ಸೆಲ್ಕೊ ಸೋಲಾರ್ 25 ನೇ ವರ್ಷಾಚರಣೆ; ರಾಜ್ಯಾದ್ಯಂತ ಕಾರ್ಯಕ್ರಮ
ಹುಬ್ಬಳ್ಳಿ, ಡಿಸೆಂಬರ್ 16; ಗ್ರಾಮೀಣ ಜೀವನೋಪಾಯದ ಕೆಲಸಗಳಿಗೆ ಇರುವ ವಿದ್ಯುತ್ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಜೀವನಾಧಾರಕ್ಕಾಗಿ 'ಸುಸ್ಥಿರ ಇಂಧನ-ಸೌರಶಕ್ತಿ ಜೀವನಕ್ಕೆ ಆಧಾರ' ಎಂಬ ಧ್ಯೇಯೋದ್ದೇಶದ ಹಿನ್ನೆಲೆಯಲ್ಲಿ ಮ್ಯಾಗ್ಸಸೆ ಪ್ರಶಸ್ತಿ ಪುರಸ್ಕೃತ ಹರೀಶ್ ಹಂದೆ ಅವರ ಸೆಲ್ಕೊ ಸೋಲಾರ್ ಪ್ರೈವೆಟ್ ಲಿಮಿಟೆಡ್ ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ.
ಈ ಕುರಿತು ಸೆಲ್ಕೊ ಸೋಲಾರ್ ಎಜಿಎಂ ಪ್ರಸನ್ನ ಹೆಗಡೆ ಅವರು ಹುಬ್ಬಳ್ಳಿಯಲ್ಲಿ ಇಂದು ನಡೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿ, ಡಿ.19ರಿಂದ ಜನವರಿ19ರ ವರೆಗೆ ಸೌರಶಕ್ತಿಯನ್ನು ಸಮುದಾಯಾಧರಿತವಾಗಿ ಮುನ್ನಡೆಸುವ ಸೆಲ್ಕೊ ಸೋಲಾರ್ ನ 25 ನೇ ವರ್ಷಾಚರಣೆ ಪ್ರಯುಕ್ತ ಸೌರ ಬದುಕು ಮಾಸಾಚರಣೆಯನ್ನು ರಾಜ್ಯದ್ಯಂತ ಆಯೋಜಿಸಲಾಗಿದ್ದು, ರಾಜ್ಯದ ಹಲವಾರು ಕುಟುಂಬಗಳಿಗೆ ಸೆಲ್ಕೊ, ಸೋಲಾರ್ ಬೆಳಕನ್ನು ಹರಿಸಲಿದೆ. ಸೆಲ್ಕೊ ಸಂಸ್ಥೆಯು ತನ್ನ 25 ವರ್ಷಗಳಲ್ಲಿ ಸುಸ್ಥಿರ ಇಂಧನದ ಮೂಲಕ ಬೆಳಕಿನ ಪರಿಹಾರ ನೀಡಿದೆ. ಇತ್ತೀಚಿನ ವರ್ಷಗಳಲ್ಲಿ ಅದೇ ಸುಸ್ಥಿರ ಇಂಧನ ಜೀವನಾಧಾರಕ್ಕೂ ಪರಿಹಾರ ನೀಡಬಲ್ಲದು ಎಂಬುದನ್ನು ತೋರಿಸಿಕೊಟ್ಟಿದ್ದೇವೆ ಎಂದರು.\

ಹಳ್ಳಿಯಲ್ಲಿ ಅದೆಷ್ಟೋ ಗುಡಿ ಕೈಗಾರಿಕೆಗಳು ನಶಿಸಿ ಹೋಗುತ್ತಿದ್ದು, ಜೀವನೋಪಾಯದ ಉದ್ಯೋಗಗಳನ್ನು ಅನೇಕರು ವಿದ್ಯುತ್ ಹಾಗೂ ಇಂಧನದ ಸಮಸ್ಯೆಗಳಿಂದ ಕೈ ಬಿಡುತ್ತಿದ್ದು, ಮುಂಬರುವ ಪೀಳಿಗೆಗಳು ಗುಡಿ ಕೈಗಾರಿಕೆಯನ್ನು ಕೈ ಬಿಡಲು ಇಚ್ಚಿಸುತ್ತಾರೆ. ಕಾರಣ ವಿದ್ಯುತ್ ಹಾಗೂ ಇಂಧನದ ಸಮಸ್ಯೆಗಳೇ ಪ್ರಮುಖವಾಗಿದ್ದು, ಈ ಹಿನ್ನೆಲೆಯಲ್ಲಿ ಸೆಲ್ಕೊ ಸೋಲಾರ್ ಸಂಸ್ಥೆಯು ಅಂತಹ ಕುಟುಂಬಕ್ಕೆ ಬೆಳಕನ್ನು ನೀಡುವ ಮೂಲಕ ಗೃಹ ಕೈಗಾರಿಕೆಗೆ ಪುನರುಜ್ಜೀವನ ನೀಡಲಾಗುತ್ತದೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಸುರೇಶ ಸಾವಳಗಿ, ರಾಜೇಂದ್ರ ಗೀತೆ, ಗುರುಮೂರ್ತಿ ಹೆಗಡೆ, ಸುನಂದನ ಕುಲಕರ್ಣಿ, ಪ್ರಭು ಹೆಗಡೆ ಸೇರಿದಂತೆ ಇತರರು ಇದ್ದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications