ನಾಡೋಜ ಡಾ ಪಾಟೀಲ ಪುಟ್ಟಪ್ಪನವರಿಗೆ ಶಸ್ತ್ರಚಿಕಿತ್ಸೆ
ಹುಬ್ಬಳ್ಳಿ, ಫೆಬ್ರವರಿ 26; ಶತಾಯುಷಿ, ಹಿರಿಯ ಪತ್ರಕರ್ತ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರು ಅನಾರೋಗ್ಯದಿಂದ ಇಲ್ಲಿನ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ( ಕಿಮ್ಸ್) ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಸಂಪರ್ಕ ಇಲಾಖೆ ಕರ್ನಾಟಕ ಸರ್ಕಾರದ ಕಾರ್ಯದರ್ಶಿ ಪಿ.ಮಣಿವಣ್ಣನ್ ಅವರು ಬುಧವಾರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಈ ಭೇಟಿ ನೀಡಿದ ಅವರು, ಪಾಪು ಅವರಿಗೆ ನೀಡುತ್ತಿರುವ ಚಿಕಿತ್ಸೆ, ವೈದ್ಯಕೀಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.
ಶಸ್ತ್ರಚಿಕಿತ್ಸೆ : ಡಾ.ಪಾಪು ಅವರು ಆಸ್ಪತ್ರೆಗೆ ದಾಖಲಾದ ಬಳಿಕ ರಕ್ತದೊತ್ತಡ ಮತ್ತು ಮಧುಮೇಹ ನಿಯಂತ್ರಣಕ್ಕೆ ಬಂದಿದೆ, ಇಂದು ಬೆಳಿಗ್ಗೆ ಡಾ.ಎಸ್.ಎಂ.ದುಗ್ಗಾಣಿ, ಡಾ.ವಿಶ್ವನಾಥ, ಡಾ.ಗುರುಪಾದಪ್ಪ ನೇತೃತ್ವದ ತಜ್ಞ ವೈದ್ಯರ ತಂಡದಿಂದ ರಕ್ತದ ಹೆಪ್ಪುಗಟ್ಟುವಿಕೆ ನಿವಾರಿಸಲು ಸಣ್ಣ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದ್ದು, ಇದೀಗ ಆರೋಗ್ಯ ಸ್ಥಿರವಾಗಿದೆ ಎಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ವಿವರಿಸಿದರು. ಪಾಪು ಅವರ ಪುತ್ರ ಅಶೋಕ ಪಾಟೀಲ ಅವರಿಂದ ಹೆಚ್ಚಿನ ವಿವರ ಪಡೆದರು.

ಸಭೆಃ ಕಿಮ್ಸ್ ನಿರ್ದೇಶಕರ ಸಭಾಂಗಣದಲ್ಲಿ ಅನೌಪಚಾರಿಕ ಸಭೆ ನಡೆಸಿದ ಪಿ.ಮಣಿವಣ್ಣನ್ ಅವರು, ಉತ್ತರ ಕರ್ನಾಟಕದ ಸುಮಾರು 8 ಜಿಲ್ಲೆಗಳ ಜನರ ಪಾಲಿಗೆ ಆರೋಗ್ಯ ಸಂಜೀವಿನಿಯಾಗಿರುವ ಕಿಮ್ಸ್ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು.
ಸಾರ್ವಜನಿಕರು ಮತ್ತು ಸಂಸ್ಥೆಯ ಹಳೆಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಕೈಗೊಳ್ಳಬಹುದಾದ ಚಟುವಟಿಕೆಗಳ ಕುರಿತು ಸಮಾಲೋಚನೆ ನಡೆಸಿ ಇದಕ್ಕಾಗಿ ಪ್ರತ್ಯೇಕ ವೆಬ್ ಸೈಟ್ ಸ್ಥಾಪಿಸಿ , ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಸಾಧ್ಯತೆಗಳ ಮಾಹಿತಿ ಸಂಗ್ರಹಿಸಿದರು.
ಜಿಲ್ಲಾಧಿಕಾರಿ ದೀಪಾ ಚೋಳನ್, ಡಾ.ಅರುಣಕುಮಾರ್, ಡಾ.ಡಿ.ಎಂ.ಕಬಾಡಿ, ಡಾ.ಸಫಿಯಾ ಶೇಖ್, ಡಾ.ಶಾಂತಲಾ ಹುನಗುಂದ, ಡಾ.ಮಾಧುರಿ , ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ, ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಪ್ರಕಾಶ ನಾಶಿ ಮತ್ತಿತರರು ಇದ್ದರು.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications