Tulabhara: ಶಿರಹಟ್ಟಿ ಮಠದಿಂದ ಹುಬ್ಬಳ್ಳಿಯಲ್ಲಿ ಫೆ.1ಕ್ಕೆ ಆನೆಸಹಿತ ತುಲಾಭಾರ ಸಮಾರಂಭ, ಸಮಯ, ವೇಳಾಪಟ್ಟಿ
ಬೆಂಗಳೂರು, ಜನವರಿ 30: ವಾಣಿಜ್ಯ ನಗರಿ ಹುಬ್ಬಳ್ಳಿಯು ಗುರುವಾರ ಫೆಬ್ರವರಿ 1ರಂದು ಬೃಹತ್ ತುಲಾಭಾರ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ. 5555 ಕೆ.ಜಿ. ನಾಣ್ಯಗಳಿಂದ ಆನೆ ಸಹಿತ ಸ್ವಾಮೀಜಿಗಳ ತುಲಾಭಾರ ಅದ್ಧೂರಿ ಕಾರ್ಯಕ್ರಮವು ಜರುಗಲಿದೆ.
ಗದಗ ಜಿಲ್ಲೆಯ ಶಿರಹಟ್ಟಿಯ ಭಾವೈಕ್ಯತಾ ಸಂಸ್ಥಾನ ಪೀಠದ ಫಕೀರ ಸಿದ್ಧರಾಮ ಸ್ವಾಮೀಜಿಯವರ ಅಮೃತ ಮಹೋತ್ಸವದ ಪ್ರಯುಕ್ತ ಈ ತುಲಾಭಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಲಕ್ಷಾಂತರ ಭಕ್ತಾಧಿಕಗಳು ಸೇರುವ ನಿರೀಕ್ಷೆ ಇದೆ. ಈ ವಿಜೃಂಭಣೆಯ ಕಾರ್ಯಕ್ರಮಕ್ಕೆ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಭರ್ಜರಿ ಸಿದ್ಧತೆಗಳು ನಡೆದಿವೆ.

ಮಂಗಳವಾರ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ತುಲಾಭಾರದ ಸಿದ್ಧತೆಗಳು, ಆನೆಗಳ ರಿಹರ್ಸಲ್ ಅನ್ನು ಮಠದ ದಿಂಗಾಲೇಶ್ವರ ಸ್ವಾಮೀಜಿಗಳ ಪರಿಶೀಲಿಸಿದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಕಾರ್ಯಕ್ರಮಗಳ ಮಾಹಿತಿ ನೀಡಿದರು.
ಆನೆಯಂಭಾರಿ, ಉತ್ಸವ, ಅಗತ್ಯ ವ್ಯವಸ್ಥೆ
ಮೂರು ಸಾವಿರ ಮಠದ ಪ್ರೌಢಶಾಲೆ ಆವರಣದಲ್ಲಿ ಒಂದು ಲಕ್ಷ ಭಕ್ತರಿಗೆ ವಿಶೇಷ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ದಾಸೋಹದ ನಂತರ ಮಧ್ಯಾಹ್ನ 3 ಗಂಟೆಗೆ ಫಕೀರೇಶ್ವರರ ಆನೆಯಂಬಾರಿ ಉತ್ಸವ, ಫಕೀರ ಸಿದ್ಧರಾಮ ಸ್ವಾಮೀಜಿಯವರ ಪಲ್ಲಕ್ಕಿ ಮಹೋತ್ಸವ ಆರಂಭವಾಗಲಿದೆ ಎಂದು ತಿಳಿಸಿದರು.
ಗಣ್ಯಮಾನ್ಯರ ಉಪಸ್ಥಿತಿ
ಎರಡು ಕ್ವಿಂಟಲ್ ತೇಗದ ಕಟ್ಟಿಗೆಯಿಂದ ಅಂಬಾರಿ ನಿರ್ಮಾಣ ಮಾಡಲಾಗಿದೆ. ಅದರಲ್ಲಿ ಫಕೀರೇಶ್ವರರ ಬೆಳ್ಳಿಯ ಮೂರ್ತಿಯನ್ನು ಇಟ್ಟು ಮೆರವಣಿಗೆ ಮಾಡಲಾಗುವುದು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮುಖ್ಯಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.

ಇನ್ನು ಹುಬ್ಬಳ್ಳಿಯ ದಾಜಿಬಾನಪೇಟೆ, ಸಂಗೊಳ್ಳಿ ರಾಯಣ್ಣ ವೃತ್ತ, ಚನ್ನಮ್ಮ ವೃತ್ತದ ಮೂಲಕ ಮೆರವಣಿಗೆ ನೆಹರೂ ಮೈದಾನ ತಲುಪಲಿದೆ. 5 ಆನೆ, 5 ಕುದುರೆ, 2 ಒಂಟೆ, ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ ಎಂದು ಹೇಳಿದರು.
ತುಲಭಾರ ಕಾರ್ಯಕ್ರಮದ ಸಮಯ, ವಿವಿರ
ಅಂದು ಗುರುವಾರ ಸಂಜೆ 4.30ಕ್ಕೆ ತುಲಾಭಾರ ಕಾರ್ಯಕ್ರಮ ನಡೆಯಲಿದೆ. ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಬಿಜೆಪಿ ಮುಖಂಡ ಮಾಜಿ ಸಿಎಂ ಜಗದೀಶ ಶೆಟ್ಟರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾನೂನು ಸಚಿವ ಎಚ್.ಕೆ.ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಜ್ಯೋತಿ ಬೆಳಗಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅವರು ಜೀವನ ದರ್ಶನ ಪ್ರವಚನದ ಕನ್ನಡ ಮತ್ತು ಇಂಗ್ಲಿಷ್ ಗ್ರಂಥಗಳನ್ನು ಬಿಡುಗಡೆ ಮಾಡಲಿದ್ದಾರೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ತುಲಾಭಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. 5,555 ಕೆ.ಜಿ ನಾಣ್ಯಗಳ ಮೊತ್ತ ₹73.40 ಲಕ್ಷ ಮೌಲ್ಯದ್ದಾಗಿದೆ ಎಂದು ಶ್ರೀಗಳು ವಿವರಿಸಿದರು.
ಈ ಅದ್ಧೂರಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ 18 ಶಾಸಕರು ಭಾಗವಹಿಸಲಿದ್ದಾರೆ. ಅಕ್ಷರಸಂತ ಹಾಜಬ್ಬ ಹರೇಕಳ, ಪ್ರಗತಿಪರ ರೈತ ಡಿ.ಟಿ.ಪಾಟೀಲ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಇದೇ ವೇಳೆ ಸನ್ಮಾನಿಸಲಾಗುವುದು.
75 ದಿನ ಪ್ರವಚನ
ಫಕೀರ ಸಿದ್ಧರಾಮ ಸ್ವಾಮೀಜಿಯವರ ಅಮೃತ ಮಹೋತ್ಸವದ ಪ್ರಯುಕ್ತ ಶಿರಹಟ್ಟಿಯಲ್ಲಿ 75 ದಿನ ಪ್ರವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಪ್ರತಿ ದಿನ ದಾಸೋಹ ವ್ಯವಸ್ತೆ ಇರಲಿದೆ. ಕನ್ನಡ, ಹಿಂದಿ ಇಂಗ್ಲಿಷ್ ಭಾಷೆಗಳ 75 ಗ್ರಂಥಗಳ ಬಿಡುಗಡೆ, ಬಂಗಾರದ ತುಲಾಭಾರ, ಚಿನ್ನದ ಕಿರೀಟ ಧಾರಣೆ ಕಾರ್ಯಕ್ರಮ ಆಯೋಜಿಸಲಾಗುವುದು. ಇದರ ದಿನಾಂಕವನ್ನು ಶೀಘ್ರ ಘೋಷಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ತುಲಾಭಾರಕ್ಕೆ ನೀಡಿದ ಚಿನ್ನದಿಂದ ಸ್ಥಾಯಿನಿಧಿ ಸ್ಥಾಪಿಸಿ, ಅದನ್ನು ಬಡ ಮಕ್ಕಳ ಶಿಕ್ಷಣಕ್ಕೆ ವಿನಿಯೋಗಿಸಲಾಗುವುದು. ಹುಬ್ಬಳ್ಳಿಯಲ್ಲಿ ನಡೆಯುವ ನಾಣ್ಯಗಳ ತುಲಾಭಾರದ ಹಣವನ್ನು ಸಹ ಇದಕ್ಕೆ ಬಳಸಲಾಗುವುದು ಎಂದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications