Get Updates
Get notified of breaking news, exclusive insights, and must-see stories!

ಅಮ್ಮ ಬೇಕು ಎಂದು ಹಟ ಮಾಡಿದ್ದಕ್ಕೆ ಬಾಲಕನಿಗೆ ಬರೆ ಎಳೆದ ಆಯಾ, ಶಿಕ್ಷಕ

ಹುಬ್ಬಳ್ಳಿ, ಆಗಸ್ಟ್.30:ಅಮ್ಮ ಬೇಕು...ಎಂದು ಹಟ ಹಿಡಿದ ನಾಲ್ಕು ವರ್ಷದ ಬಾಲಕನ ಬೆನ್ನಿಗೆ ನರ್ಸರಿ ಶಾಲೆಯ ಶಿಕ್ಷಕ ಹಾಗೂ ಆಯಾ ಬರೆ ಎಳೆದ ಅಮಾನವೀಯ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ.

ನಗರದ ಹೆಗ್ಗೇರಿ ಪ್ರದೇಶದ ಬಾಲಾಜಿ ನರ್ಸರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, "ಅಮ್ಮ ಬೇಕು ಎಂದು ಹಟ ಮಾಡಿದ್ದಕ್ಕೆ ಶಾಲೆಯ ಶಿಕ್ಷಕ ಹಾಗೂ ಆಯಾ ನನ್ನ ಮಗನ ಬೆನ್ನ ಮೇಲೆ ಬರೆ ಎಳೆದಿದ್ದಾರೆ" ಎಂದು ಬಾಲಕನ ತಾಯಿ ಕಾವೇರಿ ಆರೋಪಿಸಿದ್ದಾರೆ.

ಹೆಗ್ಗೇರಿಯಲ್ಲಿ ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ಸತೀಶ ನಾಯ್ಡು ಎಂಬುವವರು ಈ ನರ್ಸರಿ ಶಾಲೆಯನ್ನು ಆರಂಭಿಸಿದ್ದು, 35 ಕ್ಕೂ ಹೆಚ್ಚು ಮಕ್ಕಳು ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಅಲ್ಲದೆ ಕಾವೇರಿ ಎಂಬ ಮಹಿಳೆ ಈಗಷ್ಟೇ ಒಂದು ವಾರದ ಹಿಂದೆ ತನ್ನ ಮಗನನ್ನು ಶಾಲೆಗೆ ಸೇರಿಸಿದ್ದಾರೆ.

Teacher beaten a four-year-old boy in Hubballi

ಆದರೆ ಶಾಲೆಗೆ ಪ್ರತಿನಿತ್ಯ ಆಗಮಿಸುವ ಬಾಲಕ ಪ್ರತಿದಿನ ಅಮ್ಮ ಬೇಕು... ಅಂತ ಹಟ ಮಾಡಿದ್ದನಂತೆ. ಈ ಹಿನ್ನೆಲೆಯಲ್ಲಿ ಕುಪಿತಗೊಂಡ ಶಾಲೆಯ ಆಯಾ ಬಾಲಕನ ಬೆನ್ನಿಗೆ ಬರೆ ಎಳೆದು ಗಾಯಗೊಳಿಸಿದ್ದಾಳೆ ಎಂದು ಬಾಲಕನ ತಾಯಿ ಆರೋಪಿಸಿದ್ದಾಳೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಮೇಲೆ ಬಂದಿರುವ ಆರೋಪವನ್ನು ಶಿಕ್ಷಕ ಸತೀಶ ನಾಯ್ಡು ಹಾಗೂ ಆಯಾ ಅಲ್ಲಗಳೆದಿದ್ದು, ಆ ರೀತಿ ನಡೆದುಕೊಂಡಿಲ್ಲ ಎಂದಿದ್ದಾರೆ. ಆದರೆ ಈ ಕುರಿತಂತೆ ಬಾಲಕನ ತಾಯಿ ಕಾವೇರಿ ಶಿಕ್ಷಕ ಸತೀಶ ಹಾಗೂ ಆಯಾ ಮೇಲೆ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+