ವೇತನ ಪರಿಷ್ಕರಣೆ: ಸರ್ಕಾರಕ್ಕೆ ಶಾಕ್ ನೀಡಲು ತಯಾರಾದ ಹೆಸ್ಕಾಂ ನೌಕರರು: ಸಿಎಂ ಕೊಟ್ಟ ಭರವಸೆ ಏನು?
ವೇತನ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪಿಟಿಸಿಎಲ್ ನೌಕರರು ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.
ಹುಬ್ಬಳ್ಳಿ, ಮಾರ್ಚ್, 15: ವೇತನ ಪರಿಷ್ಕರಣೆ ಸೇರಿದಂತೆ ಸರ್ಕಾರಿ ನೌಕರರು ಈಗಾಗಲೇ ಸರ್ಕಾರಕ್ಕೆ ಮುಷ್ಕರದ ಬಿಸಿ ಮುಟ್ಟಿಸಿದ್ದಾರೆ. ಈ ಮೂಲಕ ತಮ್ಮ ಬೇಡಿಕೆಗಳ ಕುರಿತು ಒಂದೆಡೆ ಶಕ್ತಿ ಪ್ರದರ್ಶನ ಮಾಡಿದ್ದಾಯಿತು. ಇದೀಗ ನಿಗಮಗಳ ಸರದಿ ಬಂದಿದ್ದು, ಕೆಪಿಟಿಸಿಎಲ್ನ ನೌಕರರು ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.
ಕೆಪಿಟಿಸಿಎಲ್ನ ನೌಕರರು ವೇತನ ಪರಿಷ್ಕರಣೆ, ಒಪಿಎಸ್ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂಬ ಹಠಕ್ಕೆ ಮುಂದಾಗಿದ್ದಾರೆ. ಹೆಸ್ಕಾಂ ನೌಕರರು ಇದೇ ಮಾರ್ಚ್ 16ರಿಂದ ರಾಜ್ಯವ್ಯಾಪಿ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ಹೀಗೆ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸಾಥ್ ನೀಡುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲಿದ್ದಾರೆ.

ಸ್ಪಂದನೆ ನೀಡಡ ಮಂಡಳಿ
ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳ ಕುರಿತಂತೆ ಆಡಳಿತ ಮಂಡಳಿಯಿಂದ 14 ದಿನಗಳವರೆಗೆ ನೋಟೀಸ್ ಜಾರಿ ಮಾಡಲಾಗಿದೆ. ಆದರೂ 10 ದಿನಗಳು ಕಳೆದರೂ ಮಂಡಳಿಯಿಂದ ಯಾವುದೇ ಸ್ಪಂದನೆ ದೊರೆತಿಲ್ಲ. ಈ ಹಿನ್ನೆಲೆ ಇದೀಗ ಇದೇ ಮಾರ್ಚ್ 16ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಹುಬ್ಬಳ್ಳಿಯಲ್ಲೂ ತಯಾರಿ ನಡೆಸಿದ್ದಾರೆ.
ಮಾರ್ಚ್ 16ರಿಂದ ಮುಷ್ಕರಕ್ಕೆ ಕರೆ
ಇನ್ನು ಪ್ರಮುಖವಾಗಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೇತೃತ್ವದಲ್ಲಿ ಈಗಾಗಲೇ ಇದೇ ಮಾರ್ಚ್ 16ರಿಂದ ಮುಷ್ಕರಕ್ಕೆ ಕರೆ ಕೊಡಲಾಗಿದೆ. ಇದರ ಬೆನ್ನಲ್ಲೇ ಹೆಸ್ಕಾಂ ನೌಕರರೂ ಸಹ ಮುಷ್ಕರಕ್ಕೆ ಸಾಥ್ ನೀಡಿದ್ದಾರೆ. ಕರ್ತವ್ಯಕ್ಕೆ ಹಾಜರಾಗದೇ ತಮ್ಮ ಬೇಡಿಕೆಗಳಿಗೆ ಸ್ಪಂದನೆ ನೀಡುವಂತೆ ಮುಷ್ಕರಕ್ಕೆ ಮುಂದಾಗಲಿದ್ದಾರೆ. ಈ ಮೂಲಕ ಹೆಸ್ಕಾಂ ವ್ಯಾಪ್ತಿಯ 50 ಸಾವಿರಕ್ಕೂ ಅಧಿಕ ನೌಕರರು ಮುಷ್ಕರರದಲ್ಲಿ ಭಾಗವಹಿಸಲು ನಿರ್ಧರಿಸಿದ್ದಾರೆ.

ಈ ಕುರಿತಂತೆ ಸರ್ಕಾರ ಸ್ಪಂದನೆ ಮಾಡದಿದ್ದಲ್ಲಿ ನಿರಂತರವಾಗಿ ಅನಿರ್ಧಿಷ್ಠಾವಧಿ ಮುಷ್ಕರದ ಎಚ್ಚರಿಕೆ ನೀಡಿದ್ದಾರೆ. ನೌಕರರು ಸರ್ಕಾರದ ಎದುರು ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿರುವುದು ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ನಮ್ಮ ಸಚಿವರು ಅವರೊಂದಿಗೆ ಸಂಪರ್ಕದಲ್ಲಿದ್ದು, ಅವರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಮುಷ್ಕರ ನಿಲ್ಲಿಸುವಂತೆ ಮನವೊಲಿಸುವ ಪ್ರಕ್ರಿಯೆ ನಡೆದಿದೆ ಎಂದು ಹೇಳಿದರು.
ಒಟ್ಟಾರೆ ಸರ್ಕಾರ ನೌಕರರ ಬೇಡಿಕೆ ಈಡೇರಿಸುವ ಮೂಲಕ ಅವರ ಹಿತ ಕಾಪಾಡುತ್ತಾ ಅನ್ನುವುದನ್ನು ಕಾದುನೋಡಬೇಕಿದೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications