ಸೆಲ್ಕೊ ಸೋಲಾರ್ 25 ನೇ ವರ್ಷಾಚರಣೆ; ರಾಜ್ಯಾದ್ಯಂತ ಕಾರ್ಯಕ್ರಮ
ಹುಬ್ಬಳ್ಳಿ, ಡಿಸೆಂಬರ್ 16; ಗ್ರಾಮೀಣ ಜೀವನೋಪಾಯದ ಕೆಲಸಗಳಿಗೆ ಇರುವ ವಿದ್ಯುತ್ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಜೀವನಾಧಾರಕ್ಕಾಗಿ 'ಸುಸ್ಥಿರ ಇಂಧನ-ಸೌರಶಕ್ತಿ ಜೀವನಕ್ಕೆ ಆಧಾರ' ಎಂಬ ಧ್ಯೇಯೋದ್ದೇಶದ ಹಿನ್ನೆಲೆಯಲ್ಲಿ ಮ್ಯಾಗ್ಸಸೆ ಪ್ರಶಸ್ತಿ ಪುರಸ್ಕೃತ ಹರೀಶ್ ಹಂದೆ ಅವರ ಸೆಲ್ಕೊ ಸೋಲಾರ್ ಪ್ರೈವೆಟ್ ಲಿಮಿಟೆಡ್ ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ.
ಈ ಕುರಿತು ಸೆಲ್ಕೊ ಸೋಲಾರ್ ಎಜಿಎಂ ಪ್ರಸನ್ನ ಹೆಗಡೆ ಅವರು ಹುಬ್ಬಳ್ಳಿಯಲ್ಲಿ ಇಂದು ನಡೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿ, ಡಿ.19ರಿಂದ ಜನವರಿ19ರ ವರೆಗೆ ಸೌರಶಕ್ತಿಯನ್ನು ಸಮುದಾಯಾಧರಿತವಾಗಿ ಮುನ್ನಡೆಸುವ ಸೆಲ್ಕೊ ಸೋಲಾರ್ ನ 25 ನೇ ವರ್ಷಾಚರಣೆ ಪ್ರಯುಕ್ತ ಸೌರ ಬದುಕು ಮಾಸಾಚರಣೆಯನ್ನು ರಾಜ್ಯದ್ಯಂತ ಆಯೋಜಿಸಲಾಗಿದ್ದು, ರಾಜ್ಯದ ಹಲವಾರು ಕುಟುಂಬಗಳಿಗೆ ಸೆಲ್ಕೊ, ಸೋಲಾರ್ ಬೆಳಕನ್ನು ಹರಿಸಲಿದೆ. ಸೆಲ್ಕೊ ಸಂಸ್ಥೆಯು ತನ್ನ 25 ವರ್ಷಗಳಲ್ಲಿ ಸುಸ್ಥಿರ ಇಂಧನದ ಮೂಲಕ ಬೆಳಕಿನ ಪರಿಹಾರ ನೀಡಿದೆ. ಇತ್ತೀಚಿನ ವರ್ಷಗಳಲ್ಲಿ ಅದೇ ಸುಸ್ಥಿರ ಇಂಧನ ಜೀವನಾಧಾರಕ್ಕೂ ಪರಿಹಾರ ನೀಡಬಲ್ಲದು ಎಂಬುದನ್ನು ತೋರಿಸಿಕೊಟ್ಟಿದ್ದೇವೆ ಎಂದರು.\

ಹಳ್ಳಿಯಲ್ಲಿ ಅದೆಷ್ಟೋ ಗುಡಿ ಕೈಗಾರಿಕೆಗಳು ನಶಿಸಿ ಹೋಗುತ್ತಿದ್ದು, ಜೀವನೋಪಾಯದ ಉದ್ಯೋಗಗಳನ್ನು ಅನೇಕರು ವಿದ್ಯುತ್ ಹಾಗೂ ಇಂಧನದ ಸಮಸ್ಯೆಗಳಿಂದ ಕೈ ಬಿಡುತ್ತಿದ್ದು, ಮುಂಬರುವ ಪೀಳಿಗೆಗಳು ಗುಡಿ ಕೈಗಾರಿಕೆಯನ್ನು ಕೈ ಬಿಡಲು ಇಚ್ಚಿಸುತ್ತಾರೆ. ಕಾರಣ ವಿದ್ಯುತ್ ಹಾಗೂ ಇಂಧನದ ಸಮಸ್ಯೆಗಳೇ ಪ್ರಮುಖವಾಗಿದ್ದು, ಈ ಹಿನ್ನೆಲೆಯಲ್ಲಿ ಸೆಲ್ಕೊ ಸೋಲಾರ್ ಸಂಸ್ಥೆಯು ಅಂತಹ ಕುಟುಂಬಕ್ಕೆ ಬೆಳಕನ್ನು ನೀಡುವ ಮೂಲಕ ಗೃಹ ಕೈಗಾರಿಕೆಗೆ ಪುನರುಜ್ಜೀವನ ನೀಡಲಾಗುತ್ತದೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಸುರೇಶ ಸಾವಳಗಿ, ರಾಜೇಂದ್ರ ಗೀತೆ, ಗುರುಮೂರ್ತಿ ಹೆಗಡೆ, ಸುನಂದನ ಕುಲಕರ್ಣಿ, ಪ್ರಭು ಹೆಗಡೆ ಸೇರಿದಂತೆ ಇತರರು ಇದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications