ಜಗದೀಶ್ ಶೆಟ್ಟರ್ಗೆ ಟಿಕೆಟ್ ವಿಳಂಬ: ರಾಜೀನಾಮೆ ಸಲ್ಲಿಸಿದ 16 ಹು-ಧಾ ಪಾಲಿಕೆ ಸದಸ್ಯರು
ಹುಬ್ಬಳ್ಳಿ, ಏಪ್ರಿಲ್ 15: ರಾಜ್ಯ ವಿಧಾನಸಭಾ ಚುನಾವಣಾಗೆ ಸ್ಪರ್ಧಿಸಲು, ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಹಾಲಿ ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಪಕ್ಷ ಟಿಕೆಟ್ ನೀಡುವಲ್ಲಿ ವಿಳಂಬ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 16 ಸದಸ್ಯರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿ ಪಕ್ಷದ 16 ಸದಸ್ಯರು ರಾಜೀನಾಮೆ ಪತ್ರ ಬರೆದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಸಲ್ಲಿಸಿದ್ದಾರೆ.

ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸತತ ಆರು ಬಾರಿ ಗೆಲುವು ಕಂಡ ಜಗದೀಶ್ ಶೆಟ್ಟರ್ ಅವರಿಗೆ ಸೆಂಟ್ರಲ್ ಕ್ಷೇತ್ರಕ್ಕೆ ಟಿಕೆಟ್ ನೀಡಲು ಹೈ ಕಮಾಂಡ್ ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರರಾದ ಮಲ್ಲಿಕಾರ್ಜುನ ಗುಂಡೂರ, ರಾಜಣ್ಣ ಕೊರವಿ, ಉಮೇಶಗೌಡ ಕೌಜಗೇರಿ, ತಿಪ್ಪಣ್ಣ ಮಜ್ಜಿಗಿ, ಸೀಮಾ ಮುಗಲಿಶೆಟ್ಟರ, ಸಂತೋಷ ಚವ್ಹಾಣ, ಮಹದೇವಪ್ಪ ನರಗುಂದ, ಬೀರಪ್ಪ ಖಂಡೇಕರ, ಉಮಾ ಮುಕುಂದ, ವೀರಣ್ಣ ಸವಡಿ, ರೂಪಾ ಶೆಟ್ಟಿ, ಕಿಶನ್ ಬೆಳಗಾವಿ, ವೀಣಾ ಬರದ್ವಾಡ, ಸರಸ್ವತಿ ಧೋಂಗಡಿ, ಚಂದ್ರಿಕಾ ವೆಂಕಟೇಶ ಮೇಸ್ತ್ರಿ, ಮೀನಾಕ್ಷಿ ವಂಟಮೂರಿ ಈ 16 ಜನ ಬಿಜೆಪಿ ಪಾಲಿಕೆ ಸದಸ್ಯರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆಯಾಗಿದ್ದೂ, ಎರಡರಲ್ಲೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಪಕ್ಷ ಟಿಕೆಟ್ ನೀಡಿಲ್ಲ. ಜಗದೀಶ್ ಶೆಟ್ಟರ್ಗೆ ಟಿಕೆಟ್ ನೀಡಲು ಪಕ್ಷ ವಿಳಂಬ ಮಾಡುತ್ತಿದ್ದು, ಇದರಿಂದ ಅವರ ಬೆಂಬಲಿಗರು ಬೇಸರಗೊಂಡಿದ್ದಾರೆ.

ವಿಧಾನಸಭಾ ಟಿಕೆಟ್ ವಿಳಂಬ: ಬಿಜೆಪಿ ಹೈ ಕಮಾಂಡ್ಗೆ ಡೆಡ್ ಲೈನ್ ನೀಡಿದ ಜಗದೀಶ್ ಶೆಟ್ಟರ್
ಇನ್ನು ಟಿಕೆಟ್ ನಿರೀಕ್ಷೆಯಲ್ಲಿರುವ ಜಗದೀಶ್ ಶೆಟ್ಟರ್ ಬಿಜೆಪಿ ನಾಯಕರಿಗೆ ಟಿಕೆಟ್ ಘೋಷಣೆಗೆ ಡೆಡ್ ಲೈನ್ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾನು ಪಾಸಿಟಿವ್ ಆಗಿ ಯೋಚನೆ ಮಾಡುತ್ತೇನೆ. ಈಗಲೂ ಆಶಾಭಾವ ಹೊಂದಿದ್ದೇನೆ. ಶನಿವಾರ ಘೋಷಣೆ ಆಗದೆ ಹೋದರೆ ನಾನು ಯೋಚನೆ ಮಾಡುತ್ತೇನೆ. ಅಭಿಮಾನಿಗಳ ಸಭೆ ಮಾಡಿ ಅಂತೀಮ ತೀರ್ಮಾನ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು.
ಜಗದೀಶ್ ಶೆಟ್ಟರ್ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದೇವೆ- ಸಿಎಂ ಬಸವರಾಜ ಬೊಮ್ಮಾಯಿ
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ವಿಳಂಬ ಮಾಡುತ್ತಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದು, ಜಗದೀಶ್ ಶೆಟ್ಟರ್ ಅವರ ಟಿಕೆಟ್ ವಿಚಾರಕ್ಕೆ, ಅವರನ್ನು ಮನವೊಲಿಕೆ ಪ್ರಯತ್ನ ಮಾಡಿದ್ದೇವೆ. ಇವತ್ತಿಗೂ ಪ್ರಯತ್ನ ನಡೆಯುತ್ತಿದೆ. ನಿನ್ನೆ ಧರ್ಮೇಂದ್ರ ಪ್ರಧಾನ ಬಳಿ ಚರ್ಚೆ ಮಾಡಿದ್ದೇನೆ. ಬಿಜೆಪಿಗೆ ಶೆಟ್ಟರ್ ಅತ್ಯಂತ ನಿಷ್ಟರು. ಉತ್ತರ ಕರ್ನಾಟಕ ಭಾಗಕ್ಕೆ ಅತ್ಯಂತ ಅವಶ್ಯಕವಾಗಿದ್ದಾರೆ. ಅವರನ್ನು ಉಳಿಸಿಕೊಳ್ಳಬೇಕೆಂದು ಹೇಳಿದ್ದೇನೆಂದು ಎಂದಿದ್ದಾರೆ.
ಜಗದೀಶ್ ಶೆಟ್ಟರ್ಗೆ ಟಿಕೆಟ್ ತಪ್ಪಲು ಕಾರಣ ನೀವಂತೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಇದು ಸುಳ್ಳು ವದಂತಿ, ಯಾರೂ ಅದನ್ನು ನೀರಿಕ್ಷೆ ಮಾಡಬಾರದು. ಅತ್ಯಂತ ಪ್ರಾಮಾಣಿಕವಾಗಿ ಜಗದೀಶ್ ಶೆಟ್ಟರ್ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದೇವೆ. ಹೇಳೋರು ನೂರಾರು ಹೇಳ್ತಾರೆ, ಶೆಟ್ಟರ್ ನಾವು ಆತ್ಮೀಯರು ಎಂದರು.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications