ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ SDPI ಖ್ಯಾತೆ
ಹುಬ್ಬಳ್ಳಿ, ಸೆಪ್ಟಂಬರ್ 06: ಇಲ್ಲಿನ ಚೆನ್ನಮ್ಮ ವೃತ್ತದ ಬಳಿ ಇರುವ ವಿವಾದಿತ ಈದ್ಗಾ ಮೈದಾನದಲ್ಲಿ ನಿರಂತರ ಪ್ರಯತ್ನ, ಹೋರಾಟಗಳ ಫಲವಾಗಿ ಗಣೇಶ ಕೂರಿಸಲು, ಆಗಸ್ಟ್ 15ರಂದು ಧ್ವಜಾರೋಹಣ ಮಾಡಲು ಅವಕಾಶ ಸಿಕ್ಕಿದೆ. ಮೊನ್ನೆಯಷ್ಟೆ ಸರ್ಕಾರವೇ ಇಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಿದರೂ ಸಹಿತ ಇಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್ಡಿಪಿಐ) ವಿರೋಧ ವ್ಯಕ್ತಪಡಿಸಿದೆ.
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮೂರು ದಿನಗಳ ಅವಕಾಶ ಸಿಕ್ಕಿದೆ. ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ ನಾಳೆ ಸೆಪ್ಟಂಬರ್ 07ರಂದು ಶನಿವಾರ 'ರಾಮರೂಪಿ ಗಣೇಶ' ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಒಂದು ದಿನ ಬಾಕಿ ಇರುವಾಗಲೇ ಇದೀಗ ಎಸ್ಡಿಪಿಐ ಆಕ್ಷೇಪ ವ್ಯಕ್ತಪಡಿಸಿದೆ.

ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನೀಡಿರುವ ಅನುಮತಿಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್ಡಿಪಿಐ) ನಗರ ಬ್ಲಾಕ್ ಕಮಿಟಿ ಅಧ್ಯಕ್ಷ ಮಲ್ಲಿಕ್ ಜಾನ್ ಕಳಸ್ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತರ ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಎಸ್ಡಿಪಿಐ ಹೇಳುತ್ತಿರುವ ಕಾರಣವೇನು?
ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಗೆ ಪ್ರಾರ್ಥನೆ (ನಮಾಜ್) ಮಾಡಲು ಮತ್ತು ಜನವರಿ 26 ಹಾಗೂ ಆಗಸ್ಟ್ 15ರಂದು ರಾಷ್ಟ್ರಧ್ವಜಾರೋಹಣ ಮಾಡಲು ಮಾತ್ರ ಅವಕಾಶ ಇರುತ್ತದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುತ್ತಿರುವುದು ಸಮುದಾಯದ ಜನರಿಗೆ ಅಸಮಾಧಾನ ಉಂಟು ಮಾಡಿದೆ' ಎಂದು ಅವರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ವಿವಾದಾತ್ಮಕ ಮೈದಾನದಲ್ಲಿ ಪದೇ ಪದೆ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುತ್ತಿರುವುದು ಎರಡೂ ಸಮುದಾಯದ ಜನರಲ್ಲಿ ವೈಷಮ್ಯ ಉಂಟಾಗಲು ದಾರಿ ಮಾಡಿಕೊಟ್ಟಂತಾಗುತ್ತದೆ. ಅಧಿಕಾರಿಗಳು ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪಿಸಲು ನೀಡಿರುವ ಅನುಮತಿಯನ್ನು ತಕ್ಷಣ ರದ್ದುಪಡಿಸಿ, ಪಾಲಿಕೆಗೆ ಸಂಬಂಧಿಸಿದ ಬೇರೆ ಮೈದಾನದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೊಡಬೇಕು' ಎಂದು ಒತ್ತಾಯಿಸಿದ್ದಾರೆ.
ಎಸ್ಡಿಪಿಐ ಪ್ರಮುಖರಾದ ಅಮನ ಖಾನ ಶಿವಳ್ಳಿ, ಆದಮ ಅತ್ತಾರ, ಹಮೀದ ಬಂಗಾಲಿ, ಬಶೀರ್ ಮುದುಗಲ್, ಎಜಾಜ್ ಶೇಖ್ ಹಾಗೂ ಇತರರು ಪಾಲಿಕೆಗೆ ಒತ್ತಾಯಿಸಿದ್ದಾರೆ.
ಶಾಂತಿಯುತವಾಗಿ ಸಾಗುತ್ತಿದೆ ಗಣೇಶೋತ್ಸವ ಸಿದ್ಧತೆ
ಒಂದು ಕಡೆ ಗಣೇಶೋತ್ಸವಕ್ಕೆ ಈದ್ಗಾ ಮೈದಾನದಲ್ಲಿ ಸಕಲ ಸಿದ್ಧತೆ, ಪೆಂಡಾಲ್ ಹಾಕುವುದು, ಭದ್ರತೆ, ಇನ್ನಿತರ ಎಲ್ಲ ತಯಾರಿ ನಡೆದಿವೆ. ಶಾಂತಿಯುತವಾಗಿ ಉತ್ಸವದಾಚರಣೆಗೆ ಮೂರು ಸಾವಿರ ಮಠದ ಸ್ವಾಮೀಜಿ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಕರೆ ನೀಡಿದ್ದಾರೆ.
ಸದ್ಯದವರೆಗೆ ಎಲ್ಲವು ಶಾಂತಿಯುತವಾಗಿ ಸಾಗುತ್ತಿದೆ. ಈ ಮಧ್ಯೆ ಎಸ್ಡಿಪಿಐ ಆಕ್ಷೇಪ ಎತ್ತಿದೆ. ಇದರಿಂದ ಪರಿಸ್ಥಿತಿ ಹದಗೆಡದಂತೆ ಪೊಲೀಸರು ಮತ್ತಷ್ಟು ಕಟ್ಟೆಚ್ಚರ ವಹಿಸಲಿದ್ದಾರೆ. ಈದ್ಗಾ ಮೈದಾನದಲ್ಲಿ ಕಳೆದ ಎರಡು ಬಾರಿಯು ಅನುಮತಿ ನೀಡಿದ್ದರೂ ಈ ಬಾರಿಯು ನೀಡಿದ್ದಾರೆ. ಹೀಗಾಗಿ ಅನುಮತಿ ಹಿಂಪಡೆಯುವುದು ಅನುಮಾನ ಎನ್ನಬಹುದು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications