ಅವಸಾನದತ್ತ ಸಾಗುತ್ತಿದೆ 110 ವರ್ಷಗಳ ಇತಿಹಾಸವುಳ್ಳ ಉಣಕಲ್ ಕೆರೆ
ಹುಬ್ಬಳ್ಳಿ, ಸೆಪ್ಟೆಂಬರ್ 28 : ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ನಡುವೆ ಇರುವ ಉಣಕಲ್ ಪ್ರದೇಶದಲ್ಲಿ 262 ಎಕರೆಗಳಲ್ಲಿ ಹರಡಿರುವ ಉಣಕಲ್ ಕೆರೆ ಅಥವಾ ಚನ್ನಬಸವ ಸಾಗರ ಅತ್ಯುತ್ತಮ ಪಿಕ್ನಿಕ್ ತಾಣಗಳಲ್ಲಿ ಒಂದಾಗಿದೆ. ಪ್ರತಿದಿನ ನೂರಾರು ಜನರನ್ನು ಆಕರ್ಷಿಸುತ್ತದೆ. ಆದರೆ ಸರಿಯಾದ ಮೂಲಸೌಕರ್ಯಗಳ ಕೊರತೆಯಿಂದ ಅವಸಾನದತ್ತ ಸಾಗುತ್ತಿದೆ.
ಪ್ರವಾಸಿಗರು , ಶಾಂತಿಯುತ ಮತ್ತು ಸುಂದರ ಪರಿಸರವನ್ನು ಆಸ್ವಾಧಿಸುವುದಕ್ಕಾಗಿ 110 ವರ್ಷಗಳಷ್ಟು ಹಳೆಯದಾದ ಜನಪ್ರಿಯ ಉಣಕಲ್ ಕೆರೆಗೊಮ್ಮೆ ಭೇಟಿ ಕೊಡಬೇಕು. ಈ ಕೆರೆ ಹುಬ್ಬಳ್ಳಿಯ ಅತ್ಯಂತ ಆಕರ್ಷಣೆಗಳಲ್ಲಿ ಒಂದಾಗಿದೆ. ಮನರಂಜನಾ ಚಟುವಟಿಕೆಗಳಿಲ್ಲದೇ, ಪ್ರವಾಸಿಗರು ಸಂಜೆ ಸಮಯದಲ್ಲಿ ಸುಂದರ ಸೂರ್ಯಸ್ತವನ್ನು ವೀಕ್ಷಿಸಲು ಅವಕಾಶವಿದೆ. ಸರೋವರದ ಮಧ್ಯದಲ್ಲಿ ಇರಿಸಲಾಗಿರುವ ಸ್ವಾಮಿ ವಿವೇಕಾನಂದರ ವಿಗ್ರಹ ಈ ಸ್ಥಳದ ಪ್ರಮುಖ ಆಕರ್ಷಣೆಯಾಗಿದೆ.
ಆದರೆ, ಹಲವು ದಿನಗಳಿಂದ ಕೆರೆ ಅಭಿವೃದ್ಧಿ ಕಾಣದೆ ಅವಸಾನದ ಅಂಚನ್ನು ತಲುಪಲು ಸಮೀಸುತ್ತಿದೆ. ಹಿಂದೆ, ಹುಬ್ಬಳ್ಳಿ ನಗರಕ್ಕೆ ಈ ಜಲಮೂಲದಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿತ್ತು, ಮಲಪ್ರಭಾ ನದಿ ನೀರಿನ ಯೋಜನೆ ಪ್ರಾರಂಭವಾದ ನಂತರ, ಉಣಕಲ್ ಸರೋವರವನ್ನು ಪಿಕ್ನಿಕ್ ತಾಣವಾಗಿ ಅಭಿವೃದ್ಧಿ ಮಾಡಲಾಯಿತು. ಆದರೆ, ಸ್ಥಳೀಯ ಜನ ಪ್ರತಿನಿಧಿಗಳ ಹಾಗೂ ಅಧಿಕಾರಗಳ ನಿರ್ಲಕ್ಷ್ಯಕ್ಕೆ ಒಳಗಾಗಿ ಈಗ ಕೆರೆ ಸಂಪೂರ್ಣ ಹಾಳಾಗಿದೆ.

ಕೆರೆ ಅಭಿವೃದ್ದಿ ಹಣ ದುರ್ಬಳಕೆ ಆರೋಪ
ಜನ ಪ್ರತಿನಿಧಿಗಳು,ಅಧಿಕಾರಿಗಳು ಉಣಕಲ್ ಕೆರೆ ಅಭಿವೃದ್ಧಿ ಕೆಲಸಕ್ಕಾಗಿ ಬಿಡುಗಡೆ ಮಾಡಿರುವ ಕೋಟ್ಯಂತರ ರೂ. ಹಣವನ್ನು ಗುಳುಂ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಧಾರವಾಡ ಸೌಂದರ್ಯ ಹೆಚ್ಚಿಸಲು ಸ್ಮಾರ್ಟ್ ಸಿಟಿ ಯೋಜನೆ ಅಡಿ ಕೆರೆ ಅಭಿವೃದ್ಧಿ ಮಾಡುತ್ತೇವೆ ಅಂತ ಹೇಳಲಾಗಿತ್ತು. ಆದರೆ, ಇದುವರೆಗೆ ಯಾವುದೇ ಅಭಿವೃದ್ಧಿಯನ್ನು ಹೊಂದಿಲ್ಲ.

ಕೆರೆ ಅಂದವನ್ನು ಕಸಿಕೊಳ್ಳುತ್ತಿರುವ ಕಸದ ರಾಶಿ
ಕೆರೆಯಲ್ಲಿ ಸಂಪೂರ್ಣವಾಗಿ ಜಲ ಕಳೆ ಬೆಳೆದಿದ್ದು, ಪ್ರವಾಸಿಗರು ಹಾಗೂ ಸ್ಥಳೀಯರು ಬಾರದಂತಹ ಸ್ಥಿತಿ ನಿರ್ಮಾಣವಾಗಿದೆ. ಆದರೆ, ಇಲ್ಲಿ ಅನುಕೂಲ ಆಗುವಂತ ಕಿಂಚಿತ್ತೂ ಅಭಿವೃದ್ಧಿ ಕೂಡ ಆಗಿಲ್ಲ. ಎಲ್ಲೆಂದರಲ್ಲಿ ಬಿದ್ದಿರುವ ಫ್ಲೋಟಿಂಗ್ ಪ್ಲಾಂಟ್ ಉಪಕರಣ, ಬೇಕಾಬಿಟ್ಟಿಯಾಗಿ ಬಿದ್ದಿರುವ ಕಾರಂಜಿ ಮಷಿನ್, ನಿರ್ವಹಣೆ ಆಗದೇ ಉಳಿದಿರುವ ಕಸಗಳು ಕೆರೆಯ ಕಡೆಗಣನೆಯನ್ನು ಎತ್ತಿ ತೋರಿಸುತ್ತವೆ.

ಚನ್ನಬಸವಣ್ಣ ಭೇಟಿ ನೀಡಿದ್ದ ಸ್ಥಳ
ಕೆರೆ ದಂಡೆಯ ಮೇಲಿರುವ ಶ್ರೀ ಚನ್ನಬಸವೇಶ್ವರ ದೇವಸ್ಥಾನಕ್ಕೆ ಸಾವಿರಾರು ಭಕ್ತರು ನಡೆದುಕೊಳ್ಳುತ್ತಾರೆ . ಪ್ರತಿ ವರ್ಷ ಭಾರತ ಹುಣ್ಣಿಮೆಯಂದು ಜಾತ್ರೆ, ರಥೋತ್ಸವ ನಡೆಯುತ್ತದೆ. ಶ್ರಾವಣ ಮಾಸದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ, ಭಕ್ತಿಯಿಂದ ನಡೆಯುತ್ತವೆ. 12 ನೇ ಶತಮಾನದಲ್ಲಿ ಕಲ್ಯಾಣ ಕ್ರಾಂತಿ ನಡೆದ ನಂತರ ಬಸವಣ್ಣನ ಸೋದರಳಿಯ ಚನ್ನಬಸವಣ್ಣ ನೇತೃತ್ವದ ಶರಣರ ತಂಡ ಸಹ್ಯಾದ್ರಿಯ ಅರಣ್ಯ ಪ್ರದೇಶದ ಮಧ್ಯದ ಉಳ್ಳಾವಿಯತ್ತ ಸಾಗುತ್ತಿತ್ತು. ಈ ಪಯಣದ ನಡುವೆ ಉಣಕಲ್ ಕೆರೆ ದಂಡೆ ಮೇಲೆ ಕೆಲಕಾಲ ಉಳಿದು ಜನರಲ್ಲಿ ಸಾಮಾಜಿಕ ಜಾಗೃತಿ ಮೂಡಿಸಿದ್ದರು, ಈ ಹಿನ್ನೆಲೆಯಲ್ಲಿ ಉಣಕಲ್ ಕೆರೆ ದಂಡೆಯ ಮೇಲೆ ರೂಪಗೊಂಡಿರುವ ದೇವಸ್ಥಾನ ಬಸವ ಭಕ್ತರ ಪವಿತ್ರ ಯಾತ್ರಾ ಸ್ಥಳವಾಗಿಯೂ ಪ್ರಸಿದ್ಧಿ ಪಡೆದುಕೊಂಡಿದೆ.

ಕಳೆದ ವರ್ಷ ಚನ್ನಬಸವ ಸಾಗರ ಎಂದು ಮುರು ನಾಮಕರಣ
ಚನ್ನಬಸವೇಶ್ವರರು ವಿಶ್ರಾಂತಿ ಪಡೆದು ಹೋಗಿದ್ದ ಈ ಪ್ರದೇಶಕ್ಕೆ ಚನ್ನಬಸವ ಸಾಗರ ಎಂದು ನಾಮಕರಣ ಮಾಡಬೇಕೆಂದು ಭಕ್ತರ ಆಶಯವಾಗಿತ್ತು. ಪಾಲಿಕೆಯಲ್ಲಿಯೂ ಈ ಕುರಿತು ನಿರ್ಣಯ ಅಂಗೀಕರಿಸಲಾಗಿತ್ತು. ಆದರೆ ಎಂಟು ವರ್ಷ ಗತಿಸಿದರೂ ಮರು ನಾಮಕರಣ ಮಾಡದ ಹಿನ್ನಲೆ ಹುಬ್ಬಳ್ಳಿಯ ಶಂಕ್ರಗೌಡ ಪಾಟೀಲ, ವಿನಯ ಪರಮಾದಿ, ಶಿವಪ್ಪ ಪಟ್ಟಣಶೆಟ್ಟಿ ಅವರು ಸೇರಿ ಒಟ್ಟ 7 ಜನರು ನ್ಯಾಯಾಲಯದ ಮೊರೆ ಹೋಗಿದ್ದರು. ಕೋರ್ಟ್ ಕೆರೆಗೆ ಚನ್ನಬಸವಸಾಗರ ಎಂದು 2021ರ ಆಗಸ್ಟ್ನಲ್ಲಿ ಮರು ನಾಮಕರಣ ಮಾಡಲಾಗಿತ್ತು.
ಹುಬ್ಬಳ್ಳಿ-ಧಾರವಾಡ ಅವಳಿ ನಗರದ ನೆಚ್ಚಿನ ತಾಣಗಳಲ್ಲಿ ಉಣಕಲ್ ಕರೆಯು ಒಂದಾಗಿದ್ದು, ಕೆರೆ ಮಾಲಿನ್ಯದಿಂದ ಹಾಳಾಗುವುದನ್ನು ತಪ್ಪಿಸಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications