ನೇಹಾ ಕುಟುಂಬಕ್ಕೆ ಜೀವ ಬೆದರಿಕೆ: ಹುಬ್ಬಳ್ಳಿ ನಿವಾಸಕ್ಕೆ ಪೊಲೀಸ್ ಬಿಗಿ ಭದ್ರತೆ
ಹುಬ್ಬಳ್ಳಿ, ಏಪ್ರಿಲ್ 26: ಹುಬ್ಬಳ್ಳಿಯ ಕಾಲೇಜಿನಲ್ಲಿ ಕೊಲೆಯಾ ನೇಹಾ ಹಿರೇಮಠ ಅವರ ತಂದೆ ನಿರಂಜನ್ ಹಿರೇಮಠ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿಯಾದ ಬೆನ್ನಲ್ಲೆ ನಿವಾಸಕ್ಕೆ ಪೊಲೀಸ್ ಬೀಗಿ ಭದ್ರತೆ ಒದಗಿಸಲಾಗಿದೆ.
ಹೌದು, ಹುಬ್ಬಳ್ಳಿ-ಮಹಾನಗರ ಪಾಲಿಕೆ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಅವರ ಪುತ್ರಿ ನೇಹಾ ಕೊಲೆಯಾದ ಬಳಿಕ ಅವರ ಮನೆಗೆ ಟೈಟ್ ಸೆಕ್ಯುರಿಟಿ ಕಲ್ಪಿಸಲಾಗಿದೆ. ಈ ಮೂಲಕ ಮುಂಜಾಗ್ರತೆ ವಹಿಸಲಾಗಿದೆ.

ನೇಹಾ ಹತ್ಯೆಗೆ ಸಂಬಂಧಿಸಿದಂತೆ ತನಗೆ ಕೆಲವರಿಂದ ಜೀವ ಬೆದರಿಕೆ ಇದೆ ಎಂದು ನಿರಂಜನಯ್ಯ ಗುರುವಾರ ಮುಖ್ಯಮಂತ್ರಿಗಳ ಬಳಿ ತಿಳಿಸಿದ್ದರು. ಈ ಕಾರಣದಿಂದ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಘಟಕ ಶುಕ್ರವಾರ ಅವರಿಗೆ ಶಸ್ತ್ರಸಜ್ಜಿತ ಒಬ್ಬ ಅಂಗರಕ್ಷಕರನ್ನು ಭದ್ರತೆ ನಿಯೋಜಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಮನೆಗೆ ಬಂದಿದ್ದ ಅನುಮಾನಾಸ್ಪದ ವ್ಯಕ್ತಿಗಳು
ಅಲ್ಲದೇ ಮಗಳ ಸಾವಿನ ಘಟನೆ ಬಳಿಕ ಕುಟುಂಬಸ್ಥರಿಗೆ ಮತ್ತು ತಮಗೆ ಸಾಂತ್ವನ ಹೇಳುವ ನೆಪದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಮನೆಗೆ ಬಂದು ಹೋಗಿದ್ದನ್ನು ಗಮನಿಸಿದ್ದೇನೆ. ಮಗಳು ಇದ್ದ ಬೆಡ್ರೂಮಿನ ವಿಡಿಯೊ ಸಹ ಮಾಡಿಕೊಂಡು ಹೋಗಿದ್ದಾರೆ ಎಂದು ತಂದೆ ನಿರಂಜನ್ ಹಿರೇಮಠ ಆರೋಪಿಸಿದರು.

ನೇಹಾ ಕುಟುಂಬಕ್ಕೆ ಜೀವ ಬೆದರಿಕೆ
ಇದೆಲ್ಲ ನೋಡಿದರೆ ನಮ್ಮ ಕುಟುಂಬದವರ ಜೀವಕ್ಕೂ ಅಪಾಯ ಎದುರಾಗುವ ಸಾಧ್ಯತೆ ಇದೆ. ಆದ್ದರಿಂದ ಜೀವ ಬೆದರಿಕೆ ಬಗ್ಗೆಯು ತನಿಖೆ ನಡೆಯಬೇಕು ಎಂದು ಮೃತ ನೇಹಾಳ ತಂದೆ ಒತ್ತಾಯಿಸಿದ್ದರು. ಹುಬ್ಬಳ್ಳಿಯ ಬಿಡನಾಳದಲ್ಲಿ ಇರುವ ಅವರ ನಿವಾಸಕ್ಕೂ ಇಬ್ಬರು ಪೊಲೀಸ್ ಸಿಬ್ಬಂದಿ ಭದ್ರತೆಗೆ ನಿಯೋಜಿಸಲಾಗಿದೆ.
ಇವರಿಗೆ ಭದ್ರತೆ ನೀಡುವ ಜವಾಬ್ದಾರಿಯನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಅವರು ನಿಭಾಯಿಸುತ್ತಿದ್ದಾರೆ.
ನಿವಾಸಕ್ಕೆ ಭೇಟಿ ನೀಡಿ ಧೈರ್ಯ ತುಂಬಿದ್ದ ಸಿಎಂ
ಗುರುವಾರವಷ್ಟೇ ನೇಹಾ ತಂದೆ ಭೇಟಿ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಿಮ್ಮೊಂದಿಗೆ ನಾವಿದ್ದೇವೆ. ನಮ್ಮ ಸರ್ಕಾರ ಇದೆ ಎಂದು ಧೈರ್ಯ ತುಂಬಿದರು. ಮುಂದಿನ ಮೂರು ನಾಲ್ಕು ತಿಂಗಳಲ್ಲಿ ಮೃತ ನೇಹಾಳ ಸಾವಿಗೆ ನ್ಯಾಯ ಒದಗಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications