ಹುಬ್ಬಳ್ಳಿ-ಧಾರವಾಡದಲ್ಲಿ ಮತ್ತೆರಡು ಸರಗಳ್ಳತನ
ಹುಬ್ಬಳ್ಳಿ, ಆಗಸ್ಟ್, 29: ಸ್ಥಳೀಯ ಪ್ರಗತಿ ಕಾಲೋನಿ ಮತ್ತು ಧಾರವಾಡದ ಸತ್ತೂರ ಬಳಿ ಸರಗಳ್ಳರು ಇಬ್ಬರು ಮಹಿಳೆಯರ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಉಣಕಲ್- ಹೊಸೂರ ಬೈಪಾಸ್ ರೋಡ್, ಪ್ರಗತಿ ಕಾಲೋನಿ ಹತ್ತಿರ ಸುಜಾತಾ ಸುಭಾಸ ಪವಾರ ಎಂಬುವರು ಭಾನುವಾರ ರಾತ್ರಿ 10ಕ್ಕೆ ರಸ್ತೆಯಲ್ಲಿ ಹೋಗುತ್ತಿರುವಾಗ ಎದುರಿನಿಂದ ಬೈಕ್ ನಲ್ಲಿ ಬಂದ ಸರಗಳ್ಳರು ಅವರ ಕುತ್ತಿಗೆಯಲ್ಲಿದ್ದ 35 ಗ್ರಾಂ ತೂಕದ ಮಂಗಳಸೂತ್ರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.[ಎಂಎಂ ಕಲಬುರ್ಗಿ ಹತ್ಯೆ, ಶೀಘ್ರದಲ್ಲೇ ಆರೋಪಿಗಳ ಬಂಧನ : ಸಿಎಂ]

ಧಾರವಾಡ: ವಿದ್ಯಾಗಿರಿಯ ಸತ್ತೂರ ಕಾಲೋನಿ ನಿವಾಸಿ ಶ್ರೀಲಕ್ಷ್ಮೀ ಸುರೇಶಬಾಬು ಯಾದ್ರಿ ಭಾನುವಾರ ಬೆಳಿಗ್ಗೆ ತಮ್ಮ ಮನೆಯಿಂದ ಸುವರ್ಣ ಆರ್ಟ್ಸ್ ಕಾಲೇಜಿನ ಎದುರಿಗೆ ಹೋಗುತ್ತಿದ್ದರು. ಆಗ ಎದುರಿನಿಂದ ಬೈಕ್ ನಲ್ಲಿ ಬಂದ ಸರಗಳ್ಳರು ಶ್ರೀಲಕ್ಷೀ ಅವರ ಕೊರಳಿಗೆ ಕೈಹಾಕಿ, 40 ಗ್ರಾಂ ತೂಕದ ಬಂಗಾರದ ಮಂಗಳ ಸೂತ್ರ ಹಾಗೂ 10 ಗ್ರಾಂ ತೂಕದ ಚೈನನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂಜುಕೋರರ ಬಂಧನ: ಸ್ಥಳೀಯ ಕಸಬಾಪೇಟ ಪೊಲೀಸರು ಇಸ್ಪೀಟ್ ಆಡುತ್ತಿದ್ದ 30 ಜೂಜುಕೋರರನ್ನು ಬಂಧಿಸಿದ್ದಾರೆ.
ಹಳೇಹುಬ್ಬಳ್ಳಿಯ ಸದರಸೋಫಾ ನಿವಾಸಿ ಶಬ್ಬೀರ್ ನೂರ್ ಅಹ್ಮದ್ ವಡ್ಡು ಎಂಬಾತ ಗುಂಪು ಮಾಡಿಕೊಂಡು ಹಳೇಹುಬ್ಬಳ್ಳಿಯ ಮಾವನೂರ ರಸ್ತೆಯ ಫತೇಶಾವಲಿ ಹಾಲ್ ಬಳಿ ಜೂಜಾಡುತ್ತಿದ್ದಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಜೂಜಾಟಕ್ಕೆ ಬಳಸಿದ 8,600 ನಗದು ಇತರೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಸಬಾ ಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.['ಧೈರ್ಯವಿದ್ದರೆ ನಾನೇ ಮುಂದಿನ ಸಿಎಂ ಎಂದು ಈಶ್ವರಪ್ಪ ಹೇಳಲಿ']
ನಿಯಮ ಉಲ್ಲಂಘನೆ: ಸಂಚಾರ ನಿಯಮ ಉಲ್ಲಂಘನೆ ಮಾಡಿದ 114 ಕೇಸ್ ದಾಖಲಿಸಿ 11,800 ದಂಡ ವಸೂಲಿ ಮಾಡಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications