ನವೆಂಬರ್ಗೆ ಹುಬ್ಬಳ್ಳಿ- ಚಿತ್ರದುರ್ಗ ಷಟ್ಪಥ ರಸ್ತೆ ಕಾಮಗಾರಿ ಆರಂಭ
ದಾವಣಗೆರೆ, ಜುಲೈ 14 : ಹುಬ್ಬಳ್ಳಿ- ಚಿತ್ರದುರ್ಗ ನಡುವಿನ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ-4 ಇನ್ಮುಂದೆ ಷಟ್ಪಥವಾಗಲಿದೆ.
ಎಲ್ಲವೂ ಅಂದುಕೊಂಡಂತೆ ಆದರೆ ನವೆಂಬರ್ ವೇಳಗೆ ಕಾಮಗಾರಿ ಆರಂಭವಾಗಲಿದೆ ಎಂದು ಗುರುವಾರ ದಾವಣಗೆರೆಯಲ್ಲಿ ಸಂಸದ ಜಿ.ಎಂ.ಸಿದ್ಧೇಶ ಅವರ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಸಭೆಯಲ್ಲಿ ಅವರು ತಿಳಿಸಿದರು.
210 ಕಿ.ಮೀ ಉದ್ದದ ಹೆದ್ದಾರಿ ಮೇಲ್ದರ್ಜೆ ಕಾಮಗಾರಿಯನ್ನು ಚಿತ್ರದುರ್ಗ-ದಾವಣಗೆರೆ, ದಾವಣಗೆರೆ-ಹಾವೇರಿ ಹಾಗೂ ಹಾವೇರಿ-ಹುಬ್ಬಳ್ಳಿ ಎಂದು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಿಭಾಗಕ್ಕೂ ತಲಾ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ನಿಗದಿಪಡಿಸಲಾಗಿದೆ.

ಕಾಮಗಾರಿಯ ಗುತ್ತಿಗೆ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಬಾಕಿ ಇರುವ ಭೂ ಸ್ವಾಧೀನ ಪ್ರಕ್ರಿಯೆಗೆ ಶೀಘ್ರದಲ್ಲಿಯೇ ಚಾಲನೆ ಸಿಗುವ ಸಾಧ್ಯತೆ ಇದೆ.
ಸಮಸ್ಯೆಗಳನ್ನು ನಿವಾರಿಸಿ
ಹೆದ್ದಾರಿ ಮಾರ್ಗದಲ್ಲಿ ವಿದ್ಯುತ್ ಟವರ್, ಕುಡಿಯುವ ನೀರಿನ ಪೈಪ್ಲೈನ್ ಸ್ಥಳಾಂತರ ಕೆಲಸಗಳನ್ನು ಬೇಗ ಮುಗಿಸಬೇಕಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ವಿಳಂಬ ಮಾಡದೇ ಪ್ರಾಧಿಕಾರದೊಂದಿಗೆ ಸಹಕರಿಸಬೇಕು ಎಂದು ಸಂಸದ ಸಿದ್ಧೇಶ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈಗಿರುವ ಸಮಸ್ಯೆಗಳನ್ನು ನೀಗಿಸಿ ಅಗತ್ಯವಿರುವ ಕಡೆಗಳಲ್ಲಿ ಮೇಲ್ಸೇತುವೆ ಮತ್ತು ಪಾಸಿಂಗ್ ಅಂಡರ್ಬ್ರಿಜ್ ಜತೆಗೆ ಸರ್ವಿಸ್ ರಸ್ತೆಗಳಲ್ಲಿರುವ ಸಮಸ್ಯೆಗಳನ್ನು ಗುರುತಿಸಬೇಕು ಮತ್ತು ಅವುಗಳನ್ನು ಪರಿಹರಿಸಬೇಕು. ಹೆದ್ದಾರಿ ಬದಿಯಲ್ಲಿರುವ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿ ಕೈಗೊಳ್ಳಬೇಕು ಎಂದು ಹೇಳಿದರು.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications