ರಾಜ್ಯದಲ್ಲಿ ಬರದ ಛಾಯೆ: ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆ ಮಾಡಿದ ರಾಣೆಬೆನ್ನೂರು ಶಾಸಕ
ಹುಬ್ಬಳ್ಳಿ ಸೆಪ್ಟೆಂಬರ್ 04: ರಾಜ್ಯದಲ್ಲಿ ಬರಗಾಲದ ಛಾಯೆ ಹಿನ್ನಲೆಯಲ್ಲಿ ಪಿಕೆಕೆ (ಪಕ್ಷಾತೀತ ಕಾಯಕ ಕನಸು) ಸಂಸ್ಥೆಯ ವತಿಯಿಂದ ಶಾಸಕ ಪ್ರಕಾಶ ಕೋಳಿವಾಡ ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆ ಕಾರ್ಯ ಮಾಡಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದ ಆವರಣದಲ್ಲಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದರು. ಈ ಬಗ್ಗೆ ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಮಾತನಾಡಿದ್ದು, ಇಂದಿನಿಂದ 3 ದಿನಗಳ ಕಾಲ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ನಡೆಯಲಿದೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲ ಛಾಯೆಯ ಬಗ್ಗೆ ಹವಾಮಾನ ವರದಿ ಮುನ್ಸೂಚನೆ ನೀಡಿತ್ತು. ಕೇಂದ್ರದ ಭೂವಿಜ್ಞಾನ ಸಚಿವಾಲಯ ಸಾಕಷ್ಟು ರಿಸರ್ಚ್ ಮಾಡಿತ್ತು. ಮಳೆ ಬರುವುದು ಖಚಿತ ಅನ್ನುವ ಮಾಹಿತಿಯಿಂದ ಮೋಡ ಬಿತ್ತನೆ ಮಾಡಲಾಗಿದೆ. ರಾಣೆಬೆನ್ನೂರು ಕ್ಷೇತ್ರದ ರೈತರು ಅವಶ್ಯಕತೆ ಇದೆ ಅಂತಾ ಹೇಳಿದ್ದಾರೆ. ಹೀಗಾಗಿ ನಾವು ಮೋಡ ಬಿತ್ತನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಮೋಡ ಬಿತ್ತನೆಗೆ ಸಿಎಂ ಸಿದ್ದರಾಮಯ್ಯನವರು ಅನುಮತಿ ಕೊಟ್ಟಿದ್ದಾರೆ. ಮೋಡ ಬಿತ್ತನೆಯಿಂದ ಶೇ.28ರಷ್ಟು ಮಳೆ ಆಗುತ್ತೆ ಎನ್ನಲಾಗುತ್ತಿದೆ. ಹಾವೇರಿ ಜಿಲ್ಲೆಯಲ್ಲಿ ಮಾತ್ರ ಮೋಡ ಬಿತ್ತನೆ ಕಾರ್ಯ ಮಾಡುತ್ತಿದ್ದೇವೆ. ನಮ್ಮದೇ ಸ್ವಂತ ವಿಮಾನ ಇರುವುದರಿಂದ ಖರ್ಚು ಕಡಿಮೆ ಆಗುತ್ತದೆ. 15ರಿಂದ 20 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಮುಗಿಯಲಿದೆ ಎಂದು ಹೇಳಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹಾವೇರಿ ಜಿಲ್ಲೆಯತ್ತ ಮೋಡ ಬಿತ್ತನೆ ವಿಮಾನ ಹೊರಟಿದೆ. ಪಿ.ಕೆ.ಕೆ.ಇನಿಷಿಯೇಟೆವ್ಸ್ ಅಡಿಯಲ್ಲಿ ಮೋಡ ಬಿತ್ತನೆ ಮಾಡಲಾಗಿದ್ದು, ಇಂದಿನಿಂದ ಮೂರು ದಿನಗಳ ಹಾವೇರಿ ಜಿಲ್ಲೆಯ ಎಲ್ಲಾ ಕಡೆ ಆಗಸದಲ್ಲಿ ವಿಶೇಷ ವಿಮಾನದ ಮೂಲಕ ಮೋಡ ಬಿತ್ತನೆ ನಡೆಯಲಿದೆ ಎಂದರು.
ಮೋಡ ಬಿತ್ತನೆ ವಿಫಲವಾಗಿಲ್ಲ ಎಂದ ಸಚಿವ ಹೆಚ್.ಕೆ.ಪಾಟೀಲ್
ಮೋಡ ಬಿತ್ತನೆ ವಿಫಲವಾಗಿಲ್ಲ. ರಾಜ್ಯದ ಜನರಿಗೆ ಒಳಿತು ಮಾಡಲು ಮೋಡ ಬಿತ್ತನೆ ಮಾಡಿದ್ದೇವೆ. ಹಾವೇರಿ, ರಾಣೆಬೆನ್ನೂರು ತಾಲೂಕಿನ ಗುಣಮಟ್ಟ ನೋಡಿ ಬಿತ್ತನೆ ಮಾಡುತ್ತೇವೆ. ಶಾಸಕ ಪ್ರಕಾಶ್ ಕೋಳಿವಾಡಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಗದಗ ಜಿಲ್ಲೆಯಲ್ಲೂ ಮೋಡ ಬಿತ್ತನೆ ಮಾಡಿ ಅಂತಾ ಹೇಳಿದ್ದೇನೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
2003ರಲ್ಲಿ ಎಸ್ ಎಂ.ಕೃಷ್ಣ ಮುಖ್ಯಮಂತ್ರಿ ಆಗಿದ್ದಾಗ ಮೋಡ ಬಿತ್ತನೆ ಮಾಡಿದ್ದೆವು. 85 ದಿನದಲ್ಲಿ 60ಕ್ಕೂ ಹೆಚ್ಚು ದಿನ ಮೋಡ ಬಿತ್ತನೆ ಯಶಸ್ಸು ಕಂಡಿತ್ತು. ಮೋಡಬಿತ್ತನೆ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡುತ್ತೇನೆ ಎಂದು ಹೇಳಿದರು.
ಮುಂಗಾರು ಮಳೆ ವಿಳಂಬ ಹಿನ್ನೆಲೆಯಲ್ಲಿ ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಮುಂದಾಗುತ್ತಿರೋ ಬಗ್ಗೆ ಧಾರವಾಡದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಇತ್ತೀಚೆಗೆ ಸುಳಿವು ಕೊಟ್ಟಿದ್ದರು. ಮುಂಗಾರು ಮಳೆ ತಡವಾಗಿದೆ. ಕಳೆದ ಸಲಕ್ಕಿಂತ ಈಗ ಶೇ. 30ರಷ್ಟು ಮಳೆ ಕಡಿಮೆ ಆಗಿದೆ. ಮಳೆಯ ನಿರೀಕ್ಷೆ ಮಾಡುತ್ತಿದ್ದೇವೆ. ಒಂದು ವಾರದಿಂದ ತಡವಾಗುತ್ತಲೇ ಇದೆ. ಮುಂದಿನ ಎರಡು ದಿನ ಕಾದು ನೋಡುತ್ತೇವೆ ಎಂದರು.
ಬೀಜ ರಸಗೊಬ್ಬರ ಎಲ್ಲ ಸಂಗ್ರಹ ಮಾಡಿಟ್ಟುಕೊಂಡಿದ್ದೇವೆ. ಆದರೆ ಮುಂಗಾರು ವಿಳಂಬದಿಂದ ಬೇರೆ ಏನೂ ಮಾಡಲು ಆಗುತ್ತಿಲ್ಲ. ಮೂರು ದಿನದಲ್ಲಿ ಮಳೆಯಾಗದಿದ್ದರೆ ಮೋಡ ಬಿತ್ತನೆ ಚಿಂತನೆ ಮಾಡಲಾಗುವುದು. ಮೂರು ದಿನ ಕಾದು ನೋಡುತ್ತೇವೆ. ಕ್ಯಾಬಿನೆಟ್ನಲ್ಲಿ ನಿರ್ಣಯ ಮಾಡುತ್ತೇವೆ ಎಂದು ಹೇಳಿದರು.
-
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications