Love Jihad: ಹಿಂದೂ ಯುವತಿಯರ ರಕ್ಷಣೆಗೆ ಸಹಾಯವಾಣಿ ಆರಂಭಿಸಿದ ಶ್ರೀರಾಮ್ ಸೇನೆ: ಮುತಾಲಿಕ್ ಕರೆ ಏನು?
ಬೆಂಗಳೂರು, ಮೇ 29: ಕರ್ನಾಟಕ ಸೇರಿದಂತೆ ದೇಶದಲ್ಲಿ ಹಿಂದೂ ಯುವತಿಯರು ಮತ್ತು ಮಹಿಳೆಯರನ್ನು ಯೋಜನಾಬದ್ಧವಾಗಿ ಇಸ್ಲಾಂನ ಕುತಂತ್ರದಿಂದ ಪ್ರೀತಿ-ಪ್ರೇಮದ ಹೆಸರಿನಲ್ಲಿ ಅತ್ಯಾಚಾರ, ಮತಾಂತರ ಮಾಡುವುದು ನಡೆಯುತ್ತಿದೆ. ಇದರ ವಿರುದ್ಧ ಹಿಂದೂ ಯುವತಿಯರ ರಕ್ಷಣೆಗಾಗಿ ಇಂದಿನಿಂದ ಸಹಾಯವಾಣಿ ಆರಂಭಿಸಿದ್ದೇವೆ ಎಂದು ಶ್ರೀರಾಮ್ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾಹಿತಿ ನೀಡಿದರು.
ಹುಬ್ಬಳ್ಳಿಯಲ್ಲಿ ಬುಧವಾರ ಖಾಸಗಿ ಹೊಟೇಲ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು 24x7 ಸಹಾಯವಾಣಿಗೆ (9090443444) ಚಾಲನೆ ನೀಡಿ ನಂತರ ಮಾತನಾಡಿದರು. ಲವ್ ಜಿಹಾದ್ದಿಂದ ಹಿಂದೂ ಯುವತಿಯರ ರಕ್ಷಣೆ ಮಾಡಲು ಶ್ರೀರಾಮ ಸೇನಾ ವತಿಯಿಂದ ಸಹಾಯವಾಣಿ ಆರಂಭಿಸಲಾಗಿದೆ ಎಂದರು.

ಈ ಸಹಾಯವಾಣಿಯನ್ನು ಹುಬ್ಬಳ್ಳಿಯಲ್ಲಿರುವ ನಮ್ಮ ಸೇನಾದ ಕೇಂದ್ರ ಕಚೇರಿಯಿಂದ ನಿರ್ವಹಣೆ ಮಾಡಲಾಗುವುದು. ಇದರಲ್ಲಿ ವಕೀಲರು, ಮಹಿಳಾ ಆಪ್ತಸಮಾಲೋಚಕರು ಸೇರಿ ಐವರ ತಂಡ ಕಾರ್ಯನಿರ್ವಹಿಸಲಿದ್ದಾರೆ. ಹಿಂದೂ ಯುವತಿಯರು ಮತ್ತು ಮಹಿಳೆಯರು ಸಹಾಯವಾಣಿ ಸಂಖ್ಯೆಗೆ (9090443444) ಕರೆ ಮಾಡಿದರೆ ದಿನದ 24 ಗಂಟೆಯೂ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು ಎಂದು ಹೇಳಿದರು.
ಆತ್ಮಹತ್ಯೆ ಮಾಡಿಕೊಳ್ಳದಂತೆ ಮುತಾಲಿಕ್ ಕರೆ
ಸಹಾಯವಾಣಿಗೆ ಕರೆ ಮಾಡಿದ ಮಹಿಳೆಯರು, ಯುವತಿಯರಿಗೆ ಆಪ್ತ ಸಮಾಲೋಚನೆ ಮೂಲಕ ಧೈರ್ಯ ತುಂಬಲಾಗುವುದು. ಹಿಂದೂ ಮಹಿಳೆಯರು ಯಾವುದೇ ಕಾರಣಕ್ಕೂ ಆತ್ಮಹತ್ಯೆಗೆ ಶರಣಾಗಬಾರದು ಎಂದು ಅವರು ಕರೆ ನೀಡಿದರು. ಇಸ್ಲಾಂನ ಕುತಂತ್ರದಿಂದ ಪ್ರೀತಿ-ಪ್ರೇಮದ ಹೆಸರಿನಲ್ಲಿ ಅತ್ಯಾಚಾರ, ಮತಾಂತರ ಮಾಡುವುದು ನಡೆಯುತ್ತಿದೆ.

ಇತಿಹಾಸದ ಕಾಲದಿಂದಲೂ ಇಸ್ಲಾಂನ ಕ್ರೌರ್ಯ ನಿರಂತರವಾಗಿ ನಡೆಯುತ್ತಲಿದೆ. ಇಂತಹ ಕ್ರೂರಿಗಳಿಗೆ ತಕ್ಕ ಉತ್ತರ ಕೊಡಲು ಹಿಂದೂ ಯುವತಿಯರು ಮತ್ತು ಮಹಿಳೆಯರಿಗೆ ಶ್ರೀರಾಮ ಸೇನಾದಿಂದ ಅಗತ್ಯ ತರಬೇತಿ ನೀಡಲಾಗುವುದು.
ಆಡಳಿತದಲ್ಲಿರುವ ರಾಜಕಾರಣಿ, ವಿಪಕ್ಷ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುವ ಬದಲು ಇಂತಹ ಘಟನೆಗಳು ನಡೆದಾಗ ಪರಿಹಾರ ಹುಡುಕುವ ಕೆಲಸ ಮಾಡಬೇಕು. ಕಾನೂನು ಪ್ರಕ್ರಿಯೆ ಬಿಗಿಗೊಳಿಸಬೇಕು. ಕಾನೂನಿನಲ್ಲಿರುವ ಲೋಪದೋಷಗಳನ್ನು ಸರಿಪಡಿಸಿ ಹಿಂದೂ ಹೆಣ್ಣುಮಕ್ಕಳಿಗೆ ಆಗುವ ಅನ್ಯಾಯ ಸರಿಪಡಿಸಬೇಕು ಎಂದು ಅವರು ಆಗ್ರಹಿಸಿದರು.
ಅಂಜಲಿ-ನೇಹಾ ಹಂತಕರಿಗೆ ನಾವೇ ಶಿಕ್ಷೆ ಕೊಡುತ್ತೇವೆ!
ಹುಬ್ಬಳ್ಳಿಯಲ್ಲಿ ಪ್ರೀತಿ ವಿಷಯವಾಗೇ ನಡೆದ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಕೊಲೆ ಪ್ರಕರಣಗಳಲ್ಲಿ ಆರೋಪಗಳನ್ನು ಸಾಕ್ಷ್ಯ ಸಿಗಲಿಲ್ಲವೆಂದು ಬಿಡುಗಡೆ ಮಾಡಿದರೆ ಇಬ್ಬರಿಗೂ ನಾವೇ ತಕ್ಕ ಶಿಕ್ಷೆ ವಿಧಿಸುತ್ತೇವೆ ಎಂದು ಅವರು ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆಗೆ ಎಚ್ಚರಿಕೆ ಕೊಟ್ಟರು.
ಇಸ್ಲಾಂನಲ್ಲಿ ಮಹಿಳೆಯರಿಗೆ ಗೌರವ, ರಕ್ಷಣೆ ಇಲ್ಲ. ಹಿಂದೂ ಯುವತಿಯರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಮುಸ್ಲಿಂರು ಹಿಂದೂ ಯುವತಿಯರಿಗೆ ತೊಂದರೆ ಕೊಟ್ಟರೆ ನಾವು ನ್ಯಾಯಾಯಲದ ಮೊರೆ ಹೋಗುವುದಿಲ್ಲ. ಬದಲಾಗಿ ನಾವೇ ತಕ್ಕ ಉತ್ತರ ಕೊಡುತ್ತೇವೆ ಎಂದು ಅವರು ಗುಡುಗಿದರು.
ಪಾಲಕರಿಗೆ ಮುತಾಲಿಕ್ ಕಿವಿ ಮಾತು
ಹಿಂದೂ ಯುವತಿಯರ ಪಾಲಕರು ಸಹಿತ ಮಕ್ಕಳ ಮೇಲೆ ನಿಗಾ ವಹಿಸಬೇಕು. ಅವರನ್ನು ಹದ್ದು ಬಸ್ತಿನಲ್ಲಿಡಬೇಕು. ಅವರ ಕಾಲೇಜ್ಗೆ ಭೇಟಿ ಕೊಟ್ಟು ಪರಿಶೀಲಿಸಬೇಕು. ಪಶ್ಚಾತ್ತಾಪ ಪಡುವ ಬದಲು ಮೊದಲೇ ಮಕ್ಕಳ ಭವಿಷ್ಯಕ್ಕಾಗಿ ಎಚ್ಚೆತ್ತುಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
2500 ಮುಸ್ಲಿಂ ಯುವತಿಯರಿಗೆ ಮದುವೆ
ಸರ್ಕಾರ, ಪೊಲೀಸ್ ಇಲಾಖೆ ವಿಫಲ ಆಗಿರುವುದರಿಂದ ನಾವು ಸಹಾಯವಾಣಿ ಆರಂಭಿಸಬೇಕಾಯಿತು. ನೈತಿಕವಾಗಿ ನಾವು ಈ ಜವಾಬ್ದಾರಿ ತೆಗೆಕೊಂಡಿದ್ದೇವೆ. ನಾವು 2500 ಮುಸ್ಲಿಂ ಯುವತಿಯರನ್ನು ಹಿಂದೂ ಯುವಕರೊಂದಿಗೆ ಮದುವೆ ಮಾಡಿಸಿದ್ದೇವೆ. ಅವರಿಗೆ ರಕ್ಷಣೆ ಒದಗಿಸಿ ಉದ್ಯೋಗ ಸಹ ನೀಡಲಾಗಿದೆ. ಆದರೆ ಮುಸ್ಲಿಂ ರ ಉದ್ದೇಶವೇ ಬೇರೆ ನಮ್ಮ ಉದ್ದೇಶ ಬೇರೆ ಎಂದು ಅವರು ಸ್ಪಷ್ಟಪಡಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications