ಬಿಜೆಪಿಗೆ ಯಾರೇ ಸೇರಿದರು 'ವಾಷಿಂಗ್ ಪೌಡರ್ ನಿರ್ಮಾ' ಆಗುತ್ತಾರೆ: ಸಂತೋಷ್ ಲಾಡ್ ವ್ಯಂಗ್ಯ
ಹುಬ್ಬಳ್ಳಿ, ಮಾರ್ಚ್ 25: ಪ್ರಧಾನಿ ನರೇಂದ್ರ ಮೋದಿಯವರು ಭ್ರಷ್ಟಾಚಾರಕ್ಕೆ ಅವಕಾಶ ಕೊಡುವುದಿಲ್ಲ ಎಂದು ಹೇಳುತ್ತಾರೆ. ಈಗ ನೋಡಿದರೆ ಭ್ರಷ್ಟಾಚಾರ ಮಾಡಿದವರನ್ನೇ ಪಕ್ಷಕ್ಕೆ ಕರೆತಂದಿದ್ದಾರೆ ಎಂದು ಕೆಆರ್ಪಿಪಿ ಸಂಸ್ಥಾಪಕ ಜಿ.ಜನಾರ್ಧನ್ ರೆಡ್ಡಿ ಅವರ ಬಿಜೆಪಿ ಸೇರ್ಪಡೆ ಕುರಿತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ದೂರಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಯಾರೇ ಆಗಲಿ ಬಿಜೆಪಿಗೆ ಸೇರ್ಪಡೆಗೊಂಡರೆ ಶುದ್ಧರಾಗುತ್ತಾರೆ. ಸೇರಿದವರು ವಾಷಿಂಗ್ ಪೌಡರ್ ನಿರ್ಮಾ ಆಗುತ್ತಾರೆ ಎಂದರು. ಇನ್ನು ಚುನಾವಣೆಯಲ್ಲಿ ಬಿಜೆಪಿಗೆ ಸೀಟುಗಳು ಕಡಿಮೆ ಬರುವ ಸರ್ವೇ ರಿಪೋರ್ಟ್ ಬಂದಿದೆ. ಈ ಆಧಾರದಲ್ಲಿಯೇ ಬಿಜೆಪಿಯವರು ಸಣ್ಣಪುಟ್ಟ ಪ್ರಾದೇಶಿಕ ಪಕ್ಷಗಳನ್ನು ವಿಲೀನಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹರಿಹಾಯ್ದರು.

ಬಿಜೆಪಿಗೆ ದೇಶಾದ್ಯಂತ 200 ಸೀಟು
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಈ ಹಿಂದೆ ಶೇಕಡಾ 37 ರಷ್ಟು ಮತಗಳು ಬಂದಿದ್ದವು. ಇದೀಗ ಶೇ.29 ರಷ್ಟು ಮಾತ್ರ ಮತಗಳು ಬರಬಹುದು ಎಂದು ಸರ್ವೇಯಲ್ಲಿ ಹೇಳಿದೆ. ಇದರಡಿ ದೇಶದಾದ್ಯಂತ ಬಿಜೆಪಿಗೆ 200 ಸೀಟುಗಳು ಮಾತ್ರ ಬಿಜೆಪಿಗೆ ಬರಲಿವೆ ಎಂದು ಹೇಳಲಾಗಿದೆ.
ಲೋಕಸಭಾ ಚುನಾವಣೆ ಕಳೆದ 10 ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಮೇಲೆ ನಡೆಯಬೇಕು. ಅದು ಬಿಟ್ಟು ಇದೀಗ ಆರೋಪ ಪ್ರತ್ಯಾರೋಪಗಳ ಮೇಲೆ ನಡೆಯುವಂತಾಗಿದೆ. ಇದು ದುರ್ದೈವ, ವಿಶ್ವ ಗುರು ಎಂದು ಹೇಳಿಕೊಳ್ಳುವ ನರೇಂದ್ರ ಮೋದಿ ಅವರ ಕಾಲದಲ್ಲಿಯೇ ದೊಡ್ಡ ದೊಡ್ಡ ಕಂಪನಿಗಳು ಮುಚ್ಚಿ ಹೋಗಿವೆ ಎಂದು ಅವರು ವಾಗ್ದಾಳಿ ನಡೆಸಿದರು.
BSNL ಯಾಕೆ ನಷ್ಟದಲ್ಲಿದೇ?
ಖಾಸಗಿ ಕಂಪನಿಗೆ ಜಾಹಿರಾತು ಕೊಡುವ ಪ್ರಧಾನಿ ಮೋದಿ ಅವರು ಸರ್ಕಾರಿ ಸ್ವಾಮ್ಯದ BSNL ಯಾಕೆ ನಷ್ಟದಲ್ಲಿದೆ? ಎಂದು ಪ್ರಶ್ನೆ ಮಾಡಿದರು.
ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ನಾನು ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ. ಪ್ರಹ್ಲಾದ್ ಜೋಶಿಯವರ ಜೊತೆ ಹಲವು ಬಾರಿ ವಿಮಾನ ಪ್ರಯಾಣ ಮಾಡಿದ್ದೇನೆ. ನಮ್ಮ ನಡುವೆ ನಡೆದ ಸಂವಾದದ ಬಗ್ಗೆ ಪ್ರಹ್ಲಾದ್ ಜೋಶಿಯವರು ತಿರುಚಿ, ಸುಳ್ಳು ಹೇಳುತ್ತಿದ್ದಾರೆ ಎಂದು ಸಚಿವರು ಆರೋಪಿಸಿದರು.

ಚುನಾವಣೆ ಎದುರಿಸುವ ಬಗ್ಗೆ ಚರ್ಚೆ
ಲೋಕಸಭಾ ಚುನಾವಣೆ ಪ್ರಚಾರ ಆರಂಭಿಸಿದ್ದೇವೆ. ಮೇ 7ರವರೆಗೆ ಪಕ್ಷದ ಮುಖಂಡರು ಸೇರಿ ಯಾವ ರೀತಿ ಚುನಾವಣೆ ಎದುರಿಸಬೇಕು ಎನ್ನುವುದರ ಬಗ್ಗೆ ಚರ್ಚೆ ಮಾಡುತ್ತೇವೆ. ಈ ಬಾರಿ ಧಾರವಾಡದಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ದೇಶದಲ್ಲಿ ಬಿಜೆಪಿ ಸೋಲಲಿದೆ ಎಂದು ಅವರು ಭವಿಷ್ಯ ನುಡಿದರು.
ಕರ್ನಾಟಕದಲ್ಲೂ ಕಾಂಗ್ರೆಸ್ ಅತ್ಯಧಿಕ ಸೀಟುಗಳನ್ನು ಗೆಲ್ಲಲಿದೆ. 4 ಲಕ್ಷ ಅಂತರದಿಂದ ಗೆಲುತ್ತೇವೆ ಎಂದು ಪ್ರಹ್ಲಾದ್ ಜೋಶಿಯವರು ಹೇಳಿದ್ದಾರೆ. ಅವರಿಗೆ ಗೆದ್ದು ಗೆದ್ದು ಅಭ್ಯಾಸ ಇದೆ, 4 ಲಕ್ಷ ಮತಗಳ ಅಂತರದಿಂದ ಎಲ್ಲಿಂದ ಗೆಲ್ಲುತ್ತಾರೋ ಗೊತ್ತಿಲ್ಲ ಎಂದು ಲೇವಡಿ ಮಾಡಿದರು.
ಟಿಕೆಟ್ ಕೈ ತಪ್ಪಿದ್ದಕ್ಕೆ ಕೆಲವೆಡೆ ಅಸಮಾಧಾನ
ಧಾರವಾಡ ಟಿಕೆಟ್ ಕೈ ತಪ್ಪಿದ್ದಕ್ಕೆ ಒಂದರಡು ಕಡೆಗಳಲ್ಲಿ ಅಸಮಾಧಾನ ಆಗಿದೆ. ವಿನಯ್ ಕುಲಕರ್ಣಿ ಸೇರಿ ನಮ್ಮ ಪಕ್ಷದ ಮುಖಂಡರು ಮಾತನಾಡುತ್ತಾರೆ. ಅವರಿಗೆ ಸಹಜವಾಗಿ ನೋವಾಗಿರುತ್ತದೆ.
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ 10 ವರ್ಷದಲ್ಲಿ ಮಾಡಿದ ಅಭಿವೃದ್ಧಿ ಹೇಳುತ್ತಿಲ್ಲ. ಅವರು ಚರ್ಚೆಗೆ ಬರುತ್ತಿಲ್ಲ. ಬಿಜೆಪಿಯವರು ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಜಿಡಿಪಿಯಲ್ಲಿ ಭಾರತವು ಬಾಂಗ್ಲಾದೇಶಕ್ಕಿಂತ ನಾವು ಹಿಂದೆ ಇದೆ. ಎಲೆಕ್ಟ್ರೋಲ್ ಬಾಂಡ್ ಬಗ್ಗೆ ಪ್ರಹ್ಲಾದ್ ಜೋಶಿ ಅವರು ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications