ಹುಬ್ಬಳ್ಳಿಯಲ್ಲಿ ಮರು ಉಸಿರು ಪಡೆದ ನವಜಾತು ಶಿಶು
ಹುಬ್ಬಳ್ಳಿ, ಜನವರಿ 20: ಧಾರವಾಡದ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಆಸ್ಪತ್ರೆಯಲ್ಲಿ ಮೃತವಾಗಿದೆ ಎಂದು ಹೇಳಲಾದ ನವಜಾತು ಶಿಶುವೊಂದು ಅಂತ್ಯ ಸಂಸ್ಕಾರದ ವೇಳೆ ಉಸಿರಾಡಿ ಬದುಕುಳಿದು ಪಾಲಕರಿಗೆ ಆಶ್ಚರ್ಯ ಮೂಡಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದ ನೇತ್ರಾವತಿ ಜಾಲಗಾರ ಎಂಬುವವರು ನಗರದ ಕಿಮ್ಸ್ ನಲ್ಲಿ ಜ.12 ಕ್ಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಜನ್ಮದಾರಂಭದಿಂದಲೇ ಶಿಶು ಉಸಿರಾಟದ ತೊಂದರೆ ಅನುಭವಿಸುತ್ತಿತ್ತು. ಕಿಮ್ಸ್ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ಕೊಂಡೊಯ್ಯಲು ಪಾಲಕರಿಗೆ ಸೂಚಿಸಿದ್ದರು. ಅಲ್ಲಿಯೂ ಶಿಶುವಿಗೆ ಚಿಕಿತ್ಸೆ ಫಲಕಾರಿಯಾಗಲಿಲ್ಲ.[ಮದ್ಯದ ಅಮಲಿನಲ್ಲಿ ಹೆತ್ತಕೂಸನ್ನೇ ಬೆಂಕಿಗೆಸೆದ ತಾಯಿ!]

ಶಿಶುವಿನ ಉಸಿರಾಟ ನಿಂತು ಮಗು ಮೃತಪಟ್ಟಿದೆ ಎಂದು ಖಚಿತಪಡಿಸಿದ ಆಸ್ಪತ್ರೆ ವೈದ್ಯರು ಅಂತ್ಯಸಂಸ್ಕಾರ ನೆರವೇರಿಸಲು ಪಾಲಕರಿಗೆ ಸೂಚಿಸಿದ್ದರು. ಅಂತೆಯೇ ಮೃತ ಶಿಶುವನ್ನು ದೇವಿಕೊಪ್ಪ ಗ್ರಾಮಕ್ಕೆ ಕೊಂಡೊಯ್ದು ಅಲ್ಲಿ ಅಂತ್ಯಸಂಸ್ಕಾರ ಮಾಡುವಾಗ ಮಗು ಮತ್ತೆ ಉಸಿರಾಟ ಆರಂಭಿಸಿದೆ. ತಕ್ಷಣ ಶಿಶುವಿನ ಪಾಲಕರು ಗಮನಿಸಿದಾಗ ಶಿಶು ಕಣ್ಣು ಬಿಟ್ಟು ಮಿಸುಕಾಡಲಾರಂಭಿಸಿದೆ.
ಇದರಿಂದ ಆಶ್ಚರ್ಯಗೊಂಡ ಪಾಲಕರು ಕೂಡಲೇ ಶಿಶುವನ್ನು ನಗರದ ಕಿಮ್ಸ್ ಆಸ್ಪತ್ರೆಗೆ ತಂದಿದ್ದಾರೆ. ತಕ್ಷಣವೇ ಮಗುವನ್ನು ಐಸಿಯು ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಢಲಾಗುತ್ತಿದೆ ಎಂದು ಕಿಮ್ಸ್ ನಿರ್ದೇಶಕ ಡಾ.ದತ್ತಾತ್ರೇಯ ಬಂಟ್ ಒನ್ ಇಂಡಿಯಾಕ್ಕೆ ತಿಳಿಸಿದರು.
-
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications