ದಾರಿತಪ್ಪಿದ ಅಷ್ಟಪಥ ರಸ್ತೆ, ನಾಗರಿಕರ ಹಿಡಿಶಾಪ
ನಗರದಲ್ಲಿ ಬಿ.ಆರ್.ಟಿ.ಎಸ್. ಕಾಮಗಾರಿ ನಡೆಯುತ್ತಿದ್ದು, ಇಲ್ಲಿನ ಹೊಸೂರಿನಿಂದ ಬಿ.ವಿ.ಬಿ ಕಾಲೇಜಿನವರೆಗೆ ಅಷ್ಟಪಥ ರಸ್ತೆ ನಿರ್ಮಾಣವಾಗುತ್ತಿದೆ. ಈ ಪೈಕಿ, ಬಲ ಮತ್ತು ಎಡಬದಿಯ ರಸ್ತೆ ನಿರ್ಮಾಣವಾಗಿದ್ದು, ಮಧ್ಯಭಾಗದಲ್ಲಿರುವ ಹಳೆಯ ರಸ್ತೆ ಕೆಳಭಾಗಕ
ಹುಬ್ಬಳ್ಳಿ, ಜುಲೈ 07 : ನಗರದಲ್ಲಿ ಬಿ.ಆರ್.ಟಿ.ಎಸ್. ಅಷ್ಟಪಥ ಕಾಮಗಾರಿ ನಡೆಯುತ್ತಿದ್ದು, ಅರ್ಧಂಬರ್ಧ ನಿರ್ಮಾಣ, ಅಧಿಕಾರಿಗಳ ಬೇಜವಾಬ್ದಾರಿಯುತ ಹೇಳಿಕೆಗಳಿಂದಾಗಿ ಹುಬ್ಬಳ್ಳಿಯ ನಾಗರಿಕರು ಭಾರೀ ತೊಂದರೆ ಅನುಭವಿಸುತ್ತಿದ್ದಾರೆ, ಹಿಡಿಶಾಪ ಹಾಕುತ್ತಿದ್ದಾರೆ.
ಇಲ್ಲಿನ ಹೊಸೂರಿನಿಂದ ಬಿ.ವಿ. ಭೂಮರೆಡ್ಡಿ ಕಾಲೇಜಿನವರೆಗೆ ಅಷ್ಟಪಥ ರಸ್ತೆ ನಿರ್ಮಾಣವಾಗುತ್ತಿದೆ. ಈ ಪೈಕಿ, ಬಲ ಮತ್ತು ಎಡಬದಿಯ ರಸ್ತೆ ನಿರ್ಮಾಣವಾಗಿದ್ದು, ಮಧ್ಯಭಾಗದಲ್ಲಿರುವ ಹಳೆಯ ರಸ್ತೆ ಕೆಳಭಾಗಕ್ಕೆ ಜರಿದಂತಾಗಿದೆ. ಈ ರಸ್ತೆಯಲ್ಲಿ ಹರಡಿರುವ ಜಲ್ಲಿ ಕಲ್ಲುಗಳಿಂದ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ.

ವಿದ್ಯಾನಗರದ ಜೆ.ಜಿ. ವಾಣಿಜ್ಯ ಕಾಲೇಜಿನ ಮುಂಭಾಗದಿಂದ ಸುಶ್ರುತ ಆಸ್ಪತ್ರೆಯವರೆಗೆ ಒಂದು ಭಾಗದಲ್ಲಿ ಹೊಸದಾಗಿ ರಸ್ತೆ ನಿರ್ಮಾಣ ಮಾಡಿದ್ದಾರೆ. ಇದು ಮೊದಲಿನ ರಸ್ತೆಗಿಂತ ಸುಮಾರು ಒಂದು ಅಡಿ ಎತ್ತರದಲ್ಲಿದೆ. ಈ ಎತ್ತರದ ರಸ್ತೆ ಕೆಳಗೆ ಹಾಕಿರುವ ಜಲ್ಲಿ ಕಲ್ಲುಗಳು ಹಳೆಯ ರಸ್ತೆಗೆ ಹರಡಿ ಕೊಂಡಿದೆ. ಜಲ್ಲಿಕಲ್ಲುಗಳಿಂದ ಬೈಕ್ ಸ್ಕಿಡ್ ಆಗಿ ಸಂಭವಿಸುವ ಅಪಘಾತಗಳು ಈ ರಸ್ತೆಯಲ್ಲಿ ಸಾಮಾನ್ಯವಾಗಿ ಬಿಟ್ಟಿವೆ.
ಬಸ್ಗಳು ಹಾಗೂ ದೊಡ್ಡ ಲಾರಿಗಳು ಹೊಸ ರಸ್ತೆಯ ಮೇಲೆ ಚಲಿಸುತ್ತಿವೆ. ಪಕ್ಕದ ರಸ್ತೆ ತೀರಾ ಇಕ್ಕಟ್ಟಾಗಿದೆ. ಸಂಚಾರ ದಟ್ಟಣೆ ಉಂಟಾಗುವುದಲ್ಲದೆ, ಏರಿಳಿತದ ರಸ್ತೆಯಲ್ಲಿ ಸಾಗುವುದು ಕಿರಿಕಿರಿ ಎನಿಸುತ್ತದೆ ಎಂಬುದು ಇಲ್ಲಿ ಸಂಚರಿಸುವ ವಾಹನ ಸವಾರರ ಅಳಲು.

ಜಾಹೀರಾತು ಫಲಕ ಅಡ್ಡಿ
ಕಾಮಗಾರಿಗೆ ರಸ್ತೆ ಮಧ್ಯದಲ್ಲಿರುವ ಡಿವೈಡರ್ ಮತ್ತು ಅದಕ್ಕೆ ಅಳವಡಿಸಿರುವ ಜಾಹೀರಾತು ಫಲಕಗಳು ಅಡ್ಡಿಯಾಗಿವೆ ಎಂಬುದು ರಸ್ತೆ ನಿರ್ಮಾಣದ ಜವಾಬ್ದಾರಿ ಹೊತ್ತಿರುವ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮಕ್ಕೆ (ಕೆ.ಆರ್.ಡಿ.ಸಿ.ಎಲ್) ಅಧಿಕಾರಿಗಳ ಆರೋಪ.
ಇನ್ನೊಂದೆಡೆ ಈ ಜಾಹೀರಾತು ಫಲಕಗಳು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಸಂಬಂಧಿಸಿದವುಗಳಾಗಿರುವುದರಿಂದ ಅವುಗಳನ್ನು ಅವರೇ ತೆರವುಗೊಳಿಸಬೇಕು ಎಂದು ಬಿಆರ್ಟಿಎಸ್ ಅಧಿಕಾರಿಗಳ ವಾದ. ಆದರೆ, ಇದಕ್ಕೆ ಪಾಲಿಕೆ ಅಧಿಕಾರಿಗಳ ಪ್ರತಿಕ್ರಿಯೆ ಬೇರೆಯದ್ದೆ ಇದ್ದು, ಜಾಹೀರಾತು ವಿಷಯದಲ್ಲಿ ಕೆಲವರು ಪಾಲಿಕೆ ವಿರುದ್ಧ ಕೇಸ್ ದಾಖಲಿಸಿದ್ದು, ಸದ್ಯಕ್ಕೆ ಅವುಗಳ ತೆರವು ಕಾರ್ಯ ಅಸಾಧ್ಯವಾಗಿದ್ದು, ಈ ಬಗ್ಗೆ ಬಿಆರ್ಟಿಎಸ್ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೆಸರು ಹೇಳಲಿಚ್ಛಸದ ಪಾಲಿಕೆ ಅಧಿಕಾರಿಯೊಬ್ಬರು ತಿಳಿಸಿದರು.
ಮೂರು ಇಲಾಖೆಗಳ ಈ ವೈರುಧ್ಯ ಹೇಳಿಕೆಗಳಿಂದ ಬೇಸತ್ತಿರುವ ಜನರು ಮಾತ್ರ ಹಿಡಿಶಾಪ ಹಾಕುತ್ತಾ ಸಾಗುತ್ತಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications