳ್ಳಿ ರಾಯಣ್ಣ ಸರ್ಕಲ್ ಆವರಣದಲ್ಲಿ ಲಕ್ಷಾಂತರ ಮುಸ್ಲಿಂ ಬಾಂಧವರು ರಂಜಾನ್ ಕೊನೆಯ ದಿನದ ಪ್ರಾರ್ಥನೆ ಸಲ್ಲಿಸಿದರು. ಮುಸ್ಲಿಮರ ಪವಿತ್ರ ಮಾಸ ರಂಜಾನ್ ಶುಕ್ರವಾರ ಮುಗಿದಿದ್ದು, ಶನಿವಾರ ಶವ್ವಲ್ ಮೊದಲನೇ ದಿನದಂದು ಈದ್-ಉಲ್- ಫಿತರ್ (ರಂಜಾನ್) ಹಬ್ಬ ಆಚರಿಸಿದ್ದಾರೆ.

ರಂಜಾನ್ ಹಬ್ಬದ ಸಂಪ್ರದಾಯದಂತೆ ಒಂದು ತಿಂಗಳ ಕಾಲ ಮುಸ್ಲಿಮರು ಉಪವಾಸ ವೃತ ಆಚರಿಸಿದ್ದಾರೆ. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಅನ್ನ, ನೀರು ಬಿಟ್ಟು ಉಪವಾಸ ವೃತ ಆಚರಿಸುತ್ತಾರೆ. ಉಪವಾಸ (ರೋಜಾ) ಮಾತ್ರವಲ್ಲದೇ ದಾನ ( ಝಕಾತ್) ನಮಾಜ್, ಕುರಾನ್ ಪಠನ, ತರಾವೀಹ್ ಮಾಡುವ ಮೂಲಕ ದೇವರನ್ನು ( ಅಲ್ಲಾಹ್ ನನ್ನು) ಸ್ಮೃತಿಸಲಾಗುತ್ತದೆ.
ಇನ್ನೂ ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ, ಇದು ಒಂಬತ್ತನೇ ತಿಂಗಳು. ಲೂನಾರ್ ಕ್ಯಾಲೆಂಡರ್ ಅನ್ನು ಇಸ್ಲಾಂ ಧರ್ಮದವರು ಅನುಸರಿಸುತ್ತಾರೆ. ಕಾರಣ, ಅದರಲ್ಲಿ ರಂಜಾನ್ ದಿನಾಂಕ ಬದಲಾಗುತ್ತಿರುತ್ತದೆ. ಈ ಆಚರಣೆಯ ನಂಬಿಕೆಯಂತೆ, ಅಲ್ಲಾನೊಂದಿಗಿನ ತಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಲು, ಉಪವಾಸ ಎಂಬುದು ಆತ್ಮಸ್ಥೈರ್ಯ ಹೆಚ್ಚಿಸಲು, ಹಸಿವಿನ ಮಹತ್ವ ಮತ್ತು ಅದೃಷ್ಟ ಸಂಪಾದನೆ ಮಾಡಲು ಶ್ರದ್ಧೆಯಿಂದ ಉಪವಾಸವನ್ನು ಆಚರಿಸುತ್ತಾರೆ.

ತಿಂಗಳ ಪ್ರತಿಯೊಂದು ದಿನ ಮುಸ್ಲಿಮರು, ಈ ಹಬ್ಬದ ಆಚರಣೆ ಮೂಲಕ ಅಲ್ಲಾನಲ್ಲಿ ನಂಬಿಕೆ ಇಟ್ಟುಕೊಳ್ಳುತ್ತಾರೆ. ಪ್ರಾರ್ಥನೆ, ಕುರಾನ್ ಪಠಣ ಮತ್ತು ದಾನ-ಧರ್ಮದಲ್ಲಿ ತೊಡಗುವುದು ಮಾತ್ರವಲ್ಲದೇ ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ತಮ್ಮ ಒಡನಾಟವನ್ನು ಇನ್ನಷ್ಟು ಗಟ್ಟಿಯಾಗಿಸುತ್ತಾರೆ.
ಸೂರ್ಯೋದಯದಕ್ಕಿಂತ ಮುಂಚೆ ಕುಟುಂಬ ಸದಸ್ಯರೊಂದಿಗೆ ಸೇವಿಸುವ ಆಹಾರ ವೇಳೆ ( ಸಹಿರಿ) ಹಾಗೂ ಸೂರ್ಯಾಸ್ತದ ವೇಳೆ ಉಪವಾಸ ಮುರಿಯುವ ವೇಳೆ (ಇಫ್ತಾರ್) ಉಪವಾಸದ ಪ್ರಮುಖ ಸಮಯ ಈಫ್ತಿಯಾರ್ ವೇಳೆಯಲ್ಲಿ ಎಲ್ಲರೂ ಒಂದೇ ಕಡೆ ಸೇರಿ ಮಸೀದಿಗಳಲ್ಲಿ, ಕೆಲವರು ಮನೆಗಳಲ್ಲಿ ಸೇರಿ ಖರ್ಜೂರ, ಬಾಳೆ ಹಣ್ಣು, ಕಲ್ಲಂಗಡಿ ಸೇರಿದಂತೆ ಎಲ್ಲಾ ಬಗೆಯ ಹಣ್ಣು- ಹಂಪಲು ತಂದು ಒಂದೆಡೆ ಸೇರಿಸಿ ಸಾಮೂಹಿಕವಾಗಿ ಸೇವಿಸುವ ಮೂಲಕ ಉಪವಾಸ ವೃತ ಮುಗಿಸುತ್ತಾರೆ. ಆ ಮೂಲಕ ಬಡವ, ಶ್ರೀಮಂತ ಉನ್ನತ, ಕನಿಷ್ಟ ಎಂಬ ಬೇಧಬಾವ ಮರೆತು ಮಾನವಿಯತೆ ಮೆರೆಯುವ ಮೂಲಕ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳುತ್ತಾರೆ.
-
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು












Click it and Unblock the Notifications