ಹುಬ್ಬಳ್ಳಿಯಲ್ಲಿ ಕೊಲೆಯಾದ ಅಂಜಲಿ ಕುಟುಂಬಕ್ಕೆ ನೆರವು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಹುಬ್ಬಳ್ಳಿ, ಅಕ್ಟೋಬರ್ 26: ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಮನೆಗೆ ನುಗ್ಗಿ ಹತ್ಯೆ ಮಾಡಿದ ಪ್ರಕರಣ ಸಂಪೂರ್ಣ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈ ಹಿಂದೆ ಅಂಜಲಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ಮಾಡುತ್ತೇವೆ ಎಂದು ಒಪ್ಪಲಾಗಿತ್ತು. ಅದರಂತೆ ಈಗ ಕೊಟ್ಟ ಮಾತಿನಂತೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಜಲಿ ಕುಟುಂಬಕ್ಕೆ 5 ಲಕ್ಷ ರೂಪಾಯಿ ಚೆಕ್ ನೀಡಿದರು.
ಮೇ 15 ರಂದು ಹುಬ್ಬಳ್ಳಿಯ ವೀರಾಪುರ ಓಣಿಯ ನಿವಾಸಿ ಅಂಜಲಿ ಎಂಬ ಯುವತಿಯನ್ನು ವಿಶ್ವ ಅಲಿಯಾಸ ಗಿರೀಶ್ ಎಂಬ ಯುವಕ ಬೆಳ್ಳಂ ಬೆಳಗ್ಗೆ ಅಂಜಲಿ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ. ಪೊಲೀಸರು ಆತನನ್ನು ಅರೆಸ್ಟ್ ಮಾಡಿ ತನಿಖೆ ಮಾಡಿದಾಗ ಪ್ರೀತಿ ನಿರಾಕರಿಸಿದಕ್ಕೆ ಅಂಜಲಿಯನ್ನು ಕೊಲೆ ಮಾಡಿ ವಿಚಾರ ಬೆಳಕಿಗೆ ಬಂದಿತ್ತು.

ಈ ಪ್ರಕರಣ ರಾಜ್ಯಾದ್ಯಂತ ದೊಡ್ಡ ಮಟ್ಟದ ಸುದ್ದಿ ಮಾಡಿತ್ತು. ಹುಬ್ಬಳ್ಳಿ ನೇಹಾ ಹಿರೇಮಠ ಹತ್ಯೆಯಾದ ಒಂದೇ ತಿಂಗಳಲ್ಲಿ ಅಂಜಲಿ ಕೊಲೆಯಾಗಿತ್ತು. ಇವೆರೆಡು ಘಟನೆ ಹುಬ್ಬಳ್ಳಿಯಲ್ಲಿ ಭಯದ ವಾತಾವರಣ ಮೂಡಿಸಿದ್ದವು. ಕುಟುಂಬಕ್ಕೆ ಆಸರೆಯಾಗಿದ್ದ ಅಂಜಲಿ ಕೊಲೆಯಾದಳು, ಮನೆಗೆ ಯಾರು ದಿಕ್ಕವಿಲ್ಲದಂತಾಯಿತು. ಅಂಬಿಗ ಸಮುದಾಯ ಈ ಕುಟುಂಬಕ್ಕೆ ಸರ್ಕಾರ ಆರ್ಥಿಕ ನೆರವು ನೀಡಬೇಕೆಂದು ಒತ್ತಾಯ ಮಾಡಲಾಗಿತ್ತು.

ಅದೇ ರೀತಿ ಅಂಜಲಿ ಮನೆಗೆ ಸಚಿವರು, ಶಾಸಕರು, ಜನಪ್ರತಿನಿಧಿಗಳು ಭೇಟಿ ಸಾಂತ್ವನ ಕೂಡ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು, ತಹಶೀಲ್ದಾರ್ ಕಲ್ಲಗೌಡ ಪಾಟೀಲ್ ಅವರು ಅಂಜಲಿ ಕುಟುಂಬಕ್ಕೆ 5 ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ. ಕಷ್ಟದಲ್ಲಿದ್ದ ಅಂಜಲಿ ಕುಟುಂಬಕ್ಕೆ ರಾಜ್ಯ ಸರ್ಕಾರದ ಸಹಾಯದಿಂದ ನೆರವು ಸಿಕ್ಕಂತಾಗಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications