ಪ್ರಮೋದ್ ಮುತಾಲಿಕ್ ಬಂಧಿಸಿ; ಹುಬ್ಬಳ್ಳಿಯಲ್ಲಿ ಪ್ರತಿಭಟನೆ
ಹುಬ್ಬಳ್ಳಿ, ಮೇ,18: ಸಂವಿಧಾನ ರಕ್ಷಣೆಗಾಗಿ ಮತ್ತು ಪ್ರಮೋದ್ ಮುತಾಲಿಕ್ ಬಂಧನಕ್ಕೆ ಒತ್ತಾಯಿಸಿ ಭಾರತ ಮೂಲ ನಿವಾಸಿಗಳ ಒಕ್ಕೂಟ ಮತ್ತು ಸಮತಾ ಸೈನಿಕ ದಳ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದವು.
ಬುಧವಾರ ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸದಸ್ಯರು ರಾಜ್ಯ ಸರ್ಕಾರ ಹಾಗೂ ಪ್ರಮೋದ್ ಮುತಾಲಿಕ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಸಂವಿಧಾನ ವಿರೋಧಿ ಮುತಾಲಿಕ್ರನ್ನು ದೇಶದ್ರೋಹ ಕಾಯ್ದೆ ಅಡಿಯಲ್ಲಿ ಬಂಧಿಸಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ದಲಿತ ಮುಖಂಡ ಶಂಕರ ಅಜಮನಿ ಮಾತನಾಡಿ, "ರಾಷ್ಟ್ರದಲ್ಲಿ ಸಂವಿಧಾನವನ್ನು ಇಂಚಿಂಚಾಗಿ ತೆರವು ಮಾಡುವ ಕೆಲಸ ನಡೆಯುತ್ತಿದೆ, ಕೆಲವರು ಸಂವಿಧಾನ ಬದಲಿ ಮಾಡಲು ನಾವು ಬಂದಿದ್ದೇವೆ, ಸಂವಿಧಾನ ಬೇಡಾ ಎಂದು ಸಂವಿಧಾನ ವಿರೋಧಿ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರವೇ ಬೆಂಬಲ ಕೊಡುತ್ತಿದೆ" ಎಂದು ಆರೋಪಿಸಿದರು.

"ಸಂವಿಧಾನದ ವಿರುದ್ಧ ಮಾತನಾಡುವವರನ್ನು ಸರ್ಕಾರ ಬಂಧಿಸಬೇಕಿತ್ತು. ಅದೇ ಸರ್ಕಾರದ ವಿರುದ್ಧ ಮಾತನಾಡಿದರೇ ಅವರ ವಿರುದ್ಧ ದೇಶದ್ರೋಹದ ಕೇಸುಗಳನ್ನು ಹಾಕಲಾಗುತ್ತಿದೆ. ಪ್ರಮೋದ್ ಮುತಾಲಿಕ್ ಒಂದೇ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾತನಾಡುತ್ತಿದ್ದಾರೆ. ಸರ್ಕಾರ ಮಾಡುವ ಕೆಲಸವನ್ನು ಪ್ರಮೋದ್ ಮುತಾಲಿಕ್ ಮಾಡುತ್ತಿದ್ದಾರೆ. ಹಿಂದೂ ಧರ್ಮವನ್ನು ಪ್ರಮೋದ್ ಮುತಾಲಿಕ್ ಗುತ್ತಿಗೆ ಪಡೆದಿದ್ದಾರೆಯೇ?" ಎಂದು ಪ್ರಶ್ನೆ ಮಾಡಿದರು.
ಸಂವಿಧಾನ ವಿರೋಧಿ; ದಲಿತ ಮುಖಂಡ ಶಂಕರ್ ಅಜಮನಿ ಮಾತನಾಡಿ, "ಮುತಾಲಿಕ್ ಮಸೀದಿಗೆ ಮುತ್ತಿಗೆ ಹಾಕುತ್ತೇನೆ ಎನ್ನಲು ಈತ ಯಾರು.?. ಧರ್ಮ ಧರ್ಮದ ವಿರುದ್ಧ ಜಗಳ ಹಚ್ಚುತ್ತಿದ್ದಾರೆ. ರಾಮರಾಜ್ಯ ಅಂದರೆ ಇದೇನಾ?. ಬಡವರ ಮೇಲೆ ಗಲಾಟೆ ಮಾಡುವುದು ರಾಮನ ಸೈನ್ಯ ಕೆಲಸವಾ?" ಎಂದು ಕೇಳಿದರು.

ದೇಗುಲಗಳಲ್ಲಿ ಸುಪ್ರಭಾತ ಹಾಗೂ ಇನ್ನಿತರ ಪ್ರಾರ್ಥನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಹೇಳಿಕೆ ನೀಡಿದ್ದ ಪ್ರಮೋದ್ ಮುತಾಲಿಕ್ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.
ರಾಷ್ಟ್ರಪತಿಗಳಿಗೆ ಮನವಿ: ಪ್ರಮೋದ್ ಮುತಾಲಿಕ್ರನ್ನು ಕೂಡಲೇ ಬಂಧಿಸಬೇಕು ಮತ್ತೆ ಗಡಿಪಾರು ಮಾಡುವ ಕೆಲಸ ಮಾಡಬೇಕೆಂದು ಒತ್ತಾಯಿಸಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications