ಹುಬ್ಬಳ್ಳಿ : ಕಿಮ್ಸ್ನಲ್ಲಿ ಬೈಕ್, ಮೊಬೈಲ್ ಕಳ್ಳರ ಪಾಲು
ಹುಬ್ಬಳ್ಳಿ, ಅಕ್ಟೋಬರ್ 11 : ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಉತ್ತರ ಕರ್ನಾಟಕದ ಸಂಜೀವಿನಿ ಎಂದು ಖ್ಯಾತಿ ಪಡೆದಿದೆ. ರೋಗಿಗಳ ಜೀವ ಉಳಿಸುವ ಆಸ್ಪತ್ರೆಯಲ್ಲಿ, ರೋಗಿಗಳ ಜೊತೆ ಬರುವವರಿಗೆ ರಕ್ಷಣೆ ಇಲ್ಲದಂತಾಗಿದೆ. ಆಸ್ಪತ್ರೆಯಲ್ಲಿ ಕಳ್ಳರ ಕಾಟ ಹೆಚ್ಚಾಗುತ್ತಿದೆ.
ಕಿಮ್ಸ್ ಆಸ್ಪತ್ರೆಗೆ ಪ್ರತಿದಿನ ನೂರಾರು ರೋಗಿಗಳು ಬರುತ್ತಾರೆ. ಆಸ್ಪತ್ರೆಗೆ ಬರುವ ರೋಗಿಗಳ ಹಾಗೂ ಸಂಬಂಧಿಕರ ಅಮೂಲ್ಯವಾದ ವಸ್ತುಗಳು ಕಳ್ಳರ ಪಾಲಾಗುತ್ತಿವೆ. ಕಳ್ಳರ ಹಾವಾಳಿಯಿಂದ ರೋಗಿಗಳು ಹಾಗೂ ಅವರ ಜೊತೆ ಬರುವವರು ಹೈರಾಣಾಗಿದ್ದಾರೆ.

ಆಸ್ಪತ್ರೆಯಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಮೊಬೈಲ್, ಹಣ, ಬೈಕ್ ಕಳ್ಳರ ಪಾಲಾಗುತ್ತದೆ. ಕಿಮ್ಸ್ ಆಸ್ಪತ್ರೆಯ ಚಿಕ್ಕ ಮಕ್ಕಳ ಆಸ್ಪತ್ರೆಯಲ್ಲಿ ಮೊಬೈಲ್ ಹಾಗೂ ಬೈಕ್ ಕಳ್ಳರ ಹಾವಳಿ ಹೆಚ್ಚಾಗುತ್ತಿದೆ. ಕಿಮ್ಸ್ ಆಸ್ಪತ್ರೆಗೆ ಬರುವ ಜನರು ಕಳ್ಳರ ಹಾವಳಿಯಿಂದ ಬೇಸತ್ತು ಹೋಗಿದ್ದು, ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.
ಎರಡು ವಾರದ ಹಿಂದೆ ಬೈಕ್ಗಳ ಸರಣಿ ಕಳ್ಳತನ ನಡೆದಿತ್ತು. ಇಂದು ಮತ್ತೆ ಗದಗ ಮೂಲದ ಬಸವರಾಜ್ ಎಂಬುವರ ಬೈಕ್ ಕಳ್ಳತನವಾಗಿದೆ. ಆಸ್ಪತ್ರೆಗೆ ಬರುವವರನ್ನು ಟಾರ್ಗೆಟ್ ಮಾಡಿ ಕಳ್ಳತನ ನಡೆಸುವ ದೊಡ್ಡ ಜಾಲವೇ ಇರಬಹುದು ಎಂದು ಶಂಕಿಸಲಾಗಿದೆ.
ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಂದ ಬಡ ರೋಗಿಗಳು ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಅವರಿಗೆ ರಕ್ಷಣೆ ನೀಡಿ, ಕಳ್ಳರ ಕಾಟಕ್ಕೆ ತಡೆ ಹಾಕಬೇಕಾದ ಕೆಲಸವನ್ನು ಕಿಮ್ಸ್ ಆಸ್ಪತ್ರೆ ಭದ್ರತಾ ಸಿಬ್ಬಂದಿ ಮತ್ತು ವಿದ್ಯಾನಗರ ಪೊಲೀಸರು ಮಾಡಬೇಕಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications