ಲಿಂಗಾಯತ ಧರ್ಮದ ವಿಚಾರದಲ್ಲಿ ಸಿಎಂಗೆ ಭ್ರಮನಿರಸನ ಗ್ಯಾರಂಟಿ: ಎಚ್ಡಿಕೆ
ಹುಬ್ಬಳ್ಳಿ, ಜುಲೈ 23: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಲವೊಂದು ಜಾತಿ, ಧರ್ಮಗಳನ್ನು ಹಿಡಿತಕ್ಕೆ ತೆಗೆದುಕೊಳ್ಳುತ್ತೇವೆ ಎಂಬ ಭಾವನೆ ಇದೆ. ಆದರೆ, ಇದರಿಂದ ಅವರು ಭ್ರಮನಿರಸನಕ್ಕೆ ಒಳಗಾಗಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮುಖ್ಯಮಂತ್ರಿಗಳಾದವರು ಜಾತಿ, ಧರ್ಮಗಳ ಕುರಿತು ನೇರವಾಗಿ ತಮ್ಮ ಅಭಿಪ್ರಾಯ ಮಂಡಿಸಬಾರದು. ಆದರೆ, ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಅವರು ಇದನ್ನ ಮೀರಿದ್ದಾರೆ. ವೀರಶೈವರಲ್ಲಿ ಎಲ್ಲರೂ ಶ್ರೀಮಂತರಿಲ್ಲ. ಬಹುತೇಕರು ಕೃಷಿಯನ್ನೇ ನಂಬಿಕೊಂಡಿದ್ದಾರೆ. ಅವರಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲು ಮೊದಲು ಆದ್ಯತೆ ನೀಡಬೇಕು," ಎಂದು ಅವರು ಅಭಿಪ್ರಾಯಪಟ್ಟರು.

"ಮಹದಾಯಿ ವಿಷಯವಾಗಿ ರಾಜ್ಯ ಸರ್ಕಾರ ಬರೆದ ಪತ್ರಕ್ಕೆ ಗೋವಾ ನೀರಾವರಿ ಸಚಿವರ ಉತ್ತರ ಉದ್ಧಟತನದಿಂದ ಕೂಡಿದೆ. ಇದು ಅವರ ರೈತಪರ ಕಾಳಜಿಯನ್ನು ತೋರಿಸುತ್ತದೆ. ಬಿಜೆಪಿ ನಾಯಕರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮನವೊಲಿಸಿ ಮಹದಾಯಿ ವಿಷಯವನ್ನು ಮಾತುಕತೆ ಮೂಲಕ ಪರಿಹರಿಸಲು ಅವಕಾಶವಿದೆ. ಈ ಅವಕಾಶವನ್ನು ಅವರು ಸದುಪಯೋಗಪಡಿಸಿಕೊಳ್ಳಬೇಕು," ಎಂದು ಸಲಹೆ ನೀಡಿದರು.
ಅಲ್ಲದೆ ದೇವೆಗೌಡರ ಕುಟುಂಬದಲ್ಲಿ ರೇವಣ್ಣ ನಾನು ಹೊರತುಪಡಿಸಿ ಯಾರೂ ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದರು.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications