Get Updates
Get notified of breaking news, exclusive insights, and must-see stories!

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ SDPI ಖ್ಯಾತೆ

ಹುಬ್ಬಳ್ಳಿ, ಸೆಪ್ಟಂಬರ್ 06: ಇಲ್ಲಿನ ಚೆನ್ನಮ್ಮ ವೃತ್ತದ ಬಳಿ ಇರುವ ವಿವಾದಿತ ಈದ್ಗಾ ಮೈದಾನದಲ್ಲಿ ನಿರಂತರ ಪ್ರಯತ್ನ, ಹೋರಾಟಗಳ ಫಲವಾಗಿ ಗಣೇಶ ಕೂರಿಸಲು, ಆಗಸ್ಟ್ 15ರಂದು ಧ್ವಜಾರೋಹಣ ಮಾಡಲು ಅವಕಾಶ ಸಿಕ್ಕಿದೆ. ಮೊನ್ನೆಯಷ್ಟೆ ಸರ್ಕಾರವೇ ಇಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಿದರೂ ಸಹಿತ ಇಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ವಿರೋಧ ವ್ಯಕ್ತಪಡಿಸಿದೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮೂರು ದಿನಗಳ ಅವಕಾಶ ಸಿಕ್ಕಿದೆ. ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ ನಾಳೆ ಸೆಪ್ಟಂಬರ್ 07ರಂದು ಶನಿವಾರ 'ರಾಮರೂಪಿ ಗಣೇಶ' ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಒಂದು ದಿನ ಬಾಕಿ ಇರುವಾಗಲೇ ಇದೀಗ ಎಸ್‌ಡಿಪಿಐ ಆಕ್ಷೇಪ ವ್ಯಕ್ತಪಡಿಸಿದೆ.

SDPI has Opposed Hubballi Idgah Maidan Ganesh Festival 2024

ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನೀಡಿರುವ ಅನುಮತಿಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ನಗರ ಬ್ಲಾಕ್‌ ಕಮಿಟಿ ಅಧ್ಯಕ್ಷ ಮಲ್ಲಿಕ್ ಜಾನ್ ಕಳಸ್ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತರ ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಎಸ್‌ಡಿಪಿಐ ಹೇಳುತ್ತಿರುವ ಕಾರಣವೇನು?

ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಗೆ ಪ್ರಾರ್ಥನೆ (ನಮಾಜ್) ಮಾಡಲು ಮತ್ತು ಜನವರಿ 26 ಹಾಗೂ ಆಗಸ್ಟ್ 15ರಂದು ರಾಷ್ಟ್ರಧ್ವಜಾರೋಹಣ ಮಾಡಲು ಮಾತ್ರ ಅವಕಾಶ ಇರುತ್ತದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುತ್ತಿರುವುದು ಸಮುದಾಯದ ಜನರಿಗೆ ಅಸಮಾಧಾನ ಉಂಟು ಮಾಡಿದೆ' ಎಂದು ಅವರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ವಿವಾದಾತ್ಮಕ ಮೈದಾನದಲ್ಲಿ ಪದೇ ಪದೆ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುತ್ತಿರುವುದು ಎರಡೂ ಸಮುದಾಯದ ಜನರಲ್ಲಿ ವೈಷಮ್ಯ ಉಂಟಾಗಲು ದಾರಿ ಮಾಡಿಕೊಟ್ಟಂತಾಗುತ್ತದೆ. ಅಧಿಕಾರಿಗಳು ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪಿಸಲು ನೀಡಿರುವ ಅನುಮತಿಯನ್ನು ತಕ್ಷಣ ರದ್ದುಪಡಿಸಿ, ಪಾಲಿಕೆಗೆ ಸಂಬಂಧಿಸಿದ ಬೇರೆ ಮೈದಾನದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೊಡಬೇಕು' ಎಂದು ಒತ್ತಾಯಿಸಿದ್ದಾರೆ.

ಎಸ್‌ಡಿಪಿಐ ಪ್ರಮುಖರಾದ ಅಮನ ಖಾನ ಶಿವಳ್ಳಿ, ಆದಮ ಅತ್ತಾರ, ಹಮೀದ ಬಂಗಾಲಿ, ಬಶೀರ್ ಮುದುಗಲ್, ಎಜಾಜ್ ಶೇಖ್‌ ಹಾಗೂ ಇತರರು ಪಾಲಿಕೆಗೆ ಒತ್ತಾಯಿಸಿದ್ದಾರೆ.

ಶಾಂತಿಯುತವಾಗಿ ಸಾಗುತ್ತಿದೆ ಗಣೇಶೋತ್ಸವ ಸಿದ್ಧತೆ

ಒಂದು ಕಡೆ ಗಣೇಶೋತ್ಸವಕ್ಕೆ ಈದ್ಗಾ ಮೈದಾನದಲ್ಲಿ ಸಕಲ ಸಿದ್ಧತೆ, ಪೆಂಡಾಲ್ ಹಾಕುವುದು, ಭದ್ರತೆ, ಇನ್ನಿತರ ಎಲ್ಲ ತಯಾರಿ ನಡೆದಿವೆ. ಶಾಂತಿಯುತವಾಗಿ ಉತ್ಸವದಾಚರಣೆಗೆ ಮೂರು ಸಾವಿರ ಮಠದ ಸ್ವಾಮೀಜಿ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಕರೆ ನೀಡಿದ್ದಾರೆ.

ಸದ್ಯದವರೆಗೆ ಎಲ್ಲವು ಶಾಂತಿಯುತವಾಗಿ ಸಾಗುತ್ತಿದೆ. ಈ ಮಧ್ಯೆ ಎಸ್‌ಡಿಪಿಐ ಆಕ್ಷೇಪ ಎತ್ತಿದೆ. ಇದರಿಂದ ಪರಿಸ್ಥಿತಿ ಹದಗೆಡದಂತೆ ಪೊಲೀಸರು ಮತ್ತಷ್ಟು ಕಟ್ಟೆಚ್ಚರ ವಹಿಸಲಿದ್ದಾರೆ. ಈದ್ಗಾ ಮೈದಾನದಲ್ಲಿ ಕಳೆದ ಎರಡು ಬಾರಿಯು ಅನುಮತಿ ನೀಡಿದ್ದರೂ ಈ ಬಾರಿಯು ನೀಡಿದ್ದಾರೆ. ಹೀಗಾಗಿ ಅನುಮತಿ ಹಿಂಪಡೆಯುವುದು ಅನುಮಾನ ಎನ್ನಬಹುದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+