ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯನ ಕೊರಳಲ್ಲಿಯೂ ಹುಲಿ ಉಗುರಿನ ಪೆಂಡೆಂಟ್
ಹುಬ್ಬಳ್ಳಿ, ಅಕ್ಟೋಬರ್, 26: ಹುಲಿ ಉಗುರು ಡಾಲ್ ಧರಿಸಿದ ಪ್ರಕರಣದಲ್ಲಿ ಕನ್ನಡ ಕಿರುತೆರೆ ರಿಯಾಲಿಟಿ ಶೋ ಬಿಗ್ ಬಾಸ್ 10 ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಬಂಧನ ಬಳಿಕ, ಸ್ವಾಮೀಜಿ, ಸೆಲೆಬ್ರಿಟಿ, ರಾಜಕಾರಣಿಗಳು ಧರಿಸಿರುವ ಬಗ್ಗೆ ಮಾಹಿತಿಗಳು ಬೆಳಕಿಗೆ ಬರುತ್ತಿವೆ. ಹಾಗೆಯೇ ಹುಲಿ ಉಗುರು ಪ್ರಕರಣ ಇದೀಗ ಕಾಂಗ್ರೆಸ್ ಕೊರಳಿಗೆ ಕೈಹಾಕಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಳಿಯ ಹುಬ್ಬಳ್ಳಿ ಕಾಂಗ್ರೆಸ್ ಯುವ ಮುಖಂಡ ರಜತ್ ಉಳ್ಳಾಗಡ್ಡಿ ಕೊರಳಲ್ಲೂ ಹುಲಿ ಉಗುರು ಪೆಂಡೆಂಟ್ ಇರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಂತೋಷ್ ಬಂಧನವಾಯ್ತು, ಇವರ ಬಂಧನ ಯಾವಾಗ? ಕಾನೂನು ಎಲ್ಲರಿಗೂ ಒಂದೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಈ ಪ್ರಕರಣದಿಂದ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಇನ್ನು ವರ್ತೂರು ಸಂತೋಷ್ ಬಂಧನದ ಹಿಂದೆ ಷಡ್ಯಂತ್ರ ನಡೆದಿದೆ ಎನ್ನುವ ಆಕ್ರೋಶಗಳು ಭುಗಿಲೆದ್ದಿವೆ. ಹಾಗೆಯೇ ಮದುವೆ ಸಮಯದಲ್ಲಿ ಫೋಟೋ ಶೂಟ್ನಲ್ಲಿ ಹುಲಿ ಉಗುರು ಮಾದರಿ ಚೈನ್ ಧರಿಸಿದ್ದ ರಜತ್ ಪೋಟೋ ಈಗ ವೈರಲ್ ಆಗಿದೆ. ಇದವರು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಸಹೋದರಿ ಮಗಳನ್ನು ಮದುವೆಯಾಗಿದ್ದಾರೆ.
ಆದ್ದರಿಂದ ರಜತ್ ಅವರು ರಾಜಕೀಯ ವಲಯದಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಅಳಿಯ ಅಂತಲೇ ಫೇಮಸ್. ಈ ಹಿಂದೆ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಆಗಿದ್ದರು. ಇದೀಗ ಹುಲಿ ಉಗುರು ಪೆಂಡೆಂಟ್ ಧರಿಸಿರುವ ವಿಚಾರಕ್ಕೆ ಪೇಚಿಗೆ ಸಿಲುಕಿಕೊಂಡಿದ್ದಾರೆ. ಪೆಂಡೆಂಟ್ ಧರಿಸಿದ ವಿಚಾರಕ್ಕೆ ಜಗ್ಗೇಶ್, ನಟ ದರ್ಶನ ಮನೆಮೇಲೆ ದಾಳಿ ಮಾಡಿರುವ ಅರಣ್ಯ ಇಲಾಖೆ ಇದೀಗ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿ ಮನೆ ಮೇಲೂ ದಾಳಿ ಮಾಡುತ್ತಾ? ಎನ್ನುವ ಪ್ರಶ್ನೆಗಳು ಎದ್ದಿವೆ.
ಅರಣ್ಯ ಅಧಿಕಾರಿ ಮೇಲೆ ದೂರು
ಕಾಫಿನಾಡಿನಲ್ಲಿ ಹುಲಿ ಉಗುರು ಧರಿಸಿದ್ದವರ ಬಂಧನವಾಗುತ್ತಿದ್ದು, ಇದೀಗ ಅದೇ ಸಾಲಿಗೆ ಅರಣ್ಯ ಅಧಿಕಾರಿ ಒಬ್ಬರು ಸಿಲುಕಿದ್ದಾರೆ.
ಕಾಫಿನಾಡಿಗೆ ಹುಲಿ ಉಗುರಿನ ಕಂಟಕವಾಗಿದೆ. ಇದೀಗ ಕಳಸದ ಡಿ.ಆರ್.ಎಫ್.ಓ. ದರ್ಶನ್ ವಿರುದ್ದ ಹುಲಿ ಉಗುರು ಧರಿಸಿದ್ದಾರೆ ಎಂದು ದೂರು ನೀಡಲಾಗಿದೆ. ದರ್ಶನ್ ಚಿಕ್ಕಮಗಳೂರು ತಾಲೂಕು ಆಲ್ದೂರು ಮೂಲದವರು. ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಮೇಲೆ ಅರೆನೂರು ಗ್ರಾಮದ ಸುಪ್ರೀತ್, ಅಬ್ದುಲ್ ಎಂಬುವವರು ಲಿಖಿತ ದೂರು ನೀಡಿದ್ದಾರೆ. ಇವರು ಹುಲಿ ಉಗುರು ಧರಿಸಿದ್ದು ಸೂಕ್ತ ಕ್ರಮ ಕೈಗೊಂಡು, ವನ್ಯ ಜೀವಿ ಕಾಯ್ದೆಯಲ್ಲಿ ಪ್ರಕರಣ ದಾಖಲಿಸುವಂತೆ ಹೇಳಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications