ಉತ್ತರ ಕರ್ನಾಟಕದ ಸಂಜೀವಿನಿ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಮತ್ತೆ ಯಡವಟ್ಟು: ಒಂದೇ ಬೆಡ್ ಮೇಲೆ ಇಬ್ಬರಿಗೆ ಚಿಕಿತ್ಸೆ
ಉತ್ತರ ಕರ್ನಾಟಕದ ಸಂಜೀವಿನಿ ಎಂದೇ ಪ್ರಖ್ಯಾತಿ ಪಡೆದಿರುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಸದಾ ಒಂದಲ್ಲ ಒಂದು ಯಡವಟ್ಟು ಮಾಡಿಕೊಂಡು ಸುದ್ದಿಯಲ್ಲಿರುತ್ತದೆ. ಇದೀಗ ಮತ್ತೆ ಯಡವಟ್ಟು ಮಾಡಿಕೊಂಡು ಜನರ ಕೆಂಗಣ್ಣಿಗೆ ಗುರಿಯಾಗಿದೆ.
ಹುಬ್ಬಳ್ಳಿ, ಮಾರ್ಚ್, 15: ಉತ್ತರ ಕರ್ನಾಟಕದ ಸಂಜೀವಿನಿ ಎಂದೇ ಪ್ರಖ್ಯಾತಿ ಆಗಿರುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಸದಾ ಒಂದಲ್ಲ ಒಂದು ಯಡವಟ್ಟು ಮಾಡಿಕೊಂಡು ಸುದ್ದಿಯಲ್ಲಿರುತ್ತದೆ. ವಾರ್ಡ್ಗಳಲ್ಲಿ ರೋಗಿಗಳನ್ನು ಕೆಳಮಟ್ಟದಲ್ಲಿ ನೋಡಿಕೊಳ್ಳಲಾಗುತ್ತಿದ್ದು, ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಬಡರೋಗಿಗಳು ನರಳಾಡುವಂತಾಗಿದೆ.
ಹುಬ್ಬಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ರೋಗಿಗಳು ನಿತ್ಯ ನರಕದರ್ಶನ ಅನುಭವಿಸುವಂತಾಗಿದೆ. ಮೊನ್ನೆ ನೆಲದ ಮೇಲೆ ವೃದ್ಧೆಗೆ ಚಿಕಿತ್ಸೆ ನೀಡಿ ಸುದ್ದಿಯಾಗಿದ್ದ ಕಿಮ್ಸ್ ಆಡಳಿತ ಮಂಡಳಿ, ಇದೀಗ ಮತ್ತೆ ಅಂತಹದ್ದೇ ತಪ್ಪು ಮಾಡಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಇಬ್ಬರು ಮಹಿಳೆಯರು ಒಂದೇ ಬೆಡ್ ಮೇಲೆ ಮಲಗಿ ಚಿಕಿತ್ಸೆ ಮತ್ತು ವಿಶ್ರಾಂತಿ ಪಡೆದ ವಿಡಿಯೋ ಈಗ ವೈರಲ್ ಆಗಿದೆ. ಕಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಕಾರ್ಯವೈಖರಿಗೆ ಜನ ಬೇಸರ ವ್ಯಕ್ತಪಡಿಸಿದ್ದಾರೆ.

ಒಂದೇ ಬೆಡ್ ಮೇಲೆ ಇಬ್ಬರಿಗೆ ಚಿಕಿತ್ಸೆ
ಇನ್ನು ಒಂದೇ ಬೆಡ್ನಲ್ಲಿ ಒಬ್ಬರ ಕಾಲ ಬಳಿ ಮತ್ತೊಬ್ಬರ ಮುಖ ಮಾಡಿ ಮಧ್ಯವಯಸ್ಕ ಮಹಿಳೆಯರು ವಿಶ್ರಾಂತಿ ಪಡೆದಿದ್ದಾರೆ. ಸ್ವಲ್ಪ ಆಚೀಚೆ ಆದರೂ ನೆಲಕ್ಕೆ ಬೀಳುವ ಸ್ಥಿತಿ, ಆತಂಕದಲ್ಲಿಯೇ ಮೈ ಬಿಗಿ ಹಿಡಿದುಕೊಂಡು ಮಲಗಿದ್ದಾರೆ. ಹೀಗೆ ಒಂದೇ ಬೆಡ್ನಲ್ಲಿ ಇಬ್ಬರು ನರಳಾಡುವ ದೃಶ್ಯ ಕಂಡ ಸಹ ರೋಗಿ ಸಂಬಂಧಿ ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚರವಾದ ಕಿಮ್ಸ್ ಆಡಳಿತ ಮಂಡಳಿ ಪ್ರಕರಣ ಮುಚ್ಚಿಹಾಕುವ ಪ್ರಯತ್ನಕ್ಕೆ ಮುಂದಾಗಿದೆ. ಆ ಸಮಯದಲ್ಲಿ ಹೆಚ್ಚು ಜನ ರೋಗಿಗಳು ದಾಖಲಾದ ಹಿನ್ನೆಲೆ ಬೆಡ್ ಅಭಾವ ಸೃಷ್ಟಿಯಾಗಿತ್ತು. ಇದರಲ್ಲಿ ನಮ್ಮ ಸಿಬ್ಬಂದಿಯದ್ದು ತಪ್ಪಾಗಿದೆ. ಮುಂದೆ ಈ ರೀತಿ ಆಗದಂತೆ ಎಚ್ಚರವಹಿಸಿತ್ತೇವೆ ಎಂದು ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಸ್ಪಷ್ಟನೆ ನೀಡಿದ್ದಾರೆ.

ಒಟ್ಟಿನಲ್ಲಿ ಸಿಬ್ಬಂದಿ ನಿರ್ಲಕ್ಷ್ಯದಿಂದ ಒಳ್ಳೆಯ ಚಿಕಿತ್ಸೆ ಇದ್ದರೂ ಕಿಮ್ಸ್ ಆಸ್ಪತ್ರೆಗೆ ಕೆಟ್ಟ ಹೆಸರು ಬರುತ್ತಿದೆ. ಹೀಗೆ ಬಡರೋಗಿಗಳ ಜೊತೆಗೆ ಚೆಲ್ಲಾಟವಾಡುತ್ತಿರುವ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಾಬೇಕಾಗಿದೆ ಎನ್ನುವುದು ಇಲ್ಲಿನ ಜನರ ಆಶಯವಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications