ಹೋಟೆಲ್ ಸಿಬ್ಬಂದಿ ಮುಂದೆಯೇ ಚಂದ್ರಶೇಖರ ಗುರೂಜಿ ಹತ್ಯೆ
ಹುಬ್ಬಳ್ಳಿ, ಜುಲೈ 05; ಹುಬ್ಬಳ್ಳಿಯ ಉಣಕಲ್ ಕೆರೆ ಬಳಿಯ ಹೋಟೆಲ್ನಲ್ಲಿ ಸರಳವಾಸ್ತು ಖ್ಯಾತಿಯ ಡಾ. ಚಂದ್ರಶೇಖರ ಗುರೂಜಿ ಹತ್ಯೆ ನಡೆದಿದೆ. ಹೋಟೆಲ್ ಸಿಬ್ಬಂದಿಯ ಸಮ್ಮುಖದಲ್ಲಿಯೇ ಹತ್ಯೆ ನಡೆದಿದೆ.
ಮಂಗಳವಾರ ಗುರೂಜಿ ಉಳಿದುಕೊಂಡಿದ್ದ ಹೊಟೇಲ್ಗೆ ಹಂತಕರು ಬಂದಿದ್ದಾರೆ. ಹೋಟೆಲ್ನ ರಿಸಪ್ಷನ್ಗೆ ಗುರೂಜಿಗೆ ಕರೆಸಿಕೊಂಡಿದ್ದಾರೆ. ಆರೋಪಿಗಳು ಬಂದ ಅರ್ಧಗಂಟೆಯ ತರುವಾಯ ಅಂದರೆ 12.43ಕ್ಕೆ ಸರಿಯಾಗಿ ಹಂತಕರ ಪೈಕಿಯಲ್ಲಿ ಓರ್ವ ಭಕ್ತನಂತೆ ಕಾಲಿಗೆ ಎರಗುತ್ತಾನೆ. ಕಾಲಿಗೆ ಎರಗಿದ್ದೇ ತಡ ಮತ್ತೊಬ್ಬ ಚಾಕುವಿನಿಂದ ಇರಿದಿದ್ದಾನೆ ಬಳಿಕ ಆತನ ಜೊತೆಗೆ ಕಾಲಿಗೆರಗಿದ್ದ ಇನ್ನೊಬ್ಬ ಸಹ ಚಾಕುವಿನಿಂದ ಇರಿದಿದ್ದಾನೆ.
ದಿಕ್ಕಾಪಾಲಾಗಿ ಓಡಿದ ಹೋಟೆಲ್ ಸಿಬ್ಬಂದಿ; ಡಾ. ಚಂದ್ರಶೇಖರ್ ಗುರೂಜಿಯವರು ಹೋಟೆಲ್ನ ರಿಸಪ್ಷನ್ಗೆ ಬರುತ್ತಿದ್ದಂತೆ ಚೇರ್ ಮೇಲೆ ಕುಳಿತಿದ್ದಾರೆ. ಈ ವೇಳೆ ಕಾಲಿಗೆ ಒಬ್ಬ ಬೀಳುತ್ತಿದ್ದಂತೆ ಮತ್ತೊಬ್ಬ ಚಾಕುವಿನಿಂದ ಇರಿಯುತ್ತಾನೆ. ಆಗ ಅಲ್ಲೇ ಇದ್ದ ಹೋಟೆಲ್ನ ಮಹಿಳಾ ಸಿಬ್ಬಂದಿ ಮೊದಲು ಓಡಿ ಹೋಗುತ್ತಾರೆ. ಇತರೆ ಪುರುಷ ಸಿಬ್ಬಂದಿಗಳು ಹತ್ತಿರಕ್ಕೆ ಹೋಗಲು ಪ್ರಯತ್ನಿಸಿದರು ಚಾಕುವನ್ನು ತೋರಿಸಿ ದುಷ್ಕರ್ಮಿಗಳು ಹೋಟೆಲ್ ಸಿಬ್ಬಂದಿಗೆ ಹೆದರಿಸಿದ್ದಾರೆ. ಇದರಿಂದ ಕೆಲವರು ಹೆದರಿ ಹೆದರಿ ಹಿಂದಕ್ಕೆ ಸರಿಯುತ್ತಾರೆ.
ಹಂತಕರು ಚಾಕು ಹಿಡಿದು ಓಡುವ ದೃಶ್ಯ; ಮತ್ತೊಂದು ಸಿಸಿಟಿವಿಯಲ್ಲಿ ಹಂತಕರು ಚಾಕು ಹಿಡಿದು ಹೋಟೆಲ್ನಿಂದ ಹೊರಗೆ ಓಡುವ ದೃಶ್ಯ ಸೆರೆಯಾಗಿದೆ. ಈ ವೇಳೆಯಲ್ಲಿ ಹಂತಕರು ಓಡುತ್ತಿರುವ ದೃಶ್ಯದಲ್ಲಿ ಹಂತಕರ ಮುಖ ಚಹರೆ ಸಹ ಪತ್ತೆಯಾಗಿದೆ. ಸಿಸಿಟಿವಿಯ ದೃಶ್ಯದ ಆಧಾರದಲ್ಲಿ ಆರೋಪಿಗಳು ಯಾರು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.

ಸಿಡಿಆರ್ ಮೊರೆ ಹೋದ ಪೊಲೀಸ್ ತಂಡ; ಡಾ. ಚಂದ್ರಶೇಖರ್ ಗುರೂಜಿಯನ್ನು ಕೊಂದಿದ್ದು ಯಾರು ಎನ್ನುವುದನ್ನು ಪತ್ತೆ ಹಚ್ಚಲು ಈಗಾಗಲೇ ಶ್ವಾನದಳವನ್ನು ಕರೆಸಲಾಗಿದೆ. ಇದರ ಜೊತೆಗೆ ಪೊಲೀಸರು ಸಿಡಿಆರ್ ಮೊರೆಯನ್ನು ಸಹ ಹೋಗಿದ್ದಾರೆ. ಚಂದ್ರಶೇಖರ್ ಗುರೂಜಿಯರಿಗೆ ರಿಸಪ್ಷನ್ಗೆ ಬರುವ ಮೊದಲು ಕರೆ ಮಾಡಿದ್ದು ಯಾರು. ಆ ನಂಬರ್ ಯಾವುದು ಎಂಬುದನ್ನು ಪತ್ತೆ ಮಾಡಿ ಸಿಡಿಆರ್ ಮೊರೆ ಹೋಗಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications