ಭಾಸ್ಕರರಾವ್ ವಿರುದ್ಧ ಚಾರ್ಜ್ಶೀಟ್, ಸ್ವಾಗತಿಸಿದ ಎಸ್.ಆರ್.ಹಿರೇಮಠ
ಹುಬ್ಬಳ್ಳಿ, ಆಗಸ್ಟ್ 06 : ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದಲ್ಲಿ ನ್ಯಾ.ಭಾಸ್ಕರರಾವ್ ಅವರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಿರುವುದನ್ನು ಎಸ್.ಆರ್.ಹಿರೇಮಠ ಸ್ವಾಗತಿಸಿದ್ದಾರೆ. ಅವರಿಗೆ ಸೂಕ್ತ ಶಿಕ್ಷೆಯಾಗುವವರೆಗೂ ಬಿಡಬಾರದು ಎಂದು ಅವರು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ ಅವರು, 'ಕರ್ನಾಟಕ ಲೋಕಾಯುಕ್ತಕ್ಕೆ ದಕ್ಷ ಹಾಗೂ ಪ್ರಾಮಾಣಿಕ ನ್ಯಾಯಮೂರ್ತಿ ವಿಕ್ರಮ್ ಜೀತ್ ಸೇನ್ ಅವರನ್ನು ನೇಮಿಸಬೇಕು' ಎಂದು ಆಗ್ರಹಿಸಿದರು.[ಲೋಕಾಯುಕ್ತದಲ್ಲಿ ಭ್ರಷ್ಟಾಚಾರ, ನಾಲ್ವರಿಗೆ ಜಾಮೀನು]

'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವ ಪ್ರತಿಷ್ಠೆಗಾಗಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆ ಮಾಡಿದ್ದಾರೆ. ಕರ್ನಾಟಕ ಹೈಕೋರ್ಟ್ ಕೂಡ ಎಸಿಬಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದೆ. ಸರ್ಕಾರ ಲೋಕಾಯುಕ್ತವನ್ನು ಬಲಪಡಿಸಲು ಗಮನಹರಿಸಬೇಕು' ಎಂದು ಒತ್ತಾಯಿಸಿದರು.[ಲೋಕಾಯುಕ್ತದಲ್ಲಿ ಭ್ರಷ್ಟಾಚಾರ, ಭಾಸ್ಕರರಾವ್ 7ನೇ ಆರೋಪಿ]
ಶಿಕ್ಷೆಯಾಗಬೇಕು : ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ನ್ಯಾ.ಭಾಸ್ಕರರಾವ್ ಅವರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಿರುವುದನ್ನು ಸ್ವಾಗತಿಸಿದ ಹಿರೇಮಠ ಅವರು, ಅವರಿಗೆ ಶಿಕ್ಷೆಯಾಗಬೇಕು ಎಂದರು.
ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ನ್ಯಾ.ಭಾಸ್ಕರರಾವ್ ಅವರ ವಿರುದ್ಧ 560 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಕರ್ನಾಟಕದ ಲೋಕಾಯುಕ್ತರಾಗಿದ್ದ ಭಾಸ್ಕರರಾವ್ ಅವರು ಈ ಪ್ರಕರಣದಲ್ಲಿ 7ನೇ ಆರೋಪಿಯಾಗಿದ್ದಾರೆ.
ಸೈಯದ್ ರಿಯಾಜ್ ನೇಮಕಕ್ಕೆ ಸಿದ್ಧತೆ : 'ಲೋಕಾಯುಕ್ತ ಸಂಸ್ಥೆಯಲ್ಲಿ ಸಾರ್ವಜನಿಕರ ಸಂಪರ್ಕ ಹುದ್ದೆ ನಿರ್ವಹಿಸಿದ್ದ ಸೈಯದ್ ರಿಯಾಜ್ ಅವರನ್ನು ರಾಜ್ಯ ಸರ್ಕಾರ ಡಿಐಜಿ ಹುದ್ದೆಗೆ ನೇಮಿಸಲು ತೆರೆಮರೆಯಲ್ಲಿ ಸಿದ್ಧತೆ ನಡೆಸಿದೆ. ಅವರ ಮೇಲೆ ಈಗಾಗಲೇ ಕಾನೂನು ಬಾಹಿರ ಚಟುವಟಿಕೆ ಮಾಡಿರುವ ಆರೋಪವಿದೆ ಅವರನ್ನು ಜೈಲಿಗೆ ಕಳಿಸಬೇಕು' ಎಂದು ಹಿರೇಮಠ ಒತ್ತಾಯಿಸಿದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications