Dharwad: ದಿಂಗಾಲೇಶ್ವರ ಸ್ವಾಮೀಜಿ ಚುನಾವಣೆ ಸ್ಪರ್ಧೆ ಏ.2ರಂದು ತೀರ್ಮಾನ
ಹುಬ್ಬಳ್ಳಿ, ಮಾರ್ಚ್ 27: ಉತ್ತರ ಪ್ರದೇಶದ ಮಾದರಿಯಂತೆ ಧಾರವಾಡ ಕ್ಷೇತ್ರದಿಂದ ಶ್ರೀ ಶಿರಹಟ್ಟಿ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಲೋಕಸಭಾ ಚುನಾವಣೆ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ. ಈ ಕುರಿತು ಬುಧವಾರ ಮೂರು ಸಾವಿರ ಮಠದಲ್ಲಿ ವಿವಿಧ 80 ಕ್ಕೂ ಹೆಚ್ಚು ಮಠಾಧೀಶರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆದಿದೆ.
ಸಭೆಯಲ್ಲಿ ಧಾರವಾಡದಲ್ಲಿ ಲಿಂಗಾಯತರ ಮತ ವಿಭಜನೆ, ಧಾರ್ಮಿಕವಾಗಿ ವೀರಶೈವ ಲಿಂಗಾಯತರ ಅವನತಿ ಆಗುತ್ತಿದೆ ಎಂಬ ಹಲವು ವಿಚಾರ ಕುರಿತು ಶ್ರೀಗಳು ಚರ್ಚಿಸಿದರು. ಈ ವೇಳೆ ಧಾರವಾಡದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬದಲಾವಣೆ ಮಾಡಬೇಕು ಎಂದು ಒಕ್ಕೋರಲಿನಿಂದ ಆಗ್ರಹಿಸಲಾಯಿತು.

ಮಾರ್ಚ್ 31ರೊಳಗೆ ಧಾರವಾಡ ಅಭ್ಯರ್ಥಿಯನ್ನು ಬದಲಾವಣೆ ಮಾಡಬೇಕು. ಈ ಬಗ್ಗೆ ಬಿಜೆಪಿ ಮನವಿ ಮಾಡಲಾಗುವುದು. ಒಂದು ವೇಳೆ ಮಾಡದಿದ್ದರೆ, ಏಪ್ರಿಲ್ 2ರಂದು ದಿಂಗಾಲೇಶ್ವರ ಶ್ರೀಗಳ ಕಣಕ್ಕಿಳಿಸುವ ಕುರಿತು ನಿರ್ಧರಿಸಲಾಗುವುದು ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.
ಮಠಾಧೀಶರಿಂದ ಸಲಹೆ
ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಕಣಕ್ಕೆ ಇಳಿಸಬೇಕೋ ಬೇಡವೋ ಎಂಬುದರ ಬಗ್ಗೆ ಮಠಾಧೀಶರಿಂದ ಸಲಹೆ ಪಡೆಯಲಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿ ವಿರುದ್ಧ ಕಣಕ್ಕೆ ಇಳಿಸುವುದು, ಲಿಂಗಾಯತ ಮತ ವಿಭಜನೆಯಿಂದ ಆಗುವ ಹಾನಿ ಲಾಭ ಕುರಿತು ಮಠಾಧೀಶರು ಚರ್ಚೆ ನಡೆಸಿದ್ದಾರೆ.

ಮೂಜಗು ಸ್ವಾಮೀಜಿ ಪ್ರತಿಕ್ರಿಯೆ
ಇದೇ ವೇಳೆ ಮೂರು ಸಾವಿರ ಮಠದ ಮೂಜಗು ಸ್ವಾಮೀಜಿ ಅವರು ಮಾತನಾಡಿ, ದಿಂಗಾಕೇಶ್ವರ ಸ್ವಾಮೀಜಿ ಧಾರ್ಮಿಕ ಕಾರ್ಯ ಮಾಡಬೇಕು ಅನ್ನೋ ನಿರ್ಣಯ ತೆಗೆದುಕೊಳ್ಳಲಾಗಿದೆ. ಮಠಗಳು ರಾಜಕೀಯದಿಂದ ಅಂತರ ಕಾಯ್ದುಕೊಂಡಿವೆ.
ನಾವು ಯಾವ ಪಕ್ಷದ ಜೊತೆಗೂ ಗುರುತಿಸಿಕೊಂಡಿಲ್ಲ ಎಂದರು.
ಎಲ್ಲ ರಾಜಕೀಯ ಪಕ್ಷದವರು ಮಠಗಳಿಗೆ ಬರುತ್ತಾರೆ. ಮಠದೊಂದಿಗೆ ಎಲ್ಲಾ ಪಕ್ಷಗಳು ಉತ್ತಮ ಸಂಬಂಧ ಹೊಂದಿವೆ. ರಾಜಕೀಯ ಪಕ್ಷಗಳು ಜವಾಬ್ದಾರಿ ಮರೆತಾಗ ಎಚ್ಚರಿಸುವ ಕೆಲಸ ಮಠಗಳು ಮಾಡಿವೆ. ವೀರಶೈವ ಲಿಂಗಾಯತ ಸಮಾಜಕ್ಕೆ ನ್ಯಾಯ ಒದಗಿಸಲು ರಾಜಕೀಯ ಪಕ್ಷಗಳು ಹಿಂದೆ ಬಿದ್ದಿವೆ ಎಂಬ ವಿಚಾರ ಚರ್ಚೆಗೆ ಬಂದಿವೆ. ಇದೆಲ್ಲ ಕಾರಣದಿಂದ ಉತ್ತರ ಪ್ರದೇಶ ಮಾದರಿಯಲ್ಲಿ ಮಠಾಧೀಶರಲ್ಲಿ ಒಬ್ಬರು ಕಣಕ್ಕಿಳಿಯಲು ನಿರ್ಧರಿಸಲಾಗಿದೆ ಎಂದರು.
ಕೇಂದ್ರ ಸಚಿವರ ವಿರುದ್ಧ ಶ್ರೀಗಳು ಅಸಮಾಧಾನ
ಇದೇ ವೇಳೆ ಮಾತನಾಡಿದ ಶ್ರೀ ದಿಂಗಾಲೇಶ್ವರ ಸ್ವಾಮೀಜಿಯವರು, ಮಾಜಿ ಮುಖ್ಯಮಂತ್ರಿಗಳಿಗೆ ಟಿಕೆಟ್ ಬೇರೆ ಕಡೆ ಕೊಟ್ಟಂತೆ, ಕೇಂದ್ರ ಸಚಿವರಿಗೂ ಕ್ಷೇತ್ರ ಬದಲಾವಣೆ ಮಾಡಿ. ಅವರು ಲಿಂಗಾಯತರಿಗೆ, ಮಠಾಧೀಶರಿಗೆ ಅಗೌರವ ತೋರಿದ್ದಾರೆ. ಅವರಿಗೆ ಹಣ, ಅಧಿಕಾರ ಮದ ಏರಿಕೆ ಎಂದು ಆರೋಪಿಸಿದರು.
ಮುಂದಿನ ವಾರ ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆ ಕುರಿತು ಅಧಿಕೃತ ಮಾಹಿತಿ ಹೊರ ಬೀಳುವ ನಿರೀಕ್ಷೆಗಳು ಇವೆ. ಈ ಮಠಾಧೀಶರ ಚಿಂಥನ ಮಂಥನ ಸಭೆಗೆ ಉತ್ತರ ಕನ್ನಡ, ಹಾವೇರಿ, ಚಿತ್ರದುರ್ಗ,ಮುರುಘಾಮಠ,ಬಾಲ್ಕಿ, ಬೀದರ್, ರಾಯಚೂರು, ಬಾಗಲಕೋಟೆ, ವಿಜಯಪುರ ಸೇರಿದಂತೆ ಅನೇಕ ಮಠಗಳ ಮಠಾಧೀಶರು ಪಾಲ್ಗೊಂಡಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications