ಹುಬ್ಬಳ್ಳಿ-ಧಾರವಾಡದಲ್ಲಿ ಕಾಣಿಸಿಕೊಂಡ ಚಿಕನ್ ಗುನ್ಯಾ
ಧಾರವಾಡ, ಆಗಸ್ಟ್ 10 : ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಚಿಕನ್ ಗುನ್ಯಾ ಕಾಣಿಸಿಕೊಂಡಿದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳ ಹಲವು ಬಡಾವಣೆಗಳಲ್ಲಿ ರೋಗ ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣ, ತುಂತುರು ಮಳೆ ಸುರಿಯುತ್ತಿದೆ. ಆದ್ದರಿಂದ, ಚಿಕನ್ ಗುನ್ಯಾ ಪ್ರಕರಣಗಳು ಹೆಚ್ಚುತ್ತಿವೆ. ಪ್ರತಿ ದಿನ 7 ರಿಂದ 8 ಜನರು ಜ್ವರದಿಂದಾಗಿ ಆಸ್ಪತ್ರೆಗೆ ಬಂದು ಹೋಗುತ್ತಿದ್ದಾರೆ.
ಕೆಲವು ಬಡಾವಣೆಗಳಲ್ಲಿ ಚಿಕನ್ ಗುನ್ಯಾ ರೋಗಿಗಳ ಸಂಖ್ಯೆ ಹೆಚ್ಚಿದೆ. ಕೆಲವು ಬಡಾವಣೆಗಳಲ್ಲಿ ಅರ್ಧದಷ್ಟು ಜನರು ರೋಗದಿಂದ ಬಳಲುತ್ತಿದ್ದಾರೆ. ಜೆ.ಪಿ.ನಗರವನ್ನು ಪ್ರತಿಷ್ಠಿತ ಬಡಾವಣೆ ಎಂದು ಪರಿಗಣಿಸಲಾಗುತ್ತದೆ. ಆದರೆ, ಈ ಏರಿಯಾದಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಹುಬ್ಬಳ್ಳಿ ತಾಲೂಕಿನ ಗಮನಗಟ್ಟಿ, ನವಲೂರಿನಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಧಾರವಾಡ ತಾಲೂಕಿನ ಅಮ್ಮಿನಬಾವಿ, ಉಪ್ಪಿನ ಬೆಟಗೇರಿ ಸೇರಿದಂತರ ವಿವಿಧ ಕಡೆ ಹಲವು ಪ್ರಕರಣಗಳು ಪತ್ತೆಯಾಗಿವೆ. ಹಲವು ಜನರು ಜ್ವರದಿಂದ ಬಳಲುತ್ತಿದ್ದಾರೆ.
ಆರೋಗ್ಯ ಇಲಾಖೆ ನೀಡುವ ಮಾಹಿತಿಯಂತೆ ನಗರ ಪ್ರದೇಶದಲ್ಲಿ ಹೆಚ್ಚು ಪ್ರಕರಣದಳು ಪತ್ತೆಯಾಗಿವೆ. 8 ರಿಂದ 10 ಜನರು ಪ್ರತಿದಿನ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ.
ಮುಂಜಾಗ್ರತಾ ಕ್ರಮಗಳು
* ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ
* ಮನೆಯ ಸುತ್ತ ಖಾಲಿ ಡಬ್ಬ, ಟಯರ್ ಮುಂತಾದವುಗಳಲ್ಲಿ ನೀರು ಎಲ್ಲದಂತೆ ಎಚ್ಚರ ವಹಿಸಿ
* ಸಂಪೂರ್ಣ ಮೈ ಮುಚ್ಚುವಂತೆ ಬಟ್ಟೆ ಧರಿಸಿ
* ಸೊಳ್ಳೆಗಳಿಂದ ಪಾರಾಗಲು ಕೈ-ಕಾಲುಗಳಿಗೆ ಲೋಶನ್ ಹಚ್ಚಿಕೊಳ್ಳಿ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications