ರೈಲಿನ ಕಥೆ ಹೇಳಲಿದೆ ಹುಬ್ಬಳ್ಳಿಯ ಪಾರಂಪರಿಕ ರೈಲು ವಸ್ತು ಸಂಗ್ರಹಾಲಯ
ಹುಬ್ಬಳ್ಳಿ, ಜುಲೈ 27: ನೈಋತ್ಯ ರೈಲ್ವೆ ವಲಯವು ಹುಬ್ಬಳ್ಳಿಯಲ್ಲಿ ನಿರ್ಮಿಸಿರುವ "ಹುಬ್ಬಳ್ಳಿ ರೈಲ್ವೆ ಮ್ಯೂಸಿಯಂ" ಇದೀಗ ರೈಲಿನ ಇತಿಹಾಸವನ್ನು ಸಾರಿ ಹೇಳಲು ಸಜ್ಜಾಗಿದೆ. ರೈಲು ವಸ್ತು ಸಂಗ್ರಹಾಲಯದ ನಿರ್ಮಾಣದ ಕಾರ್ಯ ಮುಗಿದಿದ್ದು, ಕೊರೊನಾ ವೈರಸ್ ಕಾರಣದಿಂದಾಗಿ ಮ್ಯೂಸಿಯಂ ತೆರೆಯುವ ದಿನವಿನ್ನೂ ನಿಗದಿಯಾಗಿಲ್ಲ.
Recommended Video
ನೈಋತ್ಯ ರೈಲ್ವೆ ವಲಯ (ಎಸ್ಡಬ್ಲುಆರ್) ಪಾರಂಪರಿಕ ರೈಲು ವಸ್ತು ಸಂಗ್ರಹಾಲಯವನ್ನು ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಎರಡನೇ ಪ್ರವೇಶದ ಪಕ್ಕದಲ್ಲಿಯೇ ಸ್ಥಾಪಿಸಿದೆ. ಎರಡು ಹಳೆಯ ಕಟ್ಟಡಗಳಿದ್ದ ಜಾಗದಲ್ಲೇ ಈ ವಸ್ತುಸಂಗ್ರಹಾಲಯ ನಿರ್ಮಿತವಾಗಿದೆ.
ರೈಲಿನ ಇತಿಹಾಸವನ್ನು ವಿವಿಧ ರೂಪಗಳಲ್ಲಿ ಈ ವಸ್ತು ಸಂಗ್ರಹಾಲಯ ತೆರೆದಿಟ್ಟಿದೆ. ರೈಲು ಆರಂಭವಾದಾಗಿನಿಂದ ಇಲ್ಲಿವರೆಗೂ ಆಗಿರುವ ಬದಲಾವಣೆಗಳು, ತಂತ್ರಜ್ಞಾನದ ಜೊತೆ ರೈಲ್ವೆ ವಿಭಾಗವೂ ಬೆಳೆದು ಬಂದ ಬಗೆ, ವಿವಿಧ ರೀತಿಯ ರೈಲುಗಳು, ಬೋಗಿಗಳು, ಹಳೆಯ ಕಾಲದ ಸಿಗ್ನಲ್ಗಳು, ವಿದ್ಯುತ್ ಉಪಕರಣಗಳು, ಪ್ರಸ್ತುತ ರೈಲ್ವೆ ಮಾದರಿಗಳು, ಹೊಸ ತಂತ್ರಜ್ಞಾನಗಳ, ಹಂತ ಹಂತದ ಬೆಳವಣಿಗೆಗಳು... ಇವೆಲ್ಲವೂ ಮ್ಯೂಸಿಯಂನಲ್ಲಿವೆ. ರೈಲಿನ ಹಿನ್ನೆಲೆಯನ್ನು ತಿಳಿಸುವ ಪುಸ್ತಕ, ಛಾಯಾಚಿತ್ರಗಳೂ ಇವೆ.

ಪ್ರಸ್ತುತ ದೇಶದಲ್ಲಿ ಭಾರತೀಯ ರೈಲ್ವೆಯ 11 ವಸ್ತು ಸಂಗ್ರಹಾಲಯಗಳಿದ್ದು, ಹುಬ್ಬಳ್ಳಿಯ ಈ ವಸ್ತು ಸಂಗ್ರಹಾಲಯ ದೇಶದ 12ನೇ ಹಾಗೂ ಕರ್ನಾಟಕದ ಎರಡನೇ ರೈಲ್ವೆ ಮ್ಯೂಸಿಯಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮೈಸೂರು ರೈಲ್ವೆ ಮ್ಯೂಸಿಯಂ ಮೊದಲ ಮ್ಯೂಸಿಯಂ ಆಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications