ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ಆಗಿ ರಾಮ ಬಡಿಗೇರ ಹಾಗೂ ಉಪಮಹಾಪೌರರಾಗಿ ದುರ್ಗಮ್ಮ ಬಿಜವಾಡ ಆಯ್ಕೆ
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾಗಿ 30ನೇ ವಾರ್ಡ್ ಸದಸ್ಯರಾದ ರಾಮಪ್ಪಿಗೇರ ಆಯ್ಕೆ ಆಗಿದ್ದಾರೆ. ಪಾಲಿಕೆ 69ನೇ ವಾರ್ಡ್ ಸದಸ್ಯರಾದ ದುರ್ಗಮ್ಮ ಬಿಜವಾಡ ಉಪ ಮೇಯರ್ ಆಗಿ ಆಯ್ಕೆ ಆಗಿದ್ದಾರೆ.
ಮಾಹಪೌರರ ಆಯ್ಕೆಯ ಫಲಿತಾಂಶವನ್ನು ಚುನಾವಣಾ ಅಧ್ಯಕ್ಷರಾಗಿದ್ದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಎಸ್.ಬಿ.ಶೆಟ್ಟೆಣ್ಣವರ ಅವರು ಪ್ರಕಟಿಸಿದರು. ಮಹಾಪೌರ ಮತ್ತು ಉಪ ಮಹಾಪೌರ ಚುನಾವಣೆಯಲ್ಲಿ ಸದಸ್ಯರು ಕೈ ಎತ್ತುವ ಮೂಲಕ ತಮ್ಮ ಮತ ಚಲಾಯಿಸಿದರು.

ಮಹಾಪೌರ ಸ್ಥಾನಕ್ಕೆದ್ದ ಮಹಾನಗರ ಪಾಲಿಕೆ 33ನೇ ವಾರ್ಡ್ ಸದಸ್ಯರಾದ ಇಮಾಮ್ ಹುಸೇನ ಎಲಿಗಾರ ಅವರು 36 ಮತಗಳನ್ನು ಮತ್ತು ಮಹಾನಗರ ಪಾಲಿಕೆ 77 ನೇ ವಾರ್ಡ್ ಸದಸ್ಯರಾದ ಹುಸೇನಬಿ ನಾಲತವಾಡ ಅವರು 3 ಮತಗಳನ್ನು ಪಡೆದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ 23 ನೇ ಅವಧಿಗೆ ಉಪಮಹಾಪೌರರಾಗಿ ಪಾಲಿಕೆ 69 ನೇ ವಾರ್ಡ್ ಸದಸ್ಯರಾದ ದುರ್ಗಮ್ಮ ಬಿಜವಾಡ ಅವರು ಅತಿ ಹೆಚ್ಚು (47) ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ ಎಂದು ಅವರು ಪ್ರಕಟಿಸಿದ್ದಾರೆ. ಉಪಮಹಾಪೌರ ಸ್ಥಾನದ ಅಕಾಂಕ್ಷಿ ಆಗಿದ್ದ 50ನೇ ವಾರ್ಡ್ ಸದಸ್ಯರಾದ ಮಂಗಳಮ್ಮ ಹಿರೇಮನಿ ಅವರು 36 ಮತಗಳನ್ನು ಪಡೆದಿದ್ದಾರೆ.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರ ಮತ್ತು ಉಪಮಹಾಪೌರ ಚುನಾವಣೆಯ ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತಿನ ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದರು. ಇಂದಿನ ಮಹಾಪೌರ ಮತ್ತು ಉಪಮಹಾಪೌರ ಚುನಾವಣೆಯಲ್ಲಿ 86 ಜನರು ಭಾಗಿಯಾಗಿದ್ದರು. ನಾಲ್ಕು ಜನ ಸದಸ್ಯರು ಗೈರು ಹಾಜರಿದ್ದರು.
ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾದ ಎಸ್.ಎಸ್.ಬಿರಾದಾರ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಅವರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
82 ಸದಸ್ಯರ ಬಲವನ್ನು ಹೊಂದಿರುವ ಮಹಾನಗರ ಪಾಲಿಕೆಯಲ್ಲಿ 39 ಬಿಜೆಪಿ, 33 ಕಾಂಗ್ರೆಸ್, 3 ಎಐಎಂಐಎಂ, 6 ಪಕ್ಷೇತರ, ಒಬ್ಬ ಜೆಡಿಎಸ್ ಸದಸ್ಯರ ಇದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications