ಹುಬ್ಬಳ್ಳಿ: ಹೊಸ ವರ್ಷಾಚರಣೆಗೆ ವಿರೋಧ: ಹೋಟೆಲ್ಗಳಿಗೆ ಶ್ರೀರಾಮಸೇನೆ ಎಚ್ಚರಿಕೆ
ಹುಬ್ಬಳ್ಳಿ, ಡಿಸೆಂಬರ್ 30: ಹೊಸ ವರ್ಷದ ಸಂಭ್ರಮಾಚರಣೆಗೆ ಕೌಂಟ್ಡೌನ್ ಶುರುವಾಗಿದೆ. ಡಿಸೆಂಬರ್-31 ಕ್ಯಾಲೆಂಡರ್ ಹೊಸ ಆಚರಣೆಗೆ ಅವಕಾಶ ನೀಡದಂತೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ವಿನೂತನ ಹೋರಾಟಕ್ಕೆ ಮುಂದಾಗಿದೆ. ಡಿ. 31ರಂದು ನ್ಯೂ ಇಯರ್ ಆಚರಣೆ ಮಾಡಿದರೇ ಹೋಟೆಲ್ ಮುಂದೆ ಪ್ರತಿಭಟನೆ ಮಾಡುತ್ತೇವೆ ಎಂದು ಹೋಟೆಲ್ ಗಳಿಗೆ ಎಚ್ಚರಿಕೆ ನೀಡಿದೆ.
ಹಿಂದೂ ಸಂಘಟನೆಯಿಂದ ಕ್ಯಾಲೆಂಡರ್ ಹೊಸ ವರ್ಷಾಚರಣೆ ಭಾರೀ ವಿರೋಧ ವ್ಯಕ್ತವಾಗಿದೆ. ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಮುಖಂಡ ಅಣ್ಣಪ್ಪ ದಿವಟೆ ನೇತೃತ್ವದಲ್ಲಿ ಅಭಿಯಾನ ಆರಂಭಿಸಿದ್ದಾರೆ. ಹೌದು. ಕುಡಿದು ಕುಪ್ಪಳಸಿ, ಡ್ರಗ್ಸ್, ರೇಪ್, ಅಶ್ಲೀಲವಾಗಿ ಆಚರಣೆ ಮಾಡುವವರ ವಿರುದ್ಧ ಉಗ್ರ ಹೋರಾಟಕ್ಕೆ ಮುಂದಾಗಿದ್ದು, ಶ್ರೀ ರಾಮ ಸೇನೆ ಕಾರ್ಯಕರ್ತರಿಂದ ಹೊಟೇಲ್ ಗಳಿಗೆ ಭೇಟಿ ಮಾಲೀಕರಿಗೆ ಮನವಿ ಮಾಡಿಕೊಂಡಿದ್ದಾರೆ.

ಬಹುತೇಕ ಜನ 2025 ನ್ನು ಬರ ಮಾಡಿಕೊಳ್ಳಲು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಡಿಸೆಂಬರ್ 31 ರಂದು ದೇಶದ ಹಲವು ಭಾಗಗಳಲ್ಲಿ ಸಂಭ್ರಮ ಮನೆ ಮಾಡಿರುತ್ತಿದೆ. ಇದಕ್ಕಾಗಿ ಬೀಚ್ ಬದಿಗಳಲ್ಲಿ, ಹೋಟೆಲ್, ಬಾರ್ಗಳಲ್ಲಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗುತ್ತದೆ. ಪಾರ್ಟಿ ಮೋಜು ಮಸ್ತಿಗಳಲ್ಲಿ ತೇಲಲಿದ್ದಾರೆ.
ಆದರೇ ಇದೀಗ ಹೊಸ ವರ್ಷ ಸೆಲೆಬ್ರೇಟ್ ಮಾಡುವವರಿಗೆ ಶ್ರೀರಾಮಸೇನೆ ಖಡಕ್ ಎಚ್ಚರಿಕೆ ಕೊಡುತ್ತಿದೆ. ಹುಬ್ಬಳ್ಳಿಯ ಶ್ರೀನಗರ ಕ್ರಾಸ್ ಬಳಿ ಸೇರಿದಂತೆ ವಿವಿಧ ಹೊಟೇಲ್ ಗಳಿಗೆ ಭೇಟಿ ನೀಡಿ ಹೊಸ ವರ್ಷದ ಆಚರಣೆ ಹೆಸರಲ್ಲಿ ಮೋಜು ಮಸ್ತಿಗೆ ಅವಕಾಶ ಕೊಡದಂತೆ ಎಚ್ಚರಿಕೆ ನೀಡಲಾಗಿದೆ.
ಹಿಂದು ಸಂಪ್ರದಾಯ ಸಂಸ್ಕೃತಿ, ಧರ್ಮದ ಪ್ರಕಾರ, ವೈಜ್ಞಾನಿಕ ಹಾಗೂ ಪಂಚಾಂಗದ ಪ್ರಕಾರ ಯುಗಾದಿ ಹೊಸ ವರ್ಷ. ಬ್ರಿಟಿಷರು, ಕ್ರಿಶ್ಚಿಯನ್ಸ್ ಹಾಕಿದ ಈ ಪರಂಪರೆ ಜನವರಿ 1 ಹೊಸ ವರ್ಷ ಅನ್ನೋದು ಅವೈಜ್ಞಾನಿಕ. ನಮಗೆ ಯುಗಾದಿ ಹೊಸ ವರ್ಷ ಎಂದು ಶ್ರೀರಾಮ್ ಸೇನೆಯ ಮುಖಂಡರು ಪ್ರತಿಪಾದಿಸಿದ್ದಾರೆ.
ಆದ್ದರಿಂದ ಈ ರೀತಿಯ ಪಾರ್ಟಿಗಳನ್ನು ತಕ್ಷಣ ನಿಲ್ಲಿಸಬೇಕು ಎಂದು ಎಲ್ಲಾ ಹೊಟೇಲ್ ಗಳಿಗೆ ತೆರಳಿ ಮನವಿ ಕೊಟ್ಟಿರುವ ಪ್ರಮುಖರು, ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿಯೂ ಒಂದು ವಾರ ರಾಜ್ಯದಲ್ಲಿ ಶೋಕಾಚರಣೆ ಇದೆ.
ಈ ಸಂದರ್ಭದಲ್ಲಿ ಕುಣಿದು ಕುಪ್ಪಳಿಸುವುದು ಬೇಡಾ. ರಾಜ್ಯ ಸರ್ಕಾರ ಕೂಡಲೇ ಹೊಸ ವರ್ಷಾಚರಣೆ ಆದೇಶ ವಾಪಾಸ್ ಪಡೆಯಲಿ ಎಂದು ಶ್ರೀರಾಮಸೇನಾ ಆಗ್ರಹಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications