ಹುಬ್ಬಳ್ಳಿಯ ಕಟುಗರ ಓಣಿಯಲ್ಲಿ 2 ಚೀಲದಲ್ಲಿ ಮನುಷ್ಯರ ತಲೆಬುರುಡೆ ಪತ್ತೆ
ಹುಬ್ಬಳ್ಳಿಯ ಇಸ್ಲಾಂಪುರದ ಕಟುಗರ ಓಣಿಯಲ್ಲಿ ಬುಧವಾರ ಎರಡು ಗೋಣಿಚೀಲದಲ್ಲಿ ಮನುಷ್ಯರ ತಲೆಬುರುಡೆ, ಎಲುಬುಗಳು ಕಂಡುಬಂದವು. ಗಾಬರಿಯಾದ ಸ್ಥಳೀಯರು ಕಸಬಾ ಪೇಟೆ ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಈಗ ತನಿಖೆ ಪ್ರಗತಿಯಲ್ಲಿದೆ
ಹುಬ್ಬಳ್ಳಿ, ಏಪ್ರಿಲ್ 13: ಇಲ್ಲಿನ ಇಸ್ಲಾಂಪುರದ ಕಟುಗರ ಓಣಿಯಲ್ಲಿ ಮನುಷ್ಯರ ತಲೆ ಬುರುಡೆ ಹಾಗೂ ಎಲುಬುಗಳು ತುಂಬಿದ್ದ ಎರಡು ಚೀಲಗಳು ಬುಧವಾರ ಪತ್ತೆಯಾಗಿವೆ. ಈ ಓಣಿಯಲ್ಲಿ ಜಾನುವಾರುಗಳ ಎಲುಬು-ತಲೆ ಬುರುಡೆ ಕಾಣಿಸಿಕೊಳ್ಳುವುದು ಸಾಮಾನ್ಯ. ಆದರೆ ಮನುಷ್ಯರ ತಲೆಬುರುಡೆ-ಎಲುಬುಗಳು ಸಿಕ್ಕಿರುವುದರಿಂದ ಸ್ಥಳೀಯರು ಆತಂಕಕ್ಕೆ ಈಡಾಗಿದ್ದಾರೆ.
ಕಸಬಾ ಪೇಟೆ ಪೊಲೀಸ್ ಠಾಣೆಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ತಲೆಬುರುಡೆ-ಎಲುಬುಗಳು ಇದ್ದ ಚೀಲಗಳನ್ನು ಪರಿಶೀಲಿಸಿ, ವಶಕ್ಕೆ ಪಡೆದರು. ವಾಮಾಚಾರಕ್ಕೆ ಬೇಕಾಗುವ ತಲೆಬುರುಡೆ-ಎಲುಬುಗಳನ್ನು ಸ್ಮಶಾನದಿಂದ ತಂದು ಇಲ್ಲಿ ಮಾರಲು ಯತ್ನಿಸಿರಬಹುದು ಎಂಬ ಅನುಮಾನವನ್ನು ಕೂಡ ಜನರು ವ್ಯಕ್ತಪಡಿಸಿದರು.[ಬೆಳ್ಳಂಬೆಳಗ್ಗೆ ವಧು ನಾಪತ್ತೆ, ಅನಿವಾರ್ಯ ಕಾರಣದಿಂದ ಮದುವೆ ಮುಂದಕ್ಕೆ]

ಇನ್ನು ಎಲುಬು ಹಾಗೂ ತಲೆ ಬುರುಡೆಗಳನ್ನು ಚೀಲಗಳಲ್ಲಿ ಸಂಗ್ರಹಿಸಿ, ಹಣಕ್ಕಾಗಿ ಕಟುಗರ ಓಣಿಯಲ್ಲಿ ಮಾರಾಟ ಮಾಡಲು ಸಹ ತಂದಿರಬಹುದು. ಈ ಬಗ್ಗೆ ಸಮಗ್ರವಾದ ತನಿಖೆ ನಡೆಸಿ, ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಎಲು-ತಲೆಬುರುಡೆ ತಂದವರು ಯಾರು, ಯಾಕೆ ತಂದರು ಎಂಬುದನ್ನು ಕಂಡುಹಿಡಿಯಬೇಕು ಎಂದು ಆಗ್ರಹಿಸಲಾಗಿದೆ. ಕಸಬಾ ಪೇಟೆ ಪೊಲೀಸರು ಈ ಬಗ್ಗೆ ತನಿಖೆ ನಡೆಸಿದ್ದು, ಕೂಲಂಕಷವಾಗಿ ಮಾಹಿತಿ ಸಂಗ್ರಹಿಸಿದ್ದಾರೆ.
-
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications