ಅಮ್ಮ ಬೇಕು ಎಂದು ಹಟ ಮಾಡಿದ್ದಕ್ಕೆ ಬಾಲಕನಿಗೆ ಬರೆ ಎಳೆದ ಆಯಾ, ಶಿಕ್ಷಕ
ಹುಬ್ಬಳ್ಳಿ, ಆಗಸ್ಟ್.30:ಅಮ್ಮ ಬೇಕು...ಎಂದು ಹಟ ಹಿಡಿದ ನಾಲ್ಕು ವರ್ಷದ ಬಾಲಕನ ಬೆನ್ನಿಗೆ ನರ್ಸರಿ ಶಾಲೆಯ ಶಿಕ್ಷಕ ಹಾಗೂ ಆಯಾ ಬರೆ ಎಳೆದ ಅಮಾನವೀಯ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ.
ನಗರದ ಹೆಗ್ಗೇರಿ ಪ್ರದೇಶದ ಬಾಲಾಜಿ ನರ್ಸರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, "ಅಮ್ಮ ಬೇಕು ಎಂದು ಹಟ ಮಾಡಿದ್ದಕ್ಕೆ ಶಾಲೆಯ ಶಿಕ್ಷಕ ಹಾಗೂ ಆಯಾ ನನ್ನ ಮಗನ ಬೆನ್ನ ಮೇಲೆ ಬರೆ ಎಳೆದಿದ್ದಾರೆ" ಎಂದು ಬಾಲಕನ ತಾಯಿ ಕಾವೇರಿ ಆರೋಪಿಸಿದ್ದಾರೆ.
ಹೆಗ್ಗೇರಿಯಲ್ಲಿ ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ಸತೀಶ ನಾಯ್ಡು ಎಂಬುವವರು ಈ ನರ್ಸರಿ ಶಾಲೆಯನ್ನು ಆರಂಭಿಸಿದ್ದು, 35 ಕ್ಕೂ ಹೆಚ್ಚು ಮಕ್ಕಳು ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಅಲ್ಲದೆ ಕಾವೇರಿ ಎಂಬ ಮಹಿಳೆ ಈಗಷ್ಟೇ ಒಂದು ವಾರದ ಹಿಂದೆ ತನ್ನ ಮಗನನ್ನು ಶಾಲೆಗೆ ಸೇರಿಸಿದ್ದಾರೆ.

ಆದರೆ ಶಾಲೆಗೆ ಪ್ರತಿನಿತ್ಯ ಆಗಮಿಸುವ ಬಾಲಕ ಪ್ರತಿದಿನ ಅಮ್ಮ ಬೇಕು... ಅಂತ ಹಟ ಮಾಡಿದ್ದನಂತೆ. ಈ ಹಿನ್ನೆಲೆಯಲ್ಲಿ ಕುಪಿತಗೊಂಡ ಶಾಲೆಯ ಆಯಾ ಬಾಲಕನ ಬೆನ್ನಿಗೆ ಬರೆ ಎಳೆದು ಗಾಯಗೊಳಿಸಿದ್ದಾಳೆ ಎಂದು ಬಾಲಕನ ತಾಯಿ ಆರೋಪಿಸಿದ್ದಾಳೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಮೇಲೆ ಬಂದಿರುವ ಆರೋಪವನ್ನು ಶಿಕ್ಷಕ ಸತೀಶ ನಾಯ್ಡು ಹಾಗೂ ಆಯಾ ಅಲ್ಲಗಳೆದಿದ್ದು, ಆ ರೀತಿ ನಡೆದುಕೊಂಡಿಲ್ಲ ಎಂದಿದ್ದಾರೆ. ಆದರೆ ಈ ಕುರಿತಂತೆ ಬಾಲಕನ ತಾಯಿ ಕಾವೇರಿ ಶಿಕ್ಷಕ ಸತೀಶ ಹಾಗೂ ಆಯಾ ಮೇಲೆ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications