ಕುಮಾರಸ್ವಾಮಿ-ಸಿದ್ದರಾಮಯ್ಯ ಅಣ್ತಮ್ಮಂದಿರಂತೆ: ಬಂಡೆಪ್ಪ ಕಾಶೆಂಪೂರ್
Recommended Video
ಹುಬ್ಬಳ್ಳಿ, ಮೇ 14: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರ ನಡುವಿನ ಬಾಂಧವ್ಯ ಉತ್ತಮವಾಗಿದೆ. ಅವರು ಅಣ್ಣ ತಮ್ಮಂದಿರಿಗಿಂತ ಹೆಚ್ಚು ಚೆನ್ನಾಗಿದ್ದಾರೆ ಎಂದು ಸಚಿವ ಬಂಡೆಪ್ಪ ಕಾಶೆಂಪೂರ್ ಹೇಳಿದರು.
ಹುಬ್ಬಳ್ಳಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಎಚ್ ವಿಶ್ವನಾಥ್ ಅವರ ನಡುವಿನ ಕಿತ್ತಾಟವು ಮುಗಿದು ಹೋದ ವಿಚಾರ ಎಂದರು. ನಮ್ಮ ನಾಯಕರು ವೈಯಕ್ತಿಕವಾಗಿ ಮಾತನಾಡಿದ್ದಾರೆ. ಇದು ಮುಗಿದುಹೋದ ಕಥೆ. ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಎಲ್ಲವೂ ಸುಗಮವಾಗಿ ನಡೆಯುತ್ತದೆ ಎಂದು ಹೇಳಿದರು.
ಮೇ 23ರ ಬಳಿಕ ಸಮ್ಮಿಶ್ರ ಸರ್ಕಾರದ ಅಂಗಡಿ ಬಂದ್ ಆಗಲಿದೆ ಎಂಬ ಬಿಜೆಪಿಗರ ಹೇಳಿಕೆಗೆ ತಿರುಗೇಟು ನೀಡಿದ ಕಾಶೆಂಪೂರ್, ನಮ್ಮ ಅಂಗಡಿ ಬಂದ್ ಆಗುವುದಿಲ್ಲ. ಬದಲಾಗಿ ಬಿಜೆಪಿಯವರ ಅಂಗಡಿ ಬಂದ್ ಆಗಲಿದೆ ಎಂದರು.

ನಮ್ಮ ನಡುವೆ ಭಿನ್ನಾಭಿಪ್ರಾಯ ಮತ್ತು ಗೊಂದಲವಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಒಗ್ಗಟ್ಟಾಗಿದ್ದೇವೆ. ನಮ್ಮಲ್ಲಿ ಗೊಂದಲ ಸೃಷ್ಟಿಸಬೇಡಿ ಎಂದು ಹೇಳಿದರು.
ಎಚ್ ಡಿ ಕುಮಾರಸ್ವಾಮಿ ಅವರು ಪ್ರಚಾರಕ್ಕೆ ಹೋಗಲು ಸಿದ್ಧರಾಗುತ್ತಿದ್ದರು. ಹೀಗಾಗಿ ಇಬ್ಬರೂ ಭೇಟಿ ಮಾಡಿ ಮಾತನಾಡಲು ಸಾಧ್ಯವಾಗಿರಲಿಲ್ಲ. ಆದರೆ, ಗೊಂದಲವಾದ ಕೂಡಲೇ ಇಬ್ಬರೂ ನಾಯಕರು ಫೋನ್ನಲ್ಲಿ ಕೂಲಂಕಷವಾಗಿ ಮಾತನಾಡಿದ್ದಾರೆ. ಪಕ್ಷದ ನಾಯಕರ ಹಿತದೃಷ್ಟಿಯಿಂದ ಚರ್ಚಿಸಿದ್ದಾರೆ. ಹಿರಿಯ ನಾಯರಕು ಯಾರೂ ಸಿಟ್ಟು ಮಾಡಿಕೊಂಡಿಲ್ಲ. ಎಲ್ಲರೂ ಸೇರಿ ಸಮಾಧಾನ ಮಾಡುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಬಂಡೆಪ್ಪ ಕಾಶೆಂಪೂರ್ ಹೇಳಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications