ಮಹದಾಯಿ ವಿವಾದ: ಫಲ ನೀಡದ ಯಡಿಯೂರಪ್ಪ ಪ್ರಯತ್ನ?
ಹುಬ್ಬಳ್ಳಿ, ಡಿಸೆಂಬರ್ 21: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಮಹದಾಯಿ ವಿವಾದ ಬಗೆಹರಿಸಲು ಮಾಡಿದ ಪ್ರಯತ್ನಕ್ಕೆ ಕೊಡಲಿ ಪೆಟ್ಟು ಬಿದ್ದಂತಿದೆ. ಗೋವಾ ಮುಖ್ಯಂಮತ್ರಿ ಮನೋಹರ ಪರಿಕ್ಕರ್ ಅವರು ' ಮಹದಾಯಿ ವಿಚಾರದಲ್ಲಿ ನಮ್ಮ ನಿರ್ಣಯದಲ್ಲಿ ಯಾವುದೇ ಬದಲಾವಣೆ ಇಲ್ಲ' ಎಂದಿರುವುದು ಈ ರೀತಿಯ ಅನುಮಾನ ಮೂಡಲು ಕಾರಣ.
ಯಡಿಯೂರಪ್ಪ ಹಾಗೂ ಇನ್ನೂ ಕೆಲವು ರಾಜ್ಯದ ಬಿಜೆಪಿ ಮುಖಂಡರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಧ್ಯಸ್ಥಿಕೆಯಲ್ಲಿ ಗೋವಾ ಮೂಖ್ಯಮಂತ್ರಿ ಮನೋಹರ ಪರಿಕ್ಕರ್ ಅವರನ್ನು ನಿನ್ನೆ ಭೇಟಿ ಆಗಿ ಮಹದಾಯಿ ಕುರಿತು ಮಾತುಕತೆ ನಡೆಸಿ ಮಹದಾಯಿ ವಿವಾದದ ಬಗ್ಗೆ ಇಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಪರಿವರ್ತನಾ ಯಾತ್ರೆಯ ಮಹಾ ಸಮಾವೇಶದಲ್ಲಿ ಸಿಹಿ ಸುದ್ದಿ ಘೋಷಿಸುವುದಾಗಿ ಹೇಳಿದ್ದರು.

ಆದರೆ ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರು ಕನ್ನಡಿಗರ ಮಹದಾಯಿ ಆಸೆಯ ಬಲೂನಿಗೆ ಸೂಜಿ ಚುಚ್ಚಿದ್ದು, '2002ರಲ್ಲಿ ನಮ್ಮ ರಾಜ್ಯ ಮಹದಾಯಿ ವಿಚಾರವಾಗಿ ತೆಗೆದುಕೊಂಡ ನಿರ್ಣಯಕ್ಕೆ ಬದ್ಧವಾಗಿದ್ದು ಆ ನಿರ್ಣಯದಲ್ಲಿ ಯಾವುದೇ ಬದಲಾವಣೆ ಇಲ್ಲ' ಎಂದು ಹೇಳಿದ್ದಾರೆ.
'ತರುಣ್ ಭಾರತಿ' ಎಂಬ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಮನೋಹರ ಪರಿಕ್ಕರ್ ಅವರು ಈ ವಿಷಯ ಸ್ಪಷ್ಟಪಡಿಸಿದ್ದು, ಗೋವಾ ಜನರ ಹಿತಕಾಯಲು ಸದಾ ಬದ್ಧ, ಮಹದಾಯಿ ವಿಚಾರವಾಗಿ ಯಾವುದೇ ನಿರ್ಣಯಗಳನ್ನು ಸಚಿವ ಸಂಪುಟ ಸಭೆಯಲ್ಲೇ ತೆಗೆದುಕೊಳ್ಳಲಾಗುತ್ತದೆ ಎನ್ನುವ ಮೂಲಕ ನಿನ್ನೆ ಯಡಿಯೂರಪ್ಪ ಅವರೊಂದಿಗಿನ ಸಭೆ ಅನೌಪಚಾರಿಕವಷ್ಟೆ ಎಂದು ಸೂಚ್ಯವಾಗಿ ತಿಳಿಸಿದ್ದಾರೆ.

ನಿನ್ನೆ ಮನೋಹರ ಪರಿಕ್ಕರ್ ಅವರನ್ನು ಭೇಟಿ ಮಾಡಿದ್ದ ಯಡಿಯೂರಪ್ಪ ಅವರು ವ್ಯತಿರಿಕ್ತವಾದ ಹೇಳಿಕೆ ನಿಡಿದ್ದರು. ಮಹದಾಯಿ ವಿವಾದದ ಬಗ್ಗೆ ಧನಾತ್ಮಕ ಪ್ರತಿಕ್ರಿಯೆ ಮನೋಹರ ಪರಿಕ್ಕರ್ ಅವರಿಂದ ಬಂದಿದ್ದು, ಮಾತುಕತೆ ಫಲಪ್ರದವಾಗಿದೆ. ಆ ಬಗ್ಗೆ ಹುಬ್ಬಳ್ಳಿ ಸಮಾವೇಶದಲ್ಲಿ ಘೋಷಣೆ ಮಾಡುತ್ತೇವೆ ಎಂದಿದ್ದರು. ಆದರೆ ಈಗ ಮನೋಹರ ಪರಿಕ್ಕರ್ ಅವರೇ ಉಲ್ಟಾ ಹೊಡೆದಿದ್ದು, ಯಡಿಯೂರಪ್ಪ ಅವರು ಜನರ ಕಣ್ಣೊರೆಸುವ ತಂತ್ರವಾಗಿ ಆ ರೀತಿ ಹೇಳಿದ್ದರೆ ಎಂಬ ಅನುಮಾನ ಈಗ ಪ್ರಾರಂಭವಾಗಿದೆ.
ಯಡಿಯೂರಪ್ಪ ಅವರು ಅಮಿತ್ ಶಾ ಅವರೊಂದಿಗೆ ಮನೋಹರ ಪರಿಕ್ಕರ್ ಅವರನ್ನು ಭೇಟಿ ಆದಾಗಿನಿಂದಲೂ ಹುಬ್ಬಳ್ಳಿ ಸೇರಿದಂತೆ ಉತ್ತರ ಕರ್ನಾಟಕದ ಜನ ಮಹದಾಯಿ ವಿವಾದ ಇತ್ಯರ್ಥವಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ನಿನ್ನೆ ಸಂಜೆ ಮಾತುಕತೆ ನಂತರ ಯಡಿಯೂರಪ್ಪ ಅವರು ಹುಬ್ಬಳ್ಳಿ ಸಮಾವೇಶದಲ್ಲಿ ವಿವಾದ ಇತ್ಯರ್ಥದ ಕುರಿತು ಘೋಷಿಸುತ್ತೇವೆ ಎಂದ ಬಳಿಕವಂತೂ ನಿರೀಕ್ಷೆಗಳು ಹೆಚ್ಚಾಗಿತ್ತು ಆದರೆ ಈಗ ಎಲ್ಲರ ನಿರೀಕ್ಷೆಗಳು ಹುಸಿಯಾಗುವಂತಹಾ ಹೇಳಿಕೆ ಮನೋಹರ ಪರಿಕ್ಕರ್ ಅವರಿಂದ ಹೊರಬಿದ್ದಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications