ಪ್ರಧಾನಿಗೆ ಪತ್ರ ಬರೆದರೂ ಸಿಗದ ಪರಿಹಾರ: ಬದುಕು ನಡೆಸಲಾಗದೇ ಸಂಕಷ್ಟದಲ್ಲಿ ಸಾರಿಗೆ ನಿವೃತ್ತ ನೌಕರರು
ರಾಜ್ಯ ಸರ್ಕಾರ ಸಾರಿಗೆ ಇಲಾಖೆ ನೌಕರರ ಬೇಡಿಕೆ ಇಡೇರಿಸುದಿರಲಿ, ಇಲಾಖೆಯಲ್ಲಿ ಕೆಲಸ ಮಾಡಿ ನಿವೃತ್ತರಾದವರಿಗೂ ಗ್ರ್ಯಾಚುಟಿ ಹಣ ನೀಡಿಲ್ಲ. ಸಾರಿಗೆ ಇಲಾಖೆಯ ನಡುವಳಿಕೆಯಿಂದ ಬೇಸತ್ತು ಸಾರಿಗೆ ನಿವೃತ್ತ ನೌಕರರೊಬ್ಬರು ಇದೀಗ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಹುಬ್ಬಳ್ಳಿ, ಮಾರ್ಚ್ 14: ಸಾರಿಗೆ ಇಲಾಖೆ. ಸದಾ ಸುದ್ದಿಯಲ್ಲಿರೋ ಇಲಾಖೆ. ಕಳೆದ ಕೆಲ ದಿನಗಳಿಂದ ಇಲಾಖೆ ನೌಕರರ ಸಂಬಳ ವಿಚಾರವಾಗಿ ಇಲಾಖೆ ಸಾಕಷ್ಟು ಸುದ್ದಿಯಲ್ಲಿತ್ತು. ರಾಜ್ಯ ಸರ್ಕಾರ ತಮ್ಮ ಬಗ್ಗೆ ಹೊಂದಿರುವ ನಿರ್ಲಕ್ಷ್ಯದ ವಿರುದ್ಧ ಇದೀಗ ಮತ್ತೆ ಸಾರಿಗೆ ಇಲಾಖೆ ನೌಕರರು ಮುಷ್ಕರಕ್ಕೆ ಸಿದ್ಧರಾಗಿದ್ದಾರೆ.
ರಾಜ್ಯ ಸರ್ಕಾರ ಸಾರಿಗೆ ಇಲಾಖೆ ನೌಕರರ ಬೇಡಿಕೆ ಇಡೇರಿಸುದಿರಲಿ, ಇಲಾಖೆಯಲ್ಲಿ ಕೆಲಸ ಮಾಡಿ ನಿವೃತ್ತರಾದವರಿಗೂ ಗ್ರ್ಯಾಚುಟಿ ಹಣ ನೀಡಿಲ್ಲ. ಸಾರಿಗೆ ಇಲಾಖೆಯ ನಡುವಳಿಕೆಯಿಂದ ಬೇಸತ್ತು ಸಾರಿಗೆ ನಿವೃತ್ತ ನೌಕರರೊಬ್ಬರು ಇದೀಗ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಹುಬ್ಬಳ್ಳಿಯ ಗೋಕುಲ್ ರಸ್ತೆಯ ಕಿರ್ಲೋಸ್ಕರ್ ಲೇಔಟ್ನ ನಿವಾಸಿ ಹನುಮಂತ ಆರ್ ಅಂಕುಶ್ ತನಗೆ ಸಿಗಬೇಕಾದ ಗ್ರ್ಯಾಚುಟಿ ಹಣ ನೀಡದ ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ರೋಸಿ ಹೋಗಿದ್ದಾರೆ. 36 ವರ್ಷಗಳಿಂದ ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡಿ ಕಳೆದ ವರ್ಷ ನಿವೃತ್ತರಾಗಿರೋ ಹನಮಂತ ಅವರಿಗೆ ಇಲಾಖೆಯಿಂದ ಬರಬೇಕಾರ ಗ್ರ್ಯಾಚುಟಿ ಹಾಗೂ ರಜೆ ನಗದೀಕರಣದ ಸುಮಾರು 18 ಲಕ್ಷ ಹಣ ಬಂದಿಲ್ಲ ಎನ್ನಲಾಗಿದೆ.
ಹುಬ್ಬಳ್ಳಿಯ ಸಾರಿಗೆ ಇಲಾಖೆ ಅಧಿಕಾರಿಗಳ ಬಳಿ ಅಲೆದಾಡಿ ಅಲೆದಾಡಿ ಸುಸ್ತಾಗಿರುವ ಹನುಮಂತ ಅವರು ಇದೀಗ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ₹18 ಲಕ್ಷದಲ್ಲಿ ನನಗೆ ₹6.5 ಲಕ್ಷ ಅವಶ್ಯಕತೆ ಇದೆ ಹಣ ಕೊಡಿ ಎಂದು ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ತನಗೆ ಸಿಗಬೇಕಾದ ಹಣಕ್ಕಾಗಿ ಹನುಮಂತ ಪ್ರಧಾನಿಗಳಿಗೆ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.

ನಿವೃತ್ತಿಯಾದ ಬಳಿಕ ಹನುಮಂತ ಅವರಿಗೆಗೆ ಜೀವನ ನಡೆಸುವುದು ತುಂಬಾ ಕಷ್ಟವಾಗಿದೆ. ಅಲ್ಲದೇ ಕಿವಿ ಆಪರೇಶನ್ ಹಾಗೂ ಮಕ್ಕಳ ಶಿಕ್ಷಣಕ್ಕಾಗಿ ಹಣದ ಅವಶ್ಯಕತೆ ಇದೆ. ಇದೆ ಕಾರಣಕ್ಕೆ ಹುಬ್ಬಳ್ಳಿ ಸಾರಿಗೆ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ಭರತ್ಗೆ ಹನುಮಂತ ಅಂಕುಶ್ ಹಲವಾರು ಬಾರಿ ಹಣ ಕೊಡಿ ಎಂದು ಮನವಿ ಮಾಡಿಕೊಂಡಿದ್ದ. ಆದರೆ ಇದುವರೆಗೂ ನಯಾಪೈಸೆ ಹಣ ಬಿಡುಗಡೆ ಮಾಡಿಲ್ಲ. ಇನ್ನು ತಾನು ದುಡಿದ ಹಣ ಕಷ್ಟಕಾಲದಲ್ಲಿ ಸಿಗದೆ ಇರೋದಕ್ಕೆ ನಿವೃತ್ತ ನೌಕರ ಬಿಜೆಪಿ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ.
ಹನುಮಂತ ಕಳೆದ 36 ವರ್ಷಗಳಿಂದ ಹುಬ್ಬಳ್ಳಿಯ ಸಾರಿಗೆ ವಿಭಾಗೀಯ ಕಚೇರಿಯಲ್ಲಿ ಕೆಲಸ ಮಾಡಿ ಕಳೆದ ವರ್ಷ ನಿವೃತ್ತರಾಗಿದ್ದಾರೆ. ಇತ್ತ ನೌಕರಿಯೂ ಇಲ್ಲದೆ, ಅತ್ತ ದುಡಿದ ಹಣವೂ ಇಲ್ಲದೆ ನಿವೃತ್ತ ನೌಕರಿಗೆ ಮನೆ ನಡೆಸುವುದು ತುಂಬಾ ಕಷ್ಟದ ಕೆಲಸವಾಗಿದೆ. ಒಂದು ಕಡೆ ತನ್ನ ಆರೋಗ್ಯ ಸಮಸ್ಯೆ ,ಇನ್ನೊಂದು ಕಡೆ ಮಕ್ಕಳ ಶಿಕ್ಷಣಕ್ಕೆ ಹಣದ ಅವಶ್ಯಕತೆ ಇದೆ ಎಂದು ಗೋಗರೆದರೂ ಅಧಿಕಾರಿಗಳು ಹಣ ಕೊಡುತ್ತಿಲ್ಲ.

ಇದು ಕೇವಲ ಹನುಮಂತ ಅವರ ಒಬ್ಬರ ಕಥೆಯಲ್ಲ. ವಾಯುವ್ಯ ಕರ್ನಾಟಕ ಸಾರಿಗೆ ವ್ಯಾಪ್ತಿಯ ಒಟ್ಟು 1,764 ಜನ ನಿವೃತ್ತ ನೌಕರರಿಗೆ ಸಾರಿಗೆ ಇಲಾಖೆ ಹಣ ನೀಡಬೇಕಾಗಿದೆ. 2021 ರಿಂದ 2023ರ ವರೆಗೂ ಸುಮಾರು 240 ಕೋಟಿಗೂ ಅಧಿಕ ಹಣ ಸಾರಿಗೆ ಇಲಾಖೆ ಬಾಕಿ ಉಳಿಸಿಕೊಂಡಿದೆ. ಇದೀಗ ಎನ್ಡಬ್ಲ್ಯೂಕೆಎಸ್ಆರ್ಟಿಸಿ ವ್ಯಾಪ್ತಿಯ 1764 ಜನ ನಿವೃತ್ತ ನೌಕರರು ಬೀದಿಗೆ ಬಿದ್ದಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಹಾಗೂ ಸರ್ಕಾರ ಕ್ಯಾರೇ ಎನ್ನುತ್ತಿಲ್ಲ ಎನ್ನುವುದು ನಿವೃತ್ತ ನೌಕರರ ಅಳಲಾಗಿದೆ.
ಒಟ್ಟಾರೆ ಸಾರಿಗೆ ಇಲಾಖೆ ಆರ್ಥಿಕ ಸಂಕಷ್ಟದ ನೆಪ ಹೇಳಿ ನಿವೃತ್ತ ನೌಕರರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ಪ್ರಧಾನಿಗೆ ಪತ್ರ ಬರೆದರೂ ಸಂಕಷ್ಟದಲ್ಲಿರುವ ನಿವೃತ್ತ ನೌಕರನಿಗೆ ಸಹಾಯ ಸಿಕ್ಕಿಲ್ಲ. ಸರ್ಕಾರವೂ ಸಾರಿಗೆ ಇಲಾಖೆ ಕೆಲಸ ಮಾಡಿಸಿಕೊಂಡು ನಡು ನೀರಿನಲ್ಲಿ ಕೈ ಬಿಟ್ಟಿದೆ ಎನ್ನುವುದು ಹಲವರ ಅಭಿಪ್ರಾಯವಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications